ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರದಿಂದ 1200 ಕೋಟಿ ಮಂಜೂರು

|
Google Oneindia Kannada News

ನವದೆಹಲಿ, ಅಕ್ಟೋಬರ್ 4: ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಮುಂಗಡವಾಗಿ ಬಿಹಾರಕ್ಕೆ 400 ಕೋಟಿ ರುಪಾಯಿಯನ್ನು ಹಾಗೂ ಕರ್ನಾಟಕಕ್ಕೆ 1200 ಕೋಟಿ ರುಪಾಯಿಯನ್ನು 'ಆನ್ ಅಕೌಂಟ್ ಆಧಾರದಲ್ಲಿ' ಬಿಡುಗಡೆ ಮಾಡಲು ಕೇಂದ್ರ ಸರ್ಕಾರವು ಶುಕ್ರವಾರ ಒಪ್ಪಿಗೆ ಸೂಚಿಸಿದೆ.

ಅಂದ ಹಾಗೆ, ಕರ್ನಾಟಕ ಹಾಗೂ ಬಿಹಾರಕ್ಕೆ ಮಾತ್ರ ಈ ರೀತಿಯ ವಿಶೇಷ ಆಸ್ಥೆ ವಹಿಸಿ, ಮಧ್ಯಂತರ ಪರಿಹಾರ ಘೋಷಣೆ ಮಾಡಿದ್ದು ಏಕೆ ಎಂಬ ಪ್ರಶ್ನೆಯ ಬೆನ್ನತ್ತಿ ಹೋದರೆ, ಗೊತ್ತಾಗುವುದು ಇಷ್ಟು. ಎರಡೂ ರಾಜ್ಯಗಳ ವಿಪತ್ತು ನಿರ್ವಹಣೆ ನಿಧಿಯಲ್ಲಿ ಹಣ ಇಲ್ಲ. ಇನ್ನು ಈ ನಿಧಿಗೆ ಶೇಕಡಾ ಎಪ್ಪತ್ತೈದರಷ್ಟು (ಸಾಮಾನ್ಯ ಜಿಲ್ಲೆಗಳಿಗೆ ಶೇಕಡಾ ಎಪ್ಪತ್ತೈದು, ಗುಡ್ಡಗಾಡು ರಾಜ್ಯಗಳಿಗೆ ಶೇಕಡಾ ತೊಂಬತ್ತರಷ್ಟು) ಹಣ ನೀಡುವುದು ಕೇಂದ್ರ ಸರ್ಕಾರ.

ಕರ್ನಾಟಕ ಪ್ರವಾಹ ನಷ್ಟದ ಅಂದಾಜು ವರದಿ ತಿರಸ್ಕರಿಸಿದ ಕೇಂದ್ರಕರ್ನಾಟಕ ಪ್ರವಾಹ ನಷ್ಟದ ಅಂದಾಜು ವರದಿ ತಿರಸ್ಕರಿಸಿದ ಕೇಂದ್ರ

ಆ ಪಾಲನ್ನು ಮುಂಗಡವಾಗಿ ನೀಡುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿ, ಈ ಘೋಷಣೆ ಮಾಡಿರುವುದು ಕಂಡುಬರುತ್ತದೆ.

Narendra Modi

SDRF ಪಾಲಿನ ಎರಡನೇ ಕಂತು 213.75 ಕೋಟಿಯನ್ನು ಬಿಹಾರ ರಾಜ್ಯಕ್ಕೆ ಬಿಡುಗಡೆ ಮಾಡಲು ಸರ್ಕಾರವು ಒಪ್ಪಿಗೆ ಸೂಚಿಸಿದೆ. ಈ ಎರಡು ರಾಜ್ಯಗಳಿಗೆ ನೆರೆ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆದರೆ ಹಣವು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಯಾವಾಗ ತಲುಪಲಿದೆ ಎಂಬುದು ಸದ್ಯದ ಪ್ರಶ್ನೆಯಾಗಿದೆ.

Exclusive: 'ಪ್ರಧಾನಿ ನಿಧಿ'ಯೇ ಖೋತಾ ಆಗಿರುವಾಗ ಪ್ರವಾಹ ಪರಿಹಾರ ನೀಡೋಕೆ ಹೇಗೆ ಸಾಧ್ಯ?Exclusive: 'ಪ್ರಧಾನಿ ನಿಧಿ'ಯೇ ಖೋತಾ ಆಗಿರುವಾಗ ಪ್ರವಾಹ ಪರಿಹಾರ ನೀಡೋಕೆ ಹೇಗೆ ಸಾಧ್ಯ?

ಕೇಂದ್ರ ಸರ್ಕಾರದಿಂದ ಸಾವಿರದಿನ್ನೂರು ಕೋಟಿ ಹಣ ಬಿಡುಗಡೆಯೇ ಆಗಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಇಬ್ಬರೂ ಟ್ವೀಟ್ ಮಾಡಿದ್ದಾರೆ. ಆದರೆ ಈಗಿನ ಘೋಷಣೆಯನ್ನು ಸರಿಯಾಗಿ ಅರ್ಥೈಸಬೇಕು ಅಂದರೆ, ಕೇಂದ್ರ ಸರ್ಕಾರ ಹಣ ಮಂಜೂರು ಮಾಡಿದೆಯೇ ವಿನಾ ಬಿಡುಗಡೆ ಮಾಡಿಲ್ಲ.

ಕರ್ನಾಟಕ ಜನತೆ ಪರವಾಗಿ ಮೋದಿ- ಅಮಿತ್ ಶಾಗೆ ಕೃತಜ್ಞತೆ ಅರ್ಪಿಸಿದ ಬಿಎಸ್ ವೈಕರ್ನಾಟಕ ಜನತೆ ಪರವಾಗಿ ಮೋದಿ- ಅಮಿತ್ ಶಾಗೆ ಕೃತಜ್ಞತೆ ಅರ್ಪಿಸಿದ ಬಿಎಸ್ ವೈ

ಮಳೆ ಹಾನಿಯಿಂದಾಗಿ ಕರ್ನಾಟಕ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ಕೇಂದ್ರ ಸರ್ಕಾರದಿಂದ ಈ ವರೆಗೆ ನಯಾ ಪೈಸೆ ಬಿಡುಗಡೆ ಆಗಿಲ್ಲ. ಅಷ್ಟೇ ಅಲ್ಲ, ಪ್ರಧಾನಮಂತ್ರಿ ನರೇಂದ್ರ ಮೋದಿ ಸಹ ಕರ್ನಾಟಕ ನೆರೆ ಸಂತ್ರಸ್ತರಿಗೆ ಸಂಬಂಧಿಸಿದಂತೆ ಸಮಾಧಾನ ಮಾತು ಸಹ ಆಡಿಲ್ಲ ಎಂಬುದು ಆಕ್ರೋಶಕ್ಕೆ ಕಾರಣವಾಗಿದೆ.

ಭಾರೀ ಮಳೆಯಿಂದಾಗಿ ಕರ್ನಾಟಕದಲ್ಲಿ 38,400 ಕೋಟಿ ರುಪಾಯಿ ನಷ್ಟ ಆಗಿರುವುದಾಗಿ ರಾಜ್ಯ ಸರ್ಕಾರ ಅಂದಾಜು ಮಾಡಿತ್ತು. ಶೀಘ್ರವೇ 3,400 ಕೋಟಿ ಬಿಡುಗಡೆ ಮಾಡುವಂತೆ ಕೇಳಿತ್ತು.

English summary
BJP led union government approved to release 1200 crore on account basis to Karnataka flood relief.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X