ಕೇಂದ್ರ ಸರ್ಕಾರ ಕನ್ನಡಿಗರಿಗೆ ಕಿರುಕುಳ ನೀಡುತ್ತಿದೆ: ಎಚ್ಡಿ ಕುಮಾರಸ್ವಾಮಿ
ಬೆಂಗಳೂರು, ನವೆಂಬರ್ 18: ''ರಾಷ್ಟ್ರೀಯ ಪಕ್ಷಗಳು ಕರ್ನಾಟಕದ ಪಾಲಿಗೆ ಮಾರಕ ಎನ್ನುವುದು ಪದೇಪದೆ ಋಜುವಾತು ಆಗುತ್ತಿದ್ದು, ನೆಲ, ಜಲ, ಭಾಷೆ ವಿಚಾರದಲ್ಲಿ ಅವು ಕನ್ನಡಿಗರನ್ನು ಕಾಡುತ್ತಲೇ ಇವೆ. ಈಗ ದಕ್ಷಿಣ ಪಿನಾಕಿನಿ (ಪೆನ್ನಾರ್) ನದಿ ನೀರಿನ ವಿಷಯದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಕನ್ನಡಿಗರ ಹಕ್ಕು ಕಸಿದು ಕಿರುಕುಳ ನೀಡಲು ಹೊರಟಿದೆ'' ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕಾವೇರಿ ನದಿ ವಿವಾದದಲ್ಲಿ ಕರ್ನಾಟಕವು ಒಂದು ಶತಮಾನ ಕಾಲ ಸಂಘರ್ಷ ನಡೆಸಿದ್ದಾಯಿತು. ಮೇಕೆದಾಟು ವಿವಾದಕ್ಕೆ ನರೇಂದ್ರ ಮೋದಿ ಸರ್ಕಾರ ಇನ್ನೂ ತುಪ್ಪ ಸುರಿಯುತ್ತಾ, ಆ ಯೋಜನೆಗೆ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿದೆ. ಆಗಲೇ ಪಿನಾಕಿನಿ ನದಿ ವಿಷಯದಲ್ಲಿ ರಾಜ್ಯಕ್ಕೆ ಕಾನೂನು ಕುಣಿಕೆ ಬಿಗಿಯಲು ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಆರೋಪಿಸಿದ್ದಾರೆ.

ಕನ್ನಡಿಗರನ್ನು ಕಾಡುವ ಹವಣಿಕೆ
ರಾಜಕೀಯ ಕಾರಣಕ್ಕಾಗಿ ದಕ್ಷಿಣ ಪಿನಾಕಿನಿ ನದಿ ನೀರಿನ ಹಕ್ಕನ್ನು ಕರ್ನಾಟಕದಿಂದ ಕಸಿಯಲು ಕೇಂದ್ರ ಹವಣಿಸುತ್ತಿದೆ. ಕಾವೇರಿ, ಕೃಷ್ಣಾ, ಮಹದಾಯಿ ಸೇರಿ ವಿವಿಧ ಜಲ ವಿವಾದಗಳಲ್ಲಿ ಕರ್ನಾಟಕವನ್ನು ಕಾಡಿದಂತೆ, ವಿವಾದವೇ ಅಲ್ಲದ ದಕ್ಷಿಣ ಪಿನಾಕಿನಿಯನ್ನೂ ವಿವಾದದ ಕೂಪಕ್ಕೆ ತಳ್ಳಿ ಕನ್ನಡಿಗರನ್ನು ಕಾಡುವ ಹವಣಿಕೆ ಅಷ್ಟೇ ಇದಾಗಿದೆ.

ರಾಜ್ಯ ಸರ್ಕಾರ ಮುಲಾಜಿಲ್ಲದೆ ವಿರೋಧಿಸಬೇಕು
ದಕ್ಷಿಣ ಪಿನಾಕಿನಿ ನದಿ ನೀರಿನ ವಿಷಯಕ್ಕೆ ಹೊಸ ನ್ಯಾಯಾಧಿಕರಣ ರಚನೆ ಮಾಡುವ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ಅಕ್ಷರಶಃ ರಾಜ್ಯದ ಪಾಲಿಗೆ ಮರಣಶಾಸನ. ಇದನ್ನು ರಾಜ್ಯ ಬಿಜೆಪಿ ಸರ್ಕಾರ ಮುಲಾಜಿಲ್ಲದೆ ವಿರೋಧಿಸಬೇಕು. ರಾಜಕೀಯ ಲಾಭದ ಉದ್ದೇಶಕ್ಕಾಗಿ ಬಿಜೆಪಿ ಸರ್ಕಾರವು ನೆಲ, ಜಲ, ಭಾಷೆಯಂಥ ವಿಷಯಗಳನ್ನು ಇಟ್ಟುಕೊಂಡು ದಕ್ಷಿಣದ ನಡುವೆ ಜಗಳ ಹಚ್ಚಲು ಷಡ್ಯಂತ್ರ ನಡೆಸಿದೆ. ರಾಜ್ಯದ ವಿರೋಧವಿದ್ದರೂ ಕೇಂದ್ರವು ನ್ಯಾಯಾಧಿಕರಣ ರಚನೆ ಮಾಡಲು ಹೊರಟಿದೆ. ಇದು ಸರಿಯಲ್ಲ. ಕನ್ನಡಿಗರನ್ನು ಮತ್ತೊಮ್ಮೆ 'ಜಲದಾಸ್ಯ'ಕ್ಕೆ ದೂಡುವುದನ್ನು ನಾವು ಸಹಿಸುವುದಿಲ್ಲ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ತೆಲಂಗಾಣ, ಆಂಧ್ರ, ತಮಿಳುನಾಡಿಗೆ 247 ಟಿಎಂಸಿ ನೀರು
ಮುಂದುವರಿದು ಗೋದಾವರಿ, ಕೃಷ್ಣಾ, ಪಿನಾಕಿನಿ, ಕಾವೇರಿ ನದಿ ಜೋಡಣೆ ಯೋಜನೆಯಲ್ಲೂ ಕೇಂದ್ರವು ರಾಜ್ಯಕ್ಕೆ ಸೊನ್ನೆ ಸುತ್ತಿದೆ. 2022 ಫೆ. 18ರಂದು ಸಭೆ ನಡೆಸಿದ ಕೇಂದ್ರವು, ಗೋದಾವರಿಯಿಂದ 247 ಟಿಎಂಸಿ ನೀರನ್ನು ಕೃಷ್ಣಾ, ಪೆನ್ನಾರ್ ಮೂಲಕ ಕಾವೇರಿಗೆ ಹರಿಸುವ ಯೋಜನೆಯ ಮಾಹಿತಿ ನೀಡಿತು. ಇಷ್ಟೂ ನೀರನ್ನು ತೆಲಂಗಾಣ, ಆಂಧ್ರ, ತಮಿಳುನಾಡಿಗೆ ಮಾತ್ರ ಹಂಚಿತು. ಈ ನದಿ ಜೋಡಣೆ ಯೋಜನೆಯಲ್ಲಿ ಕರ್ನಾಟಕ ಪ್ರಮುಖ ಪಾಲುದಾರ & ಹಕ್ಕುದಾರ ರಾಜ್ಯ. ಆದರೆ, 247 ಟಿಎಂಸಿಯಲ್ಲಿ ರಾಜ್ಯಕ್ಕೆ ಸಿಕ್ಕಿರುವುದು ಶೂನ್ಯ. ಆ ಸಭೆಯಲ್ಲಿ ರಾಜ್ಯಕ್ಕೆ ಅಪಮಾನ ಮಾಡಲಾಯಿತು ಎಂಬ ಮಾಹಿತಿಯೂ ಬಂದಿತ್ತು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಕರ್ನಾಟಕದ ಮೇಲೆ ಬಿಜೆಪಿ ಸರ್ಕಾರಕ್ಕೆ ನಿರ್ಲಕ್ಷ್ಯ
ಗೋದಾವರಿ ಕೃಷ್ಣಾ ಪಿನಾಕಿನಿ ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಹನಿ ನೀರನ್ನೂ ಹಂಚಿಕೆ ಮಾಡಿಲ್ಲ ಎಂದರೆ, ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕರ್ನಾಟಕದ ಮೇಲೆ ಅದೆಷ್ಟು ನಿರ್ಲಕ್ಷ್ಯ ಇದೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದು. ಕನ್ನಡಿಗರು ತಬ್ಬಲಿಗಳಾಗುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸಂಸತ್ತಿನಲ್ಲಿ ಅಲವತ್ತುಕೊಂಡರೂ ಕೇಂದ್ರವು ಕನ್ನಡಿಗರ ಮೇಲೆ ಕಠಿಣ ನೀತಿ ಮುಂದುವರಿಸಿದೆ ಎಂದಿದ್ದಾರೆ. ದಕ್ಷಿಣ ಪಿನಾಕಿನಿ ವಿಷಯದಲ್ಲಿ ನ್ಯಾಯಾಧೀಕರಣ ರಚನೆ ಒಪ್ಪುವುದಿಲ್ಲ. ನೆಲ, ಜಲ, ಭಾಷೆ ವಿಚಾರದಲ್ಲಿ ದಕ್ಷಿಣ ರಾಜ್ಯಗಳನ್ನು ಒಡೆದಾಳುವ ಬಿಜೆಪಿಯ ಕುತ್ಸಿತ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ. ರಾಜ್ಯದ ನೀರಾವರಿ ಹಿತಾಸಕ್ತಿಗಳ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ ಎಂದು ಎಚ್ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications