2 New Railway Line: ಕರ್ನಾಟಕದ 06 ಜಿಲ್ಲೆಗಳಿಗೆ ಅನುಕೂಲಕರ 2 ರೈಲ್ವೆ ಯೋಜನೆಗಳ ಘೋಷಣೆ: ವಿ.ಸೋಮಣ್ಣ
ಬೆಂಗಳೂರು, ಮೇ 15: ಕರ್ನಾಟಕದಲ್ಲಿ ರೈಲ್ವೆ ಜಾಲ ಅಭಿವೃದ್ಧಿ ಪಡಿಸಲಾಗುತ್ತಿದೆ. ವಿದ್ಯುದೀಕರಣ ಜೊತೆಗೆ ಹೊಸ ಮಾರ್ಗ ದ್ವಿಪಥ ರೈಲು ಮಾರ್ಗ ನಿರ್ಮಿಸುವ ಕಾರ್ಯ ನಡೆಯುತ್ತಿದೆ. ಈ ಮಧ್ಯೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಹೊಸ ರೈಲು ಮಾರ್ಗ ಸೇವೆಗೆ ಕೇಂದ್ರ ಸರ್ಕಾರ ಹೊಸ ಯೋಜನೆಗಳನ್ನು ರೂಪಿಸಿದೆ. ರಾಜ್ಯದಲ್ಲಿ 235 ಕಿಲೋ ಮೀಟರ್ ಉದ್ದದ ಎರಡು ಹೊಸ ರೈಲ್ವೆ ಯೋಜನೆಗಳಿಗೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ ಎಂದು ಸಚಿವ ವಿ.ಸೋಮಣ್ಣ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ರೈಲ್ವೆ ಇಲಾಖೆಯು ಕರ್ನಾಟಕದಲ್ಲಿ ನೂತನ ರೈಲ್ವೆ ಮಾರ್ಗದ ಅಂತಿಮ ಸ್ಥಳ ಸಮೀಕ್ಷೆಗೆ ಒಪ್ಪಿಗೆ ನೀಡಿದೆ. ಇದರಿಂದ ಒಟ್ಟು ಸುಮಾರು 06 ಜಿಲ್ಲೆಗಳಿಗೆ ಸಹಾಯವಾಗಲಿದೆ. ರೈಲ್ವೆ ಮೂಲ ಸೌಕರ್ಯ ಅಭಿವೃದ್ಧಿಯಾಗಲಿದೆ. ಆಲಮಟ್ಟಿ- ಯಾದಗಿರಿ ರೈಲು ಮಾರ್ಗ ಹಾಗೂ ಭದ್ರಾವತಿ-ಚಿಕ್ಕಜಾಜೂರುವರೆಗೆ ಎರಡು ನೂತನ ರೈಲ್ವೆ ಮಾರ್ಗಗಳ ಕಾಮಗಾರಿಯನ್ನು ಶೀಘ್ರವೇ ಆರಂಭಿಸಲಾಗುವುದು. ಈ ದೃಷ್ಠಿಯಿಂದ, ಈ ಎರಡೂ ರೈಲ್ವೆ ಮಾರ್ಗಗಳ ಅಂತಿಮ ಸರ್ವೆ ಮಾಡಲು ಆದೇಶ ಹೊರಡಿಸಲಾಗಿದೆ ಎಂದು ಸಚಿವರು ಮಾಹಿತಿ ನಿಡಿದ್ದಾರೆ.

ರಾಜ್ಯದಲ್ಲಿ ರೈಲ್ವೆ ಮೂಲ ಸೌಕರ್ಯಗಳ ಹೆಚ್ಚಳ ಹಾಗೂ ನೂತನ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಬೆಂಬಲವಾಗಿ ನಿಂತಿರುವ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ರಾಜ್ಯದ ಜನತೆಯ ಪರವಾಗಿ ಸಚಿವರು ಧನ್ಯವಾದ ತಿಳಿಸಿದರು.
ಸರ್ವೇಗಾಗಿ 5.8 ಕೋಟಿ ರೂಪಾಯಿ ಮೀಸಲು
ಈ ಎರಡು ಹೊಸ ರೈಲ್ವೆ ಯೋಜನೆಗಳಿಂದ ಉತ್ತರ ಕರ್ನಾಟಕದ ಮೂರು ಹಾಗೂ ಮಧ್ಯ ಕರ್ನಾಟಕದ ಮೂರು ಜಿಲ್ಲೆಗಳಿಗೆ ಹೆಚ್ಚಿನ ಅನುಕೂಲ ಆಗಲಿದೆ. ಈ ಸರ್ವೆ ಕಾರ್ಯಕ್ಕೆಂದೆ ಸರ್ಕಾರ 5.8 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಹೆಚ್ಚುತ್ತಿರುವ ಜನಸಂಖ್ಯೆ, ಸಾರ್ವಜನಿಕ ಸಾರಿಗೆ ಮಹತ್ವ ಅರಿತ ಕೇಂದ್ರ ಸರ್ಕಾರ ರಾಜ್ಯದ ಅಗತ್ಯ ಬೇಡಿಕೆಗಳಿಗೆ ಸ್ಪಂದಿಸಿದೆ.

ಪ್ರಾದೇಶಿಕ ರೈಲ್ವೆ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ. ಎರಡು ಮಾರ್ಗಗಳಿಗೆ ಒಪ್ಪಿಗೆ ನೀಡಿದ್ದಲ್ಲದೇ ಅಂತಿಮ ಸ್ಥಳ ಸಮೀಕ್ಷೆ ಕಾರ್ಯಕ್ಕೆ ಅನುದಾನ ನೀಡಲಾಗಿದೆ. ಆಲಮಟ್ಟಿ-ಯಾದಗಿರಿ ನೂತನ ರೈಲು ಮಾರ್ಗದಿಂದ ಉತ್ತರ ಕರ್ನಾಟಕದ ಯಾದಗಿರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಅನುಕೂಲವಾಗಲಿದೆ.
ಇನ್ನೂ ಭದ್ರಾವತಿ-ಚಿಕ್ಕಜಾಜೂರು ನೂತನ ರೈಲು ಮಾರ್ಗದಿಂದ ಮಧ್ಯಾ ಕರ್ನಾಟಕದ ಬಾಗಲಕೋಟೆ, ಚಿತ್ರದುರ್ಗ ಹಾಗೂ ಶಿವಮೊಗ್ಗ ಜಿಲ್ಲೆಗಳ ಜನರಿಗೆ ಹೆಚ್ಚಿನ ಸಹಾಯವಾಗುತ್ತದೆ.
ಎರಡು ರೈಲ್ವೆ ಯೋಜನೆಗಳ ಸಂಕ್ಷಿಪ್ತ ಮಾಹಿತಿ
1. ಆಲಮಟ್ಟಿ-ಯಾದಗಿರಿ ರೈಲು ಮಾರ್ಗ
* ಸೇವೇ ಉದ್ದ-162 ಕಿಲೋ ಮೀಟರ್
* ಒಟ್ಟು ವೆಚ್ಚ 4.5 ಕೋಟಿ ರೂಪಾಯಿ
* ಸೇವೇ ಉದ್ದ-73 ಕಿಲೋ ಮೀಟರ್
* ಒಟ್ಟು ವೆಚ್ಚ 1.823 ಕೋಟಿ ರೂಪಾಯಿ
* ಒಟ್ಟು 235 ಕಿಲೋ ಮೀಟರ್ ಸರ್ವೇ ನಡೆಯಬೇಕಿದೆ. 5.875 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications