ಆಲಮಟ್ಟಿ-ಚಿತ್ರದುರ್ಗ ನೂತನ ರೈಲು ಮಾರ್ಗಕ್ಕೆ ಕೇಂದ್ರದ ಒಪ್ಪಿಗೆ
ಕೊಪ್ಪಳ, ಮಾರ್ಚ್ 09 : ಆಲಮಟ್ಟಿಯಿಂದ ಚಿತ್ರದುರ್ಗದವರೆಗೆ ಹೊಸ ರೈಲು ಮಾರ್ಗ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸರ್ವೆ ಕಾರ್ಯಕ್ಕಾಗಿ 1.32 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ.
ಕೊಪ್ಪಳ ಸಂಸದ ಸಂಗಣ್ಣ ಕರಡಿ ಈ ಕುರಿತು ಮಾಹಿತಿ ನೀಡಿದ್ದಾರೆ. 'ಕೇಂದ್ರ ಸರ್ಕಾರ ಹೊಸ ಮಾರ್ಗ ಮಂಜೂರು ಮಾಡಿದ್ದು, ಸೊಲ್ಲಾಪುರ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಹೊಸಪೇಟೆ ಜನರಿಗೆ ಈ ರೈಲು ಮಾರ್ಗದಿಂದ ಅನುಕೂಲವಾಗಲಿದೆ' ಎಂದರು.
ಸಂಗಣ್ಣ ಕರಡಿ ಅವರು ಕೇಂದ್ರ ಸರ್ಕಾರಕ್ಕೆ ಹೊಸ ರೈಲು ಮಾರ್ಗಕ್ಕಾಗಿ ಮನವಿ ಸಲ್ಲಿಸಿದ್ದರು. ಮನವಿಗೆ ಸರ್ಕಾರ ಸ್ಪಂದಿಸಿದ್ದು, ಅದರಂತೆ ಆಲಮಟ್ಟಿಯಿಂದ ಚಿತ್ರದುರ್ಗದವರೆಗೆ ಹೊಸ ರೈಲು ಮಾರ್ಗವನ್ನು ಮಂಜೂರು ಮಾಡಿದೆ, ಸರ್ವೇ ಕಾರ್ಯಕ್ಕಾಗಿ ರೂ. 1.32 ಕೋಟಿಗಳನ್ನು ಬಿಡುಗಡೆ ಮಾಡಿದೆ.

ಈ ರೈಲು ಮಾರ್ಗದಿಂದ ವಾಣಿಜ್ಯ, ಕೈಗಾರಿಕೆ ಮತ್ತು ಪ್ರವಾಸೋದ್ಯಮದ ಅಭಿವೃದ್ಧಿಗೂ ಸಹಾಯಕವಾಗಲಿದೆ. ಪ್ರಸ್ತುತ ಇರುವ ಗುಂಟಕಲ್ ಮತ್ತು ಹುಬ್ಬಳ್ಳಿ ಮೂಲಕ ಇರುವ ಮಾರ್ಗಕ್ಕಿಂತ 170 ಕಿ.ಮೀ. ಅಂತರ ಹೊಸ ಮಾರ್ಗದಿಂದ ಕಡಿಮೆಯಾಗಲಿದೆ.
ಇದರಿಂದಾಗಿ ಸುಮಾರು 2.30 ಗಂಟೆಗಳ ಕಾಲದ ಪ್ರವಾಸದ ಅವಧಿಯೂ ಕಡಿಮೆಯಾಗಿ ಜನರಿಗೆ ಅನುಕೂಲವಾಗಲಿದೆ. ಹೊಸ ಮಾರ್ಗಕ್ಕೆ ಒಪ್ಪಿಗೆ ನೀಡಿದ ರೈಲ್ವೆ ಇಲಾಖೆ, ಇಲಾಖೆಯ ಅಧಿಕಾರಿಗಳಿಗೆ ಕೊಪ್ಪಳ ಸಂಸದರು ಅಭಿನಂದನೆ ಸಲ್ಲಿಸಿದ್ದಾರೆ.
ಆಲಮಟ್ಟಿ-ಚಿತ್ರದುರ್ಗ ಈ ಹೊಸ ರೈಲು ಮಾರ್ಗ ಕೂಡಲಸಂಗಮ, ಹುನಗುಂದಾ, ಇಲಕಲ್, ಕುಷ್ಟಗಿ, ಕುಕನಪಳ್ಳಿ, ಹಿಟ್ನಾಳ, ಟಿ.ಬಿ. ಡ್ಯಾಂ ಮತ್ತು ಕೂಡ್ಲಿಗಿ ಮೂಲಕ ಹಾದು ಹೋಗಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications