ಕಾಂಗ್ರೆಸ್ ಎಂದರೆ ಸಿಡಿ ತಯಾರು ಮಾಡುವ ಗ್ಯಾಂಗ್; ಎಂಪಿಆರ್
ಬೆಂಗಳೂರು, ಮಾರ್ಚ್ 24: " ಕಾಂಗ್ರೆಸ್ ಎಂದರೆ ಸಿಡಿ ತಯಾರು ಮಾಡುವ ಗ್ಯಾಂಗ್. ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ" ಎಂದು ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಹೇಳಿದರು.
Recommended Video
ಬುಧವಾರ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ವಿಚಾರ ಇಟ್ಟುಕೊಂಡು ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಡಿ ಗದ್ದಲಕ್ಕೆ ಮಂಗಳವಾರದ ವಿಧಾನಸಭೆ ಕಲಾಪ ಬಲಿ
"ಯಾವ ಪುರುಷಾರ್ಥಕ್ಕೆ ಅಹೋರಾತ್ರಿ ಧರಣಿ ಮಾಡುತ್ತೀರಿ? ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು. ಮೇಟಿ ಅವರ ಹಗರಣ ಆಗ ಇರಲಿಲ್ಲವೇ?" ಎಂದು ಪ್ರಶ್ನಿಸಿದರು.
ವಿಧಾನಸಭೆ ಕಲಾಪ; ಪಟ್ಟು ಬಿಡದ ಕಾಂಗ್ರೆಸ್, ಜೆಡಿಎಸ್ನಿಂದ ಸಭಾತ್ಯಾಗ
"ನಾವು ಹೆಣ್ಣು ಮಕ್ಕಳನ್ನು ಗೌರವಿಸುತ್ತೇವೆ. ಆ ಯುವತಿ ಬಂದು ದೂರು ಕೊಡದೇ ಓಡಾಡುತ್ತಿದ್ದಾರೆ. ಯುವತಿ ಇನ್ನೂ ಬಂದು ದೂರು ಕೊಟ್ಟಿಲ್ಲ" ಎಂದು ರೇಣುಕಾಚಾರ್ಯ ಹೇಳಿದರು.
ಸಿಡಿ ಗರ್ಲ್ ಪೋಷಕರಿಂದ ಹೇಳಿಕೆ ದಾಖಲಿಸಿಕೊಂಡ ಎಸ್ಐಟಿ ಪೊಲೀಸರು
ಮಂಗಳವಾರದ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ ಕಾರಣ ಒಂದು ದಿನದ ಕಲಾಪ ವ್ಯರ್ಥವಾಯಿತು. ಕೈಯಲ್ಲಿ ಸಿಡಿ ಹಿಡಿದು, ಸಿಡಿ ಸರ್ಕಾರ, ಸಿಡಿ ಸಿಡಿ ಎಂದು ಘೋಷಣೆಗಳನ್ನು ಕೂಗುತ್ತಾ ಸದಸನದ ಬಾವಿಗೆ ಬಂದು ಸದಸ್ಯರು ಪ್ರತಿಭಟನೆ ಮಾಡಿದರು.
ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರರಕರಣ ದಾಖಲು ಮಾಡಬೇಕು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು. ಕೋರ್ಟ್ ಮೊರೆ ಹೋಗಿರುವ 6 ಸಚಿವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಸದನದಲ್ಲಿ ಪ್ರತಿಭಟನೆ ಮಾಡುತ್ತಿದೆ.