ತಾನೇ ತೋಡಿದ ಸ್ಟಿಂಗ್ ಹಳ್ಳಕ್ಕೆ ಬಿದ್ದ ರೌಡಿ ಕುಳ್ಳ ದೇವರಾಜ್!
ಬೆಂಗಳೂರು, ಡಿ. 01: ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಕೊಲೆಗೆ ಸ್ಕೆಚ್ ಹಾಕಿದ ಪ್ರಕರಣ ರೋಚಕ ಟ್ವಿಸ್ಟ್ ಪಡೆದುಕೊಂಡಿದೆ. ಎಸ್.ಆರ್. ವಿಶ್ವನಾಥ್ ಅವರ ಕೊಲೆ ಮಾಡುವ ಬಗ್ಗೆ ಮಾತನಾಡಿರುವ ವಿಡಿಯೋ ರೆಕಾರ್ಡ್ ಮಾಡಿದ ಕುಳ್ಳ ದೇವರಾಜ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇನ್ನು ಯಲಹಂಕ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಕೊಲೆ ಮಾಡುವ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಮುಖಂಡ, ಪರಾಜಿತ ಅಭ್ಯರ್ಥಿ ಗೋಪಾಲಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಎಸ್.ಆರ್. ವಿಶ್ವನಾಥ್ ಆಪ್ತನೇ ಎದುರಾಳಿ ಅಭ್ಯರ್ಥಿಯ ರಹಸ್ಯ ಕಾರ್ಯಾಚರಣೆ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಎಸ್.ಆರ್. ವಿಶ್ವನಾಥ್ ಬಿಡಿಎ ಅಧ್ಯಕ್ಷ. ಯಲಹಂಕ ಕ್ಷೇತ್ರದ ಶಾಸಕ. ಇವರ ವಿರುದ್ಧ ಸ್ಪರ್ಧಿಸಿದ್ದ ಗೋಪಾಲಕೃಷ್ಣ ಎರಡು ಬಾರಿ ಸೋತಿದ್ದರು. ಇತ್ತೀಚೆಗೆ ಗೋಪಾಲಕೃಷ್ಣ ಅವರನ್ನು ಸಂಪರ್ಕಿಸಿದ್ದ ಕುಳ್ಳ ದೇವರಾಜ್, ಎಸ್.ಆರ್. ವಿಶ್ವನಾಥ್ ಹತ್ಯೆ ಸ್ಕೆಚ್ ಬಗ್ಗೆ ಕೆಣಕಿದ್ದಾರೆ. ಎದುರಾಳಿ ಅಭ್ಯರ್ಥಿ ವಿಶ್ವನಾಥ್ ಹತ್ಯೆ ಬಗ್ಗೆ ಆಡಿರುವ ಮಾತುಗಳನ್ನು ಕುಳ್ಳ ದೇವರಾಜ್ ವಿಡಿಯೋ ಮಾಡಿಕೊಂಡಿದ್ದಾನೆ. ಈ ವಿಡಿಯೋ ಸಿಸಿಬಿ ಕೈ ಸೇರುತ್ತಿದ್ದಂತೆ ಕಾಂಗ್ರೆಸ್ ನಾಯಕ ಗೋಪಾಲಕೃಷ್ಣ ಹಾಗೂ ವಿಡಿಯೋ ಮಾಡಿದ್ದ ಕುಳ್ಳ ದೇವರಾಜ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಗೋಪಾಲಕೃಷ್ಣನನ್ನು ಮಂಗಳವಾರ ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದು, ಆತ ನೀಡಿದ ಮಾಹಿತಿ ಮೇರೆಗೆ ಕುಳ್ಳ ದೇವರಾಜ್ ನನ್ನು ವಶಕ್ಕೆ ಪಡೆದಿದ್ದಾರೆ. ಯಲಹಂಕ ಶಾಸಕ ವಿಶ್ವನಾಥ್ ಅವರ ಬೆಂಬಲಿಗನಾಗಿರುವ ಕುಳ್ಳ ದೇವರಾಜ್ ತನ್ನ ಗುರುವಿಗೆ ಹತ್ತಿರವಾಗಲು ಗೋಪಾಲಕೃಷ್ಣನ ಬಳಿ ಹೋಗಿ ಹತ್ಯೆ ಮಾಡುವ ಪ್ಲಾನ್ ಕೊಟ್ಟು ಮಾತುಕತೆ ಮಾಡಿದ್ದಾನೆ. ಗೋಪಾಲಕೃಷ್ಣಗೆ ಕುಳ್ಳ ದೇವರಾಜ್ ತೋಡಿದ್ದ ಹಳ್ಳಕ್ಕೆ ಆತನೇ ಬಿದ್ದಂತಾಗಿದೆ. ಎಸ್ ಆರ್. ವಿಶ್ವನಾಥ್ ವಿರುದ್ಧ ವಿಡಿಯೋ ಮಾಡಿಸಿ ಗೋಪಾಲಕೃಷ್ಣನನ್ನು ಬಂಧಿಸುವ ಪ್ಲಾನ್ ಮಾಡಿದ್ದ ದೇವರಾಜ್ ವಿಚಾರಣೆ ವೇಳೆ ಸತ್ಯ ಬಾಯಿಬಿಟ್ಟಿದ್ದಾನೆ.
