ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಳೆ ಹಾನಿ ಪರಿಶೀಲನೆಗೆ ಕೇಂದ್ರದ 6 ಸದಸ್ಯರ ತಂಡ ಭೇಟಿ

By Manjunatha
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 10: ರಾಜ್ಯದಲ್ಲಿ ವಿಪರೀತ ಮಳೆಯಿಂದ ತತ್ತರಿಸಿರುವ ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಹಾಸನ ಜಿಲ್ಲೆಗಳಿಗೆ ಕೇಂದ್ರ ಸರಕಾರದ ಉನ್ನತ ಮಟ್ಟದ ತಂಡವು ಸೆ.12 ಮತ್ತು 13ರಂದು ಭೇಟಿ ನೀಡಲಿದೆ.

ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಅನಿಲ್ ಮಲ್ಲಿಕ್ ನೇತೃತ್ವದಲ್ಲಿ 6 ಸದಸ್ಯರ ತಂಡವು ನಾಳೆ (ಮಂಗಳವಾರ) ಬೆಂಗಳೂರಿಗೆ ಆಗಮಿಸುತ್ತಿದೆ.

ಕರ್ನಾಟಕದ ಅತಿವೃಷ್ಟಿ, ಬರ ಪರಿಸ್ಥಿತಿಗೆ ನೆರವು: ಮೋದಿ ಭರವಸೆಕರ್ನಾಟಕದ ಅತಿವೃಷ್ಟಿ, ಬರ ಪರಿಸ್ಥಿತಿಗೆ ನೆರವು: ಮೋದಿ ಭರವಸೆ

ಈ ತಂಡದ ಮೂವರು ಸದಸ್ಯರು ಕೊಡಗಿಗೆ ಭೇಟಿ ನೀಡಲಿದ್ದರೆ, ಉಳಿದ ಮೂವರು ಸದಸ್ಯರು ದಕ್ಷಿಣ ಕನ್ನಡ, ಹಾಸನ ಮತ್ತು ಉಡುಪಿ ಜಿಲ್ಲೆಗಳಿಗೆ ತೆರಳಲಿದ್ದಾರೆ. ಈ ಸದಸ್ಯರು ಎಲ್ಲ ಜಿಲ್ಲೆಗಳಲ್ಲೂ ನೆರೆಪೀಡಿತ ಪ್ರದೇಶಗಳಿಗೆ ತೆರಳಿ, ಆಗಿರುವ ಹಾನಿಯನ್ನು ಅವಲೋಕಿಸಲಿದ್ದಾರೆ.

central government committee visiting Karnataka to overview flood damage

ಬಳಿಕ, ಸೆಪ್ಟೆಂಬರ್ 14ರಂದು ಕೇಂದ್ರ ತಂಡವು ರಾಜ್ಯ ಸರಕಾರದ ಸಚಿವರುಗಳು ಮತ್ತು ಮುಖ್ಯ ಕಾರ್ಯದರ್ಶಿಗಳೊಂದಿಗೆ ನೆರೆ ಹಾನಿ ಕುರಿತು ವಿಚಾರ ವಿನಿಮಯ ನಡೆಸಲಿದೆ. ಬಳಿಕ ಈ ತಂಡವು ತನ್ನ ವರದಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಿದೆ.

ಮಳೆಯಿಂದ ರಾಜ್ಯಕ್ಕೆ ಆಗಿರುವ ನಷ್ಟ ಎಷ್ಟು? ಕೇಂದ್ರದಿಂದ ಕೇಳಿರುವ ನೆರವೆಷ್ಟು?ಮಳೆಯಿಂದ ರಾಜ್ಯಕ್ಕೆ ಆಗಿರುವ ನಷ್ಟ ಎಷ್ಟು? ಕೇಂದ್ರದಿಂದ ಕೇಳಿರುವ ನೆರವೆಷ್ಟು?

ರಾಜ್ಯದಲ್ಲಿ ಮಳೆಯಿಂದ ಆಗಿರುವ ಹಾನಿ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು (ಸೋಮವಾರ) ದೆಹಲಿಗೆ ತೆರಳಿದ್ದ ನಿಯೋಗವು ಪ್ರಧಾನಿ ಮೋದಿಯ ಅರಿಗೆ ಮನವಿ ಸಲ್ಲಿಸಿ, ಪರಿಹಾರ ಹಣ ಬಿಡುಗಡೆ ಮಾಡುವಂತೆ ಕೋರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ತನ್ನ ಈ ತಂಡವನ್ನು ಕಳಿಸುತ್ತಿದೆ.

English summary
Central government committee of 6 officers visiting Karnataka to overview flood damage happen in Kodagu and other districts. they will be in Karnataka for two days and they submit the report to central government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X