ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನನ್ನ ಯೋಗ್ಯತೆಗೆ ಮಿರಿದ ದೊಡ್ಡ ಗೌರವ ಕೇಂದ್ರ ಸರ್ಕಾರ ನೀಡಿದೆ: ಎಸ್.ಎಂ.ಕೃಷ್ಣ

ಇದು ನನಗೆ ಬಯಸದೆ ಬಂದ ಭಾಗ್ಯ, ಕನಸಲ್ಲೂ ನಿರೀಕ್ಷೆ ಮಾಡಿರಲಿಲ್ಲ ಎಂದು ಪದ್ಮವಿಭೂಷಣ ಗೌರವಕ್ಕೆ ಎಸ್.ಎಂ ಕೃಷ್ಣ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳಿದರು.

|
Google Oneindia Kannada News

ಬೆಂಗಳೂರು, ಜನವರಿ 27: ನನ್ನ ಯೋಗ್ಯತೆ ಮಿರಿದ ದೊಡ್ಡ ಗೌರವ ಕೇಂದ್ರ ಸರ್ಕಾರ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ.

ಶುಕ್ರವಾರ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಎಸ್.ಎಂ.‌ಕೃಷ್ಣ ಅವರನ್ನ ಅಭಿನಂದಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಎಸ್.ಎಂ ಕೃಷ್ಣ ಅವರು ಮಾತನಾಡಿ, ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಗೌರವ ನೀಡಿದ್ದಾರೆ. ಇದು ನನಗೆ ಬಯಸದೆ ಬಂದ ಭಾಗ್ಯ, ಕನಸಲ್ಲೂ ನಿರೀಕ್ಷೆ ಮಾಡಿರಲಿಲ್ಲ. ಕೇಂದ್ರ ಸರ್ಕಾರಕ್ಕೆ ನನ್ನ ಅನಂತ ಧನ್ಯವಾದ ಹೇಳುತ್ತೇನೆ ಎಂದರು.

ಪದ್ಮವಿಭೂಷಣ ಎಸ್‌ಎಂ ಕೃಷ್ಣ ಸನ್ಮಾನಿಸಿದ ಸಿಎಂ ಬಸವರಾಜ ಬೊಮ್ಮಾಯಿಪದ್ಮವಿಭೂಷಣ ಎಸ್‌ಎಂ ಕೃಷ್ಣ ಸನ್ಮಾನಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ನನ್ನ ಆಡಳಿತದ ಸುಧಾರಣೆ ಬಗ್ಗೆ ಹೇಳಿದ್ದರು. ಯಶಸ್ವಿನಿ, ಬಿಸಿ ಊಟ ಮನಸ್ಸಿಗೆ ಹತ್ತಿರವಾದ ಕಾರ್ಯಕ್ರಮ, ಇವುಗಳನ್ನು ಇನ್ನಷ್ಟು ಸುಧಾರಣೆ ಮಾಡಲಿ. ನಾನು ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ರಾಜ್ಯ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಮೊದಲು ಕೆಂಪೇಗೌಡ ಪ್ರತಿಮೆ ಮಾಡಿದ್ರು, ಈಗ ನನಗೆ ಪ್ರಶಸ್ತಿ ಕೊಟ್ಟಿದ್ದಾರೆ. ನಾನು ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

Central Government Has Honored Me Beyond What I Deserve SM Krishna Said

ಇನ್ನೂ ಈ ವೇಳೆ ಕಂದಾಯ ಸಚಿವ ಆರ್ ಅಶೋಕ್ ಮಾತನಾಡಿ, ಎಸ್ ಎಂ ಕೃಷ್ಣ ಅವರಿಗೆ ಅವರ ಯೋಗ್ಯತೆಗೆ ತಕ್ಕ ಪ್ರಶಸ್ತಿ ಬಂದಿದೆ. ಅವರ ಪದ ಪ್ರಯೋಗ ಅಷ್ಟು ಹರಿತ,ಶುದ್ಧವಾಗಿತ್ತು.
ಬೆಂಗಳೂರು ಐಟಿ ಸಿಟಿ ಆಗಿದೆ ಅಂದ್ರೆ ಅದಕ್ಕೆ ಎಸ್ ಎಂ ಕೃಷ್ಣ ಅವರೇ ಕಾರಣ. ಕೆಂಪೇಗೌಡ ಹೇಗೆ ಬೆಂಗಳೂರು ಕಟ್ಟಿದ್ರು, ಅದೇ ರೀತಿಯಲ್ಲಿ ಬೆಂಗಳೂರು ಅಭಿವೃದ್ಧಿ ಮಾಡಿದ್ದು ಕೃಷ್ಣ ಅವರು, ಬೆಂಗಳೂರು ಅಭಿವೃದ್ಧಿ ಬಗ್ಗೆ ಮೊದಲ ಸಾಲಿನಲ್ಲಿ ಕೃಷ್ಣ ಅವರು ನಿಲ್ಲುತ್ತಾರೆ ಎಂದು ಹೇಳಿದರು.

ಆರೋಗ್ಯ ಸಚಿವ ಸುಧಾಕರ್ ಅವರು ಮಾತನಾಡಿ, ರಾಜ್ಯ ಕಂಡ ಅಪರೂಪದ ರಾಜಕೀಯ ಮುತ್ಸದಿ. ಜನರು ಕೂಡ ಅದೆ ರೀತಿಯಲ್ಲಿ ಪ್ರೀತಿ ಕೊಟ್ಟಿದ್ದಾರೆ, ರಾಜ್ಯದ ಹಿರಿಮೆ ಹೆಚ್ಚಿಸಿ ದ ಕೀರ್ತಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಸಲ್ಲುತ್ತದೆ. ರಾಜ್ಯದ ಹಿತದೃಷ್ಟಿಯಿಂದ ಎಲ್ಲ ನಿರ್ಧಾರ ಮಾಡುತ್ತಾ ಇದ್ದಾರೆ, ಮಹಾನ್ ನಾಯಕರ ನೆರಳಲ್ಲಿ ನಾವು ಬೆಳೆದಿದ್ದೇವೆ, ನಾವು ಕೂಡ ಅವರ ಆದರ್ಶ ರೂಡಿಸಿಕೊಳ್ಳಬೇಕಿದೆ, ನಾನು ಸಹ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು.

English summary
sm krishna padma vibhushan award; the central government has honored me beyond what i deserve says sm krishna
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X