ಇನ್ನು ಗೋಪಾಲಕೃಷ್ಣ ಹತ್ಯೆ ಬಗ್ಗೆ ಆಡಿರುವ ಮಾತುಗಳ ಸಂಗತಿಯನ್ನು ಸಿಸಿಬಿ ಅಧಿಕಾರಿಯೊಬ್ಬರು ಶಾಸಕರ ಭವನದಲ್ಲಿ ವಿಶ್ವನಾಥ್ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗೋಪಾಲಕೃಷ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆತ ನೀಡಿದ ಮಾಹಿತಿ ಮೇರೆಗೆ ಕುಳ್ಳ ದೇವರಾಜ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ಸತ್ಯಾಂಶ ಬಯಲಿಗೆ ಬಂದಿದೆ. ಗೋಪಾಲಕೃಷ್ಣನನ್ನು ರಾಜಕೀಯವಾಗಿ ಮುಗಿಸಿ ವಿಶ್ವನಾಥ್ ಗೆ ಹತ್ತಿರವಾಗಲು ಕುಳ್ಳ ದೇವರಾಜ್ ಮಾಡಿದ ಪ್ಲಾನ್ ಇದೀಗ ಆತನನ್ನೇ ಕಂಬಿ ಎಣಿಸುವಂತೆ ಮಾಡಿದೆ.

ಪ್ರತಿಕ್ರಿಯೆಗೆ ವಿಶ್ವನಾಥ್ ನಕಾರ:
ಹತ್ಯೆಗೆ ಸ್ಕೆಚ್ ಹಾಕಿರುವ ಬಗ್ಗೆ ಶಾಸಕ ಎಸ್. ಆರ್. ವಿಶ್ವನಾಥ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಸಂಜೆ ವೇಳೆಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸುತ್ತೇನೆ. ಎಲ್ಲದಕ್ಕೂ ಅಲ್ಲಿಯೇ ಉತ್ತರ ಕೊಡುತ್ತೆನೆ ಎಂದು ಎಂಎಲ್ ಸಿ ಚುನಾವಣೆ ಸಂಬಂಧ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕುಳ್ಳದೇವರಾಜ್ ವಿಚಾರಣೆ:
ಶಾಸಕ ಎಸ್.ಅರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ರೂಪಿಸಿರುವ ಸಂಬಂಧ ವಿಡಿಯೋ ಮಾಡಿದ್ದ ಕುಳ್ಳ ದೇವರಾಜ್ ನನ್ನು ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ರೌಡಿ ಶೀಟರ್ ಕುಳ್ಳ ದೇವರಾಜ್ ಈ ಹಿಂದೆ ಉದ್ಯಮಿ ಭರತ್ ಶೆಟ್ಟಿಗೆ ಧಮ್ಕಿ ಹಾಕಿದ್ದ. ಭೂ ಕಬಳಿಕೆ ಪ್ರಕರಣದಲ್ಲಿ ಪ್ರಾಣ ಬೆದರಿಕೆ ಹಾಕಿದ್ದ. ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ಭರತ್ ಶೆಟ್ಟಿ ದೂರು ನೀಡಿದ್ದರು. ಸ್ಟಿಂಗ್ ವಿಡಿಯೋ ಮಾಡಿ ಇಬ್ಬರ ನಡುವೆ ದ್ವೇಷ ಬಿತ್ತನೆ ಮಾಡಿದ ಆರೋಪದಡಿ ದೇವರಾಜ್ ನನ್ನು ವಿಚಾರಣೆ ನಡೆಸುತ್ತಿದ್ದು ಸಂಜೆ ವೇಳೆಗೆ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ.
Recommended Video

ಹತ್ಯೆ ಸಂಚು ಕುರಿತು ಗಂಭೀರ ತನಿಖೆ
ಶಾಸಕ ಎಸ್.ಆರ್. ವಿಶ್ವನಾಥ್ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು, ಎಂಬ ವಿಷಯವನ್ನು, ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಈ ಬಗ್ಗೆ, ಸೂಕ್ತ ತನಿಖೆ ನಡೆಸಲಾಗುವುದು ಎಂದು, ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
"ಈ ಬಗ್ಗೆ ಸ್ವತಃ ವಿಶ್ವನಾಥ್ ಅವರು ನನ್ನ ಜೊತೆ ಮಾತನಾಡಿದ್ದಾರೆ. ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿದೆ. ಶಾಸಕರ ಮನವಿಯಂತೆ ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದೂ ಗೃಹ ಸಚಿವರು ಹೇಳಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications