ಬಾನು ಮುಷ್ತಾಕರ ಅಚ್ಚರಿ ಹೇಳಿಕೆಯ ಹಳೇ ವಿಡಿಯೋ ಹರಿಬಿಟ್ಟ ಶೋಭಾ ಕರಂದ್ಲಾಜೆ
ಬೆಂಗಳೂರು, ಆಗಸ್ಟ್ 25: ಮೂರ್ತಿ ಪೂಜೆಯನ್ನು ಒಪ್ಪದ ಹಿಂದೂ ಧಾರ್ಮಿಕ ಆಚರಣೆಯಲ್ಲಿ ನಂಬಿಕೆ ಇಲ್ಲದ ಸಾಹಿತಿ ಬಾನು ಮುಷ್ತಾಕ್ ಅವರಿಂದ ವಿಶ್ವವಿಖ್ಯಾತ ದಸರಾ ಉದ್ಘಾಟನೆಗೆ ಮುಂದಾಗಿರುವ ಸರ್ಕಾರದ ಕ್ರಮ ಹಿಂದೂ ವಿರೋಧಿ ನೀತಿಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ಈ ಹಿಂದೆ ದೇವರ ವಿಚಾರವಾಗಿ ಬಾನು ಮುಷ್ತಾಕ್ ಮಾತನಾಡಿದ ಅಚ್ಚರಿಯ ವಿಡಿಯೋವನ್ನ ಬಿಡುಗಡೆ ಮಾಡಿದರು. ಕನ್ನಡ ನಾಡಿನ ನಾಡಹಬ್ಬ ದಸರಾ ಉದ್ಘಾಟನೆ ಎಂದರೆ ತಾಯಿ ಚಾಮುಂಡೇಶ್ವರಿ ಮೂರ್ತಿ ಪೂಜೆ ನೆರವೇರಿಸಿ ತಾಯಿಗೆ ಪುಷ್ಪವೃಷ್ಟಿ ಮಾಡುವ ಪದ್ಧತಿ. ಇಂಥ ಹಿಂದೂ ಧಾರ್ಮಿಕ ಕಾರ್ಯವನ್ನು ಅನ್ಯಧರ್ಮೀಯರಿಂದ ಒಪ್ಪಲು ಸಾಧ್ಯವಿಲ್ಲದೆ ಇದ್ದಾಗ ಹಿಂದೂಗಳ ಭಾವನೆ ಕೆಣಕಲು ಹೊರಟಿರುವ ಸರ್ಕಾರದ ಕ್ರಮ ಖಂಡನೀಯ ಎಂದು ತಿಳಿಸಿದರು.

2023ರಲ್ಲಿ ಜನಸಾಹಿತ್ಯ ಸಭೆಯಲ್ಲಿ ಮುಷ್ತಾಕ್ ಅವರು ಕನ್ನಡವನ್ನು ಭುವನೇಶ್ವರಿಗೆ ಹೋಲಿಸಿ ಅರಿಷಿನ ಕುಂಕುಮ ಬಣ್ಣದ ಕನ್ನಡ ಧ್ವಜ ಮಾಡಿದ್ದೀರಿ; ಈ ಮಧ್ಯದಲ್ಲಿ ನಾನು ಅಲ್ಪಸಂಖ್ಯಾತ ಸಾಹಿತಿಯಾಗಿ ಎಲ್ಲಿ ನಿಲ್ಲಲಿ ಎಂದು ಕೇಳಿದ್ದÀರು. ಕನ್ನಡ ನಾಡಿನ ಭುವನೇಶ್ವರಿ ತಾಯಿಯ ಹಳದಿ ಕೆಂಪು ಧ್ವಜ ಒಪ್ಪದ ಇವರು ಚಾಮುಂಡೇಶ್ವರಿಯನ್ನು ಒಪ್ಪಲು ಸಾಧ್ಯವೆ? ಎಂದು ಪ್ರಶ್ನಿಸಿದರು.
ಇವರನ್ನು ಹಿಂದೂ ಧಾರ್ಮಿಕ ಉತ್ಸವ ದಸರಾ ಉದ್ಘಾಟನೆಗೆ ಯಾವ ವಿಚಾರಕ್ಕಾಗಿ ಸರ್ಕಾರ ಕರೆದಿದೆ? 9 ದಿನಗಳ ಕಾಲ ತಾಯಿ ದುರ್ಗೆಯನ್ನು ಪೂಜಿಸಿ ಚಾಮುಂಡೇಶ್ವರಿ ದುಷ್ಟಶಕ್ತಿ ಮಹಿಶಸುರನನ್ನು ಸಂಹರಿಸಿದ ಈ ಹಬ್ಬ ಸಾಂಸ್ಕೃತಿಕ ಹಬ್ಬವಲ್ಲ; ಇದು ಹಿಂದೂ ಧಾರ್ಮಿಕ ಉತ್ಸವ ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕೆ ಹೊರಟಿರುವುದು ಯಾವ ಪುರುಷಾರ್ಥಕ್ಕಾಗಿ ಎಂದು ಕೇಳಿದರು. ಕನ್ನಡ ಭುವನೇಶ್ವರಿ, ನಾಡಿನ ಧ್ವಜ ಒಪ್ಪದ ಬಾನು ಮುಷ್ತಾಕ್, ಚಾಮುಂಡಿ ಬೆಟ್ಟ ಹತ್ತಕೂಡದು; ತಕ್ಷಣ ಸರ್ಕಾರ ಅವರಿಗೆ ನೀಡಿರುವ ಆಹ್ವಾನ ಹಿಂಪಡೆದು ಹಿಂದೂ ಧಾರ್ಮಿಕ ನಂಬಿಕೆಯಲ್ಲಿ ಅಚಲ ವಿಶ್ವಾಸ ಹೊಂದಿದ ಆಚಾರ ವಿಚಾರ ಬಲ್ಲವರನ್ನು ಆಹ್ವಾನಿಸಬೇಕು ಎಂದು ಒತ್ತಾಯಿಸಿದರು.
ಇಂಡಿ ಒಕ್ಕೂಟ ಶಬರಿಮಲೆಗೆ ಧಾರ್ಮಿಕ ನಂಬಿಕೆ ಇಲ್ಲದ ಸ್ಟಾಲಿನ್ ಕರೆಯುವ ಇವರು ಎನು ಮಾಡಲು ಹೊರಟಿದ್ದಾರೆ? ಬಾನು ಮುಷ್ತಾಕ್ ಒಬ್ಬರು ಸಾಹಿತಿ. ಅದರ ಬಗ್ಗೆ ಗೌರವ ಇದೆ. ಆದರೆ ಧಾರ್ಮಿಕತೆಯಲ್ಲಿ ನಂಬಿಕೆ ಇಲ್ಲದ ಅವರನ್ನು ಕರೆದರೆ, ಅವರು ಧಾರ್ಮಿಕ ಉತ್ಸವಕ್ಕೆ ದೀಪವನ್ನು ಬೆಳಗುತ್ತಾರಾ? ಚಾಮುಂಡೇಶ್ವರಿಯನ್ನು ನಂಬುತ್ತಾರಾ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು. ಇದನ್ನು ಸ್ಪಷ್ಟಪಡಿಸಿದ ನಂತರ ಅವರನ್ನ ಉದ್ಘಾಟನೆಗೆ ಕರೆಯಲಿ; ಇಲ್ಲದಿದ್ದರೆ ಅಹ್ವಾನ ಹಿಂಪಡೆಯಬೇಕು. ಇದನ್ನು ಒಪ್ಪಲು ಸಾಧ್ಯವೆ ಇಲ್ಲ. ದಸರಾ ಮಾಡಿದ್ದಾರೆ ಎಂದರೆ ಮೂರ್ತಿ ಪೂಜೆ ಮಾಡದವರನ್ನು ಕರೆಯುವುದು ಸರಿಯಲ್ಲ ಎಂದು ಟೀಕಿಸಿದರು.
ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿದ್ದಾರೆ ಎಂದರೆ ಅವರು ಮೂರ್ತಿಪೂಜೆ ಒಪ್ಪಲ್ಲ. ಬಾನು ಮುಷ್ತಾಕ್ ಅವರು 2023ರಲ್ಲಿ ಜನಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ತಾಯಿ ಭುವನೇಶ್ವರಿ ಹಾಗೂ ಕನ್ನಡ ಧ್ವಜದ ಬಗ್ಗೆ ಮಾತನಾಡಿದ ವಿಡಿಯೋ ಮಾಧ್ಯಮದವರಿಗೆ ಕೇಳಿಸಿದರು. ಕುವೆಂಪು ಅವರು ಕರ್ನಾಟಕವು ಭಾರತ ಮಾತೆಯ ತನುಜಾತೆ ಎಂದಿದ್ದಾರೆ. ಬಾನು ಅವರು ಕನ್ನಡ ತಾಯಿಗೆ ಅಪಮಾನ ಮಾಡಿದ ರೀತಿಯಲ್ಲಿ ಚಾಮುಂಡೇಶ್ವರಿ ತಾಯಿಯನ್ನು ಒಪ್ಪದೆ ಆ ತಾಯಿಗೂ ಅಪಮಾನ ಮಾಡುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಸರ್ಕಾರ ಏನು ಮಾಡಲು ಹೊರಟಿದೆ? ಎಂದು ತರಾಟೆಗೆ ತೆಗೆದುಕೊಂಡರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications