ನನ್ನ ಯೋಗ್ಯತೆಗೆ ಮಿರಿದ ದೊಡ್ಡ ಗೌರವ ಕೇಂದ್ರ ಸರ್ಕಾರ ನೀಡಿದೆ: ಎಸ್.ಎಂ.ಕೃಷ್ಣ
ಇದು ನನಗೆ ಬಯಸದೆ ಬಂದ ಭಾಗ್ಯ, ಕನಸಲ್ಲೂ ನಿರೀಕ್ಷೆ ಮಾಡಿರಲಿಲ್ಲ ಎಂದು ಪದ್ಮವಿಭೂಷಣ ಗೌರವಕ್ಕೆ ಎಸ್.ಎಂ ಕೃಷ್ಣ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳಿದರು.
ಬೆಂಗಳೂರು, ಜನವರಿ 27: ನನ್ನ ಯೋಗ್ಯತೆ ಮಿರಿದ ದೊಡ್ಡ ಗೌರವ ಕೇಂದ್ರ ಸರ್ಕಾರ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ.
ಶುಕ್ರವಾರ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಎಸ್.ಎಂ.ಕೃಷ್ಣ ಅವರನ್ನ ಅಭಿನಂದಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಎಸ್.ಎಂ ಕೃಷ್ಣ ಅವರು ಮಾತನಾಡಿ, ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಗೌರವ ನೀಡಿದ್ದಾರೆ. ಇದು ನನಗೆ ಬಯಸದೆ ಬಂದ ಭಾಗ್ಯ, ಕನಸಲ್ಲೂ ನಿರೀಕ್ಷೆ ಮಾಡಿರಲಿಲ್ಲ. ಕೇಂದ್ರ ಸರ್ಕಾರಕ್ಕೆ ನನ್ನ ಅನಂತ ಧನ್ಯವಾದ ಹೇಳುತ್ತೇನೆ ಎಂದರು.
ಮುಖ್ಯಮಂತ್ರಿ ನನ್ನ ಆಡಳಿತದ ಸುಧಾರಣೆ ಬಗ್ಗೆ ಹೇಳಿದ್ದರು. ಯಶಸ್ವಿನಿ, ಬಿಸಿ ಊಟ ಮನಸ್ಸಿಗೆ ಹತ್ತಿರವಾದ ಕಾರ್ಯಕ್ರಮ, ಇವುಗಳನ್ನು ಇನ್ನಷ್ಟು ಸುಧಾರಣೆ ಮಾಡಲಿ. ನಾನು ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ರಾಜ್ಯ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಮೊದಲು ಕೆಂಪೇಗೌಡ ಪ್ರತಿಮೆ ಮಾಡಿದ್ರು, ಈಗ ನನಗೆ ಪ್ರಶಸ್ತಿ ಕೊಟ್ಟಿದ್ದಾರೆ. ನಾನು ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಇನ್ನೂ ಈ ವೇಳೆ ಕಂದಾಯ ಸಚಿವ ಆರ್ ಅಶೋಕ್ ಮಾತನಾಡಿ, ಎಸ್ ಎಂ ಕೃಷ್ಣ ಅವರಿಗೆ ಅವರ ಯೋಗ್ಯತೆಗೆ ತಕ್ಕ ಪ್ರಶಸ್ತಿ ಬಂದಿದೆ. ಅವರ ಪದ ಪ್ರಯೋಗ ಅಷ್ಟು ಹರಿತ,ಶುದ್ಧವಾಗಿತ್ತು.
ಬೆಂಗಳೂರು ಐಟಿ ಸಿಟಿ ಆಗಿದೆ ಅಂದ್ರೆ ಅದಕ್ಕೆ ಎಸ್ ಎಂ ಕೃಷ್ಣ ಅವರೇ ಕಾರಣ. ಕೆಂಪೇಗೌಡ ಹೇಗೆ ಬೆಂಗಳೂರು ಕಟ್ಟಿದ್ರು, ಅದೇ ರೀತಿಯಲ್ಲಿ ಬೆಂಗಳೂರು ಅಭಿವೃದ್ಧಿ ಮಾಡಿದ್ದು ಕೃಷ್ಣ ಅವರು, ಬೆಂಗಳೂರು ಅಭಿವೃದ್ಧಿ ಬಗ್ಗೆ ಮೊದಲ ಸಾಲಿನಲ್ಲಿ ಕೃಷ್ಣ ಅವರು ನಿಲ್ಲುತ್ತಾರೆ ಎಂದು ಹೇಳಿದರು.
ಆರೋಗ್ಯ ಸಚಿವ ಸುಧಾಕರ್ ಅವರು ಮಾತನಾಡಿ, ರಾಜ್ಯ ಕಂಡ ಅಪರೂಪದ ರಾಜಕೀಯ ಮುತ್ಸದಿ. ಜನರು ಕೂಡ ಅದೆ ರೀತಿಯಲ್ಲಿ ಪ್ರೀತಿ ಕೊಟ್ಟಿದ್ದಾರೆ, ರಾಜ್ಯದ ಹಿರಿಮೆ ಹೆಚ್ಚಿಸಿ ದ ಕೀರ್ತಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಸಲ್ಲುತ್ತದೆ. ರಾಜ್ಯದ ಹಿತದೃಷ್ಟಿಯಿಂದ ಎಲ್ಲ ನಿರ್ಧಾರ ಮಾಡುತ್ತಾ ಇದ್ದಾರೆ, ಮಹಾನ್ ನಾಯಕರ ನೆರಳಲ್ಲಿ ನಾವು ಬೆಳೆದಿದ್ದೇವೆ, ನಾವು ಕೂಡ ಅವರ ಆದರ್ಶ ರೂಡಿಸಿಕೊಳ್ಳಬೇಕಿದೆ, ನಾನು ಸಹ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications