ನಯಾಪೈಸೆ ಕೊಟ್ಟಿಲ್ಲ, ಮಸ್ತಕಾಭಿಷೇಕಕ್ಕೆ ಮೋದಿ ಯಾಕೆ ಬರ್ಬೇಕು? ಕಾಂಗ್ರೆಸ್ ಅಪಸ್ವರ
Recommended Video

ಹಾಸನ, ಫೆ 15: ಶ್ರವಣಬೆಳಗೊಳದಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬರುವುದು ಅಂತಿಮವಾಗುತ್ತಿದ್ದಂತೇ, ಹಾಸನ ಜಿಲ್ಲಾ ಕಾಂಗ್ರೆಸ್ ಘಟಕದ ಕೆಲವು ಮುಖಂಡರು ಅಪಸ್ವರ ಎತ್ತಲಾರಂಭಿಸಿದ್ದಾರೆಂದು ತಿಳಿದುಬಂದಿದೆ.
ಸೋಮವಾರ (ಫೆ 19) ಮಧ್ಯಾಹ್ನ 12.30ಕ್ಕೆ ವಿಶೇಷ ಹೆಲಿಕಾಪ್ಟರ್ ನಲ್ಲಿ ಶ್ರವಣಬೆಳಗೊಳಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. ಮೋದಿಯವರ ಪ್ರವಾಸ ಖಚಿತವಾದ ಹಿನ್ನಲೆಯಲ್ಲಿ ಎಸ್ಪಿಜಿ (ವಿಶೇಷ ಭದ್ರತಾ ಪಡೆ) ಅಧಿಕಾರಿಗಳು, ಜಿಲ್ಲಾಡಳಿತದೊಂದಿಗೆ ಶ್ರವಣಬೆಳಗೊಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
In Pics: ಬಾಹುಬಲಿ ಮಹಾಮಜ್ಜನಕ್ಕೆ ರಾಷ್ಟ್ರಪತಿ ಕೋವಿಂದ್ ಚಾಲನೆ
ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕಕ್ಕೆ ಆರ್ಥಿಕ ನೆರವು ನೀಡುವಂತೆ, ರಾಜ್ಯ ಸರಕಾರ ಮತ್ತು ಹಾಸನ ಸಂಸದ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ್ರು ಮೋದಿಯವರಲ್ಲಿ ಹಲವು ಬಾರಿ ಮನವಿ ಮಾಡಿದ್ದರು.
ಆದರೆ, ಕೇಂದ್ರ ಸರಕಾರದಿಂದ ಯಾವುದೇ ಹಣ ಬಿಡುಗಡೆಯಾಗಲಿಲ್ಲ. ಹಲವು ಬಾರಿ ಮನವಿ ಮಾಡಿದ ನಂತರವೂ ಕೇಂದ್ರದಿಂದ ಮಹಾಮಸ್ತಕಾಭಿಷೇಕಕ್ಕೆ ಆರ್ಥಿಕ ನೆರವು ಬಂದಿಲ್ಲ. ಸಹಾಯ ಮಾಡದ ಪ್ರಧಾನಿ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಯಾಕೆ ಬರಬೇಕೆಂದು ಜಿಲ್ಲಾ ಮಟ್ಟದ ಕಾಂಗ್ರೆಸ್ ಮುಖಂಡರು ಅಪಸ್ವರ ಎತ್ತುತ್ತಿದ್ದಾರೆಂದು ವರದಿಯಾಗಿದೆ.
ಜೈನಕಾಶಿಯಲ್ಲಿ 12 ವರ್ಷಕ್ಕೊಮ್ಮೆ ಮಹಾವಿರಾಗಿಗೆ ನಡೆಯುವ ಮಹಾಮಸ್ತಕಾಭಿಷೇಕಕ್ಕೆ ಇನ್ನು ಎರಡು ದಿನ ಬಾಕಿ ಉಳಿದಿದ್ದು, ಆರೋಗ್ಯದ ಸಮಸ್ಯೆಯ ನಡುವೆಯೂ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿವರು, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾಡಳಿತದ ಜೊತೆ ಸೇರಿ ಕಾರ್ಯಕ್ರಮದ ಯಶಸ್ಸಿಗೆ ದುಡಿಯುತ್ತಿದ್ದಾರೆ. ಮುಂದೆ ಓದಿ..

ಪ್ರಧಾನಿ ಆಗಮಿಸುತ್ತಿರುವುದು ಅತೀವ ಸಂತಸ ತಂದಿದೆ
ಮಹಾಮಸ್ತಕಾಭಿಷೇಕಕ್ಕೆ ಪ್ರಧಾನಿಯವರನ್ನು ಕರೆತರಲು ಕಾರ್ಯಕ್ರಮದ ಸ್ವಾಗತ ಸಮಿತಿ ಮತ್ತು ಚಾರುಕೀರ್ತಿ ಶ್ರೀಗಳು ವಿಶೇಷ ಪರಿಶ್ರಮ ಹಾಕಿದ್ದರು. ಫೆ.19 ರಂದು ಪ್ರಧಾನಿ ಆಗಮಿಸುತ್ತಿರುವುದು ಅತೀವ ಸಂತಸ ತಂದಿದೆ ಎಂದು ಶ್ರವಣಬೆಳಗೊಳ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದರು. ಆದರೆ, ಆರ್ಥಿಕ ನೆರವು ನೀಡದ ಮೋದಿ, ಯಾಕೆ ಬರಬೇಕು ಎನ್ನುವ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೂಗು, ಮೋದಿ ಆಗಮನದ ದಿನದಂದು ಎಷ್ಟರ ಮಟ್ಟಿಗೆ ಸದ್ದು ಮಾಡಲಿದೆ ಎನ್ನುವ ಭಯ/ಕುತೂಹಲ ಕಾಡಲಾರಂಭಿಸಿದೆ.

ಹಿಂದಿನಿಂದಲೂ ಕೇಂದ್ರ ಆರ್ಥಿಕ ನೆರವು ನೀಡುವ ಪದ್ದತಿಯಿದೆ
ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಹಿಂದಿನಿಂದಲೂ ಕೇಂದ್ರ ಸರಕಾರ ಆರ್ಥಿಕ ನೆರವು ನೀಡುವ ಪದ್ದತಿಯಿದೆ. ಅದರಂತೇ, ರಾಜ್ಯ ಸರಕಾರ ಮತ್ತು ದೇವೇಗೌಡರು ಪ್ರತ್ಯೇಕವಾಗಿ ಪ್ರಧಾನಿ ಮೋದಿಗೆ ಮನವಿ ಸಲ್ಲಿಸಿದ್ದರು. ಆದರೆ, ಕೇಂದ್ರದಿಂದ ಕಾರ್ಯಕ್ರಮಕ್ಕೆ ಯಾವುದೇ ಹಣ ಬಿಡುಗಡೆಯಾದ ಬಗ್ಗೆ ಮಾಹಿತಿಯಿಲ್ಲ.

ಮೋದಿ ಈ ವೇದಿಕೆಗೆ ಬಂದು ಮಾತನಾಡುವುದು ಎಷ್ಟು ಸರಿ
ಕೇಂದ್ರದಿಂದ ಹಣ ಬರದೇ ಇರುವ ಹಿನ್ನಲೆಯಲ್ಲಿ ಮೋದಿ ಈ ವೇದಿಕೆಗೆ ಬಂದು ಮಾತನಾಡುವುದು ಎಷ್ಟು ಸರಿ ಎಂದು ಕಾಂಗ್ರೆಸ್ ಮುಖಂಡರು ತಕರಾರು ಎಬ್ಬಿಸಲಾರಂಭಿಸಿದ್ದಾರೆಂದು ವರದಿಯಾಗಿದೆ. ಆದರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಜಿಲ್ಲಾಡಳಿತ ಮೋದಿ ಸ್ವಾಗತಕ್ಕೆ ಭರ್ಜರಿ ತಯಾರಿ ನಡೆಸುತ್ತಿದೆ.

ಕಾಂಗ್ರೆಸ್ ಸಚಿವರು ಇದುವರೆಗೂ ಯಾವುದೇ ಹೇಳಿಕೆಯನ್ನು ನೀಡಿಲ್ಲ
ಮೋದಿ ಆಗಮಿಸುತ್ತಿರುವುದಕ್ಕೆ ಮೇಲ್ಪಂಕ್ತಿಯ ಕಾಂಗ್ರೆಸ್ ನಾಯಕರಾಗಲಿ ಅಥವಾ ಸಚಿವರಾಗಲಿ ಇದುವರೆಗೂ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಕಳೆದ ವರ್ಷ ಫೆಬ್ರವರಿ ಮತ್ತು ಆಗಸ್ಟ್ ತಿಂಗಳಲ್ಲಿ ಪ್ರಧಾನಿಯವರನ್ನು ಭೇಟಿಯಾಗಿದ್ದ ದೇವೇಗೌಡರು ಒಮ್ಮೆ ಐನೂರು ಮತ್ತೊಮ್ಮೆ ನೂರು ಕೋಟಿ ಆರ್ಥಿಕ ನೆರವು ನೀಡಿ ಎಂದು ಮನವಿ ಮಾಡಿದ್ದರು.

ಎಲ್ಲಿ ನೋಡಿದರಲ್ಲಿ ಜನಸಾಗರ ಜೊತೆಗೆ, ಪೊಲೀಸ್ ಬಿಗಿ ಬಂದೋಬಸ್ತ್
ಹಾಸನ ಜಿಲ್ಲೆಯ ಪುಟ್ಟ ಪಟ್ಟಣ ಶ್ರವಣಬೆಳಗೊಳದಲ್ಲಿ ಈಗ ಎಲ್ಲಿ ನೋಡಿದರಲ್ಲಿ ಜನಸಾಗರ ಜೊತೆಗೆ, ಪೊಲೀಸ್ ಬಿಗಿ ಬಂದೋಬಸ್ತ್ನ ಹಿಡಿತಕ್ಕೆ ಸ್ಥಳೀಯರು ನಲುಗಿ ಹೋಗಿದ್ದಾರೆ. ಅದರಲ್ಲೂ ಪ್ರಧಾನಿ ಬರುವುದು ಖಚಿತವಾಗುತ್ತಿದ್ದಂತೇ, ಖಾಕಿ ಸರ್ಪಗಾವಲು ದುಪ್ಪಟ್ಟಾಗಿದೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications