ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್: ಸದನದಲ್ಲಿ ಗೋವಿಂದ ಕಾರಜೋಳ ಹರ್ಷ
ಬೆಳಗಾವಿ,ಡಿಸೆಂಬರ್ 29: ಕಳಸಾ ಬಂಡೂರಿ ನಾಲಾ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದಕ್ಕೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕಳಸಾ ಬಂಡೂರಿ ನಾಲಾ ಯೋಜನೆಯ ವಿಸ್ತೃತ ಯೋಜನೆಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ತಿಳಿಸಿದರು.
ಇನ್ನೂ ಕಳಸಾ ಬಂಡೂರಿ ನಾಲೆ ಆಗಬೇಕೆಂದು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿಲ್ಲ ಅಂದಿದ್ದರೆ ಈ ಯೋಜನೆಗೆ ಮುಕ್ತಿ ಸಿಗುತ್ತಿದ್ದಿಲ್ಲ. ಅವರರು ಆಡಳಿತಗಾರರು, ತಾಂತ್ರಿಕ ಪರಿಣಿತರು, ನೀರಾವರಿ ತಜ್ಜರು ಹೌದು. ಬಸವರಾಜ ಬೊಮ್ಮಾಯಿ ಅವರ ಮಾರ್ಗದರ್ಶನದಲ್ಲಿ ಇಡಿ ಡಿಪಿಆರ್ ಅನ್ನು ಪರಿಷ್ಕರಿಸಿದ್ದೇವೆ ಎಂದು ಹೇಳಿದರು.

ಜಲಾಶಯದ ಎತ್ತರಗಳನ್ನು ಕಡಿಮೆ ಮಾಡಿ ನಮಗೆ ನಿಗದಿಯಾಗಿರುವ ಕಳಸಾದಲ್ಲಿ 1.72 ಟಿಎಂಸಿ, ಬಂಡೂರಿಯಲ್ಲಿ 2.18 ಟಿಎಂಸಿ ಸೇರಿ ಒಟ್ಟು 3.9 ಟಿಎಂಸಿ ನೀರನ್ನು ಉಪಯೋಗ ಮಾಡಿಕೊಳ್ಳುವುದಕ್ಕೆ ಪರಿಷ್ಕೃತ ಡಿಪಿಆರ್ ಅನ್ನು ಸಲ್ಲಿಸಿದ್ದೇವು. ಅದಾದ ಮೇಲೆ ಹತ್ತಾರು ಬಾರಿ ದಿಲ್ಲಿಗೆ ಹೋಗಿ ಬಂದಿದ್ದೇವೆ. ಮುಖ್ಯಮಂತ್ರಿಗಳು ಸ್ವತಃ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹತ್ತಿರ ಅನೇಕ ಬಾರಿ ಭೇಟಿ ಮಾಡಿ ಈ ಯೋಜನೆಗೆ ಒಪ್ಪಿಗೆ ಪಡೆದುಕೊಂಡಿದ್ದೇವೆ ಎಂದರು.

ನಮ್ಮವರೇ ಆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ನಮಗೆ ಜೊತೆ ಸಾಥ್ ನೀಡಿದ್ದರು. ಉತ್ತರ ಕರ್ನಾಟಕದ ಬೆಳಗಾವಿಯಲ್ಲಿಯೇ ಅಧಿವೇಶನ ನಡೆದಿರುವಾಗಲೇ ಕಳಸಾ ಬಂಡೂರಿ ನಾಲೆ ಯೋಜನೆಗೆ ಕೇಂದ್ರ ಅನುಮತಿ ನೀಡಿರುವುದು ಸಂತೋಷವಾಗಿದೆ. ಇದಕ್ಕೆ ಕಾರಣರಾದ ನಾಯಕರು ಹಾಗೂ ಅಧಿಕಾರಿಗಳು, ಹೋರಾಟಗಾರರಿಗೆ ಅಭಿನಂದನೆ ತಿಳಿಸಿದರು
More From
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications