Get Updates
Get notified of breaking news, exclusive insights, and must-see stories!

ದ.ಕನ್ನಡ ಜಿಲ್ಲೆ ಹೆದ್ದಾರಿಗಳ ಕಾಮಗಾರಿ ವೇಗಕ್ಕೆ ಕೇಂದ್ರ ಸಚಿವರ ಸೂಚನೆ

ನವದೆಹಲಿ, ಜನವರಿ 07: ಸಂಸದ ನಳೀನ್‌ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ದಕ್ಷಿಣ ಕನ್ನಡ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿಗಳ ಸ್ಥಿತಿ-ಗತಿ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 77 ರಲ್ಲಿ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪತ ರಸ್ತೆಯ ಕಾಮಗಾರಿಯು ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ ನಳೀನ್ ಕುಮಾರ್ ಕಟೀಲ್ ಅವರು ಸಚಿವರಿಗೆ ದೂರು ನೀಡಿದ ಕಾರಣ ಕಾಮಗಾರಿ ನಿರ್ವಹಿಸುತ್ತಿರುವ ಎಲ್‌ ಆಂಡ್ ಟೀ ಸಂಸ್ಥೆಗೆ ಸಚಿವರು ಎಚ್ಚರಿಕೆ ನೀಡಿ, ಕಾಮಗಾರಿ ಬೇಗನೆ ಪೂರ್ಣಗೊಳಿಸುವಂತೆ ಸೂಚಿಸಿದರು.

ತಲವಾಡಿ-ಕುಂದಾಪುರ ಚತುಷ್ಪತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ , ತೊಕ್ಕೊಟ್ಟು ಮತ್ತು ಪಂಪ್‌ವೇಲ್ ಮೇಲ್ಸೇತುವೆಗಳನ್ನು ಬೇಗನೆ ಮುಗಿಸಿ ಫೆಬ್ರವರಿ ಅಂತ್ಯದ ವೇಳೆಗೆ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಕೇಂದ್ರ ಸಚಿವರು ಕಾಮಗಾರಿ ನಿರ್ವಹಿಸುತ್ತಿರುವ ನವಯುಗ ಸಂಸ್ಥೆಗೆ ಸೂಚಿಸಿದ್ದಾರೆ.

Central minister instructed officers to complete Dakshin Kannada constituency highway works soon

ಕುಲಶೇಖರ-ಕಾರ್ಕಳ, ಬಿಸಿ ರೋಡ್‌-ಕಟೀಲು-ಮೂಲ್ಕಿ ಹಾಗೂ ಮೇಲ್ಕಾರು-ಕೋಣಾಜೆ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭೂ ಸ್ವಾಧೀನ ಪ್ರಕ್ರಿಯಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ. ಫೆಬ್ರವರಿ ಅಂತ್ಯಕ್ಕೆ ಈ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ಆಗಬೇಕೆಂದು ಸಚಿವರು ಅಧಿಕಾರಿಗಳಿಗೆ ಹೇಳಿದ್ದಾರೆ.

ಸಭೆಯಲ್ಲಿ ಸಚಿವರಾದ ಡಿ.ವಿ.ಸದಾನಂದಗೌಡ, ಸಂಸದ ನಳೀನ್‌ಕುಮಾರ್ ಕಟೀಲ್ ಅವರುಗಳು ಹಾಜರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+