ಇವಿಎಂ ನಿರ್ವಹಣೆಯಲ್ಲಿ ರಾಜ್ಯದ ವಿಶೇಷತೆ ಏನೂ ಗೊತ್ತಾ?
ಬೆಂಗಳೂರು, ಜ. 24: ವಿದ್ಯುನ್ಮಾನ ಮತ ಯಂತ್ರ(EVM)ಗಳ ವಿಚಾರ ಆಗಾಗ ಚರ್ಚಗೆ ಬರುತ್ತಲೇ ಇರುತ್ತದೆ. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಇವಿಎಂ ವಿಚಾರವಾಗಿ ಆಗಾಗ ಬಿಜೆಪಿ ಮೇಲೆ ಆರೋಪ ಮಾಡುತ್ತಲೇ ಇರುತ್ತವೆ. ಇವಿಎಂಗಳನ್ನು ಹ್ಯಾಕ್ ಮಾಡಲಾಗುತ್ತದೆ ಎಂಬುದನ್ನು ತೋರಿಸುವಂತೆ ಕೇಂದ್ರ ಚುನಾವಣಾ ಆಯೋಗ ಕೂಡ ರಾಜಕೀಯ ಪಕ್ಷಗಳು, ಸಂಘಟನೆಗಳಿಗೆ ಮುಕ್ತ ಅವಕಾಶವನ್ನೂ ಕೊಟ್ಟಿದೆ. ಆದರೆ ಆರೋಪ ಸಾಬೀತು ಪಡಿಸಲು ಮಾತ್ರ ರಾಜಕೀಯ ಪಕ್ಷಗಳು ಮುಂದಾಗಿಲ್ಲ.
ಕರ್ನಾಟಕ ರಾಜ್ಯ 'ಇವಿಎಂ'ಗಳ ನಿರ್ವಹಣೆಯಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಚುನಾವಣಾ ಆಯೋಗ ಗುರುತಿಸಿದೆ. ಇವಿಎಂ ನಿರ್ವಹಣೆಗಾಗಿ ಕರ್ನಾಟಕದ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ ಅವರಿಗೆ ವಿಶೇಷ ಪ್ರಶಸ್ತಿ ಪ್ರಕಟ ಮಾಡಿದೆ.
ಪ್ರತಿ ವರ್ಷವು ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಭಾರತ ಚುನಾವಣಾ ಆಯೋಗವು ಚುನಾವಣಾ ಮತ್ತು ಮತದಾರರ ಪಟ್ಟಿ ನಿರ್ವಹಣೆ ಮತ್ತು ಇದಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಅತ್ಯತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು ಹಾಗೂ ಸಂಸ್ಥೆಗಳಿಗೆ ರಾಷ್ಟ್ರೀಯ ಅತ್ಯುತ್ತಮ ಚುನಾವಣಾ ಕಾರ್ಯಗಳ ಪ್ರಶಸ್ತಿಯನ್ನು ಪ್ರದಾನ ಮಾಡುತ್ತದೆ.

ಈ ವರ್ಷದ ರಾಷ್ಟ್ರೀಯ ಪ್ರಶಸ್ತಿ ಸಮಾರಂಭ 2020 ರ ಜನವರಿ 25 ರಂದು ದೆಹಲಿಯ ಕಂಟೋನ್ಮೆಂಟ್ನಲ್ಲಿರುವ ಝೋರಾವರ್ ಸಭಾಂಗಣದ ಮಾಣಿಕ್ಷಾ ಕೇಂದ್ರದಲ್ಲಿ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications