ವರ್ಷಕ್ಕೆ 13 ಲಕ್ಷ ಟನ್ ಗೊಬ್ಬರ ತಯಾರಿಸಲು ಯೋಜನೆ
ಹುಬ್ಬಳ್ಳಿ, ಡಿ. 8: ದೇಶ ಎದುರಿಸುತ್ತಿರುವ ಗೊಬ್ಬರದ ಕೊರತೆ ನೀಗಿಸಲು ಬೃಹತ್ ಗೊಬ್ಬರ ನಿರ್ಮಾಣ ಘಟಕ ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕರ್ನಾಟಕದಲ್ಲಿ ಗೊಬ್ಬರಕ್ಕಾಗಿ ಪ್ರತಿವರ್ಷ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾವೇರಿಯಲ್ಲಿ ಓರ್ವ ರೈತ ಗೋಲಿಬಾರ್ಗೆ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗೊಬ್ಬರ ಉತ್ಪಾದನೆ ಘಟಕ ಸ್ಥಾಪನೆ ಪ್ರಾಮುಖ್ಯತೆ ಪಡೆದಿದೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ವಿವರಣೆ ನೀಡಿರುವ ಕೇಂದ್ರ ರಾಸಾಯನಿಕ ಹಾಗೂ ಗೊಬ್ಬರ ಸಚಿವ ಅನಂತಕುಮಾರ್, ಉತ್ತರ ಕರ್ನಾಟಕದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಗೊಬ್ಬರ ಉತ್ಪಾದನೆ ಘಟಕ ಸ್ಥಾಪಿಸುವ ಉದ್ದೇಶವಿದೆ ವರ್ಷಕ್ಕೆ 13 ಲಕ್ಷ ಟನ್ಗಳಷ್ಟು ಗೊಬ್ಬರ ಉತ್ಪಾದಿಸಲಾಗುವುದು. ಇದಕ್ಕಾಗಿ ಅಂದಾಜು 5,500 ಕೋಟಿ ರೂಪಾಯಿ ವೆಚ್ಚವಾಗುವ ನಿರೀಕ್ಷೆ ಇದೆ. ಘಟಕ ನಿರ್ಮಾಣಕ್ಕೆ 500 ಎಕರೆ ಭೂಮಿ ಅಗತ್ಯ. ರಾಜ್ಯ ಸರ್ಕಾರ ಶೇ. 10ರಷ್ಟು ಬಂಡವಾಳ ಹೂಡಲಿದೆ ಎಂದು ತಿಳಿಸಿದರು. [ರೈತರ ಬದುಕಿಗೆ ಆಸರೆಯಾದ ಎರೆಹುಳು ಗೊಬ್ಬರ]

ಘಟಕ ನಿರ್ಮಾಣಕ್ಕೆ ನೀಡಲಾಗುವ ಭೂಮಿಯ ಕುರಿತು ತಿಳಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಯೋಜನೆ ಕುರಿತು ರೂಪುರೇಷೆಯನ್ನು ಇನ್ನಷ್ಟೇ ತಯಾರಿಸಬೇಕಿದೆ. ನೈಸರ್ಗಿಕ ಅನಿಲದ ಲಭ್ಯತೆಯ ಆಧಾರದ ಮೇಲೆ ಘಟಕ ನಿರ್ಮಾಣಕ್ಕಾಗಿ ಭೂಮಿ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. [ಪಂಚಗವ್ಯ - ರೈತರಿಗೆ ವರದಾನ]
ದಾಬೊಲ್ನಿಂದ ಬಿಡಾಡಿವರೆಗೆ ಬೆಂಗಳೂರು ಮೂಲಕ ಗ್ಯಾಸ್ ಪೈಪ್ಲೈನ್ ಅಳವಡಿಸುವ ಯೋಜನೆ ಜಾರಿ ಕುರಿತು ಗೊಂದಲವಿದೆ. ಆದರೆ, ಯೋಜಿತ ಗೊಬ್ಬರ ತಯಾರಿಕಾ ಘಟಕ ನಿರ್ಮಾಣವು ಗ್ಯಾಸ್ ಲಭ್ಯತೆಯನ್ನೇ ಆಧರಿಸಿದೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಘಟಕ ನಿರ್ಮಿಸುವ ಪ್ರದೇಶವನ್ನು ಅಂತಿಮಗೊಳಿಸಲಾಗುವುದೆಂದು ತಿಳಿಸಿದರು.
ಯೋಜನೆಗೆ ಖಾಸಗಿ ಸಹಭಾಗಿತ್ವ?: ಗೊಬ್ಬರ ನಿರ್ಮಾಣ ಘಟಕದ ರೂಪುರೇಷೆಯನ್ನು ಅಂತಿಮಗೊಳಿಸಿಲ್ಲ. ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ಆರಂಭಿಸುವ ಯೋಚನೆಯೂ ಇದೆ. ಸಂಪೂರ್ಣ ಸರ್ಕಾರಿ ಒಡೆತನವೋ ಅಥವಾ ಖಾಸಗಿ ಮತ್ತು ಸರ್ಕಾರಿ ಒಡೆತನವೋ ಎಂಬುದರ ಕುರಿತು ಇನ್ನಷ್ಟೇ ಚರ್ಚಿಸಬೇಕಾಗಿದೆ ಎಂದು ಅನಂತಕುಮಾರ್ ತಿಳಿಸಿದರು.
ಈ ಘಟಕ ನಿರ್ಮಾಣದ ನಂತರ ಗೊಬ್ಬರಕ್ಕೆ ನೀಡುತ್ತಿರುವ ಧನಸಹಾಯ ನೀತಿಯಲ್ಲಿ ಯಾವುದೇ ಬದಲಾವಣೆ ಉಂಟಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಕಳಪೆ ಗೊಬ್ಬರ-ರಾಜ್ಯ ಸರ್ಕಾರವೇ ಕ್ರಮ ಕೈಗೊಳ್ಳಬೇಕು...
ರಾಜ್ಯದಲ್ಲಿ ವಿತರಣೆಯಾಗುತ್ತಿರುವ ಕಳಪೆ ಗುಣಮಟ್ಟದ ಗೊಬ್ಬರ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಅನಂತಕುಮಾರ್, ಗೊಬ್ಬರ ಮಾರುವಾಗ ಅದರ ಗುಣಮಟ್ಟದ ಕುರಿತು ಖಾತ್ರಿಪಡಿಸಿಕೊಳ್ಳುವುದು ಮಾರಾಟ ಕೇಂದ್ರದ ಕರ್ತವ್ಯ ಎಂದು ತಿಳಿಸಿದರು. [ಒಂದು ಎಕರೆ ಭೂಮಿಯಲ್ಲಿ ಕೃಷಿ ಬ್ರಹ್ಮಾಂಡ]
ಅಲ್ಲದೆ, ಕಳಪೆ ಗೊಬ್ಬರ ಹಾಗೂ ಇಂತಹ ಗೊಬ್ಬರ ತಯಾರಿಸಿ, ಪೂರೈಸುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾದದ್ದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಸ್ಪಷ್ಟಪಡಿಸಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications