Get Updates
Get notified of breaking news, exclusive insights, and must-see stories!

BREAKING: 'ಮೇಕೆದಾಟು' ಯೋಜನೆಗೆ ಕೇಂದ್ರದ ಗ್ರೀನ್ ಸಿಗ್ನಲ್?; ಗಜೇಂದ್ರ ಶೇಖಾವತ್ ಮಹತ್ವದ ಹೇಳಿಕೆ!

ಬೆಂಗಳೂರು, ಜು. 13: ಮೇಕೆದಾಟು ಯೋಜನೆಗೆ ತಮಿಳುನಾಡು ಖ್ಯಾತೆ ತೆಗೆದಿರುವ ಸಂದರ್ಭದಲ್ಲಿಯೇ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ರಾಜ್ಯಕ್ಕೆ ಆಗಮಿಸಿದ್ದಾರೆ. ಕೇಂದ್ರ ಸರ್ಕಾರದ ಮಹತ್ವದ ಜಲ ಜೀವನ್ ಮಿಷನ್ ಯೋಜನೆ ಕುರಿತು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆದಿದೆ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ, ಮೇಕೆದಾಟು ಯೋಜನೆ ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚೆ ನಡೆದಿದೆ ಎಂಬ ಮಾಹಿತಿಯಿದೆ.

ಸಭೆಯ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಗಜೇಂದ್ರಸಿಂಗ್ ಶೇಖಾವತ್ ಅವರು ಮೇಕೆದಾಟು ಯೋಜನೆ ಕುರಿತು ಮಹತ್ವದ ಮಾತನ್ನಾಡಿದ್ದಾರೆ. "ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪಾತ್ರ ಏನಿದೆಯೋ ಅದನ್ನು ನಾವು ಮಾಡುತ್ತೇವೆ. ಪಕ್ಷ ಬೇರೆ, ಸರ್ಕಾರ ಬೇರೆ. ಸರ್ಕಾರದ ನಡೆ ಏನಿರುತ್ತದೆಯೋ ಅದನ್ನು ಸರ್ಕಾರ ಮಾಡುತ್ತದೆ" ಎಂದು ಶೇಖಾವತ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Central Govt will take Appropriate Decision Regarding Mekedatu Project: Gajendra Singh Shekhawat

Recommended Video

      ಕ್ರಿಕೆಟ್ ಇತಿಹಾಸದ ಕಡಿಮೆ ಅವಧಿಯ ಪಂದ್ಯ:ಕೇವಲ 7 ರನ್ ಗಳಿಸಿ All out ಆದ ಟೀಮ್ | Oneindia Kannada

      ಮೇಕೆದಾಟು ಯೋಜನೆ ಅನುಷ್ಠಾನ ವಿರೋಧಿಸಿ ತಮಿಳುನಾಡು ರಾಜ್ಯ ಸರ್ಕಾರ ನಿರ್ಣಯ ತೆಗೆದುಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ಕೊಟ್ಟಿರುವ ಶೇಖಾವತ್, "ತಮಿಳುನಾಡು ನಿರ್ಣಯ ತೆಗೆದುಕೊಳ್ಳಲಿ, ಕೇಂದ್ರ ಸರ್ಕಾರ ಏನು ನಿರ್ಧಾರ ಮಾಡಬೇಕೊ ಆ ನಿರ್ಧಾರವನ್ನು ನಾವು ತೆಗೆದುಕೊಳ್ಳುತ್ತೇವೆ. ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ" ಎಂದು ಹೇಳಿಕೆ ನೀಡಿದ್ದಾರೆ. ಆ ಮೂಲಕ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸುವುದು ಖಾತರಿ ಆದಂತಾಗಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+