ಸಿದ್ದರಾಮಯ್ಯ ಪದಗ್ರಹಣ ಮಧ್ಯೆಯೂ ರಾಜ್ಯದ 592 ಕೇಂದ್ರಗಳಲ್ಲಿ ಸಿಇಟಿ-2023 ಪರೀಕ್ಷೆ ಸುಸೂತ್ರ
ಬೆಂಗಳೂರು, ಮೇ 21: ಕಾಂಗ್ರೆಸ್ನ ಬೃಹತ್ ಸಮಾರಂಭದ ಮಧ್ಯೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (CET-2023) ಮೊದಲ ದಿನವಾದ ಶನಿವಾರ ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ಯಾವುದೇ ಅಡೆತಡೆ ಇಲ್ಲದೆ ಯಶಸ್ವಿಯಾಗಿ ನಡೆಯಿತು.
ಪ್ರಾಧಿಕಾರದ ಮೂಲಗಳು ಅಧಿಕೃತ ಮಾಹಿತಿ ನೀಡಿವೆ. ಸಿಇಟಿ ಮೊದಲ ದಿನವಾದ ಮೇ 20 ಶನಿವಾರ ಕಾಂಗ್ರೆಸ್ನಿಂದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. ಈ ಸಂಬಂಧ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಒಂದು ಲಕ್ಷ ಜನ ಸೇರುವಂತೆ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಿಂದ ಸಂಚಾರ ತೊಂದರೆ ಉಂಟಾಗಿ ಅಭ್ಯರ್ಥಿಗಳ ಸಿಇಟಿ ಪರೀಕ್ಷೆಗೆ ತೊಂದರೆಯಾಗುತ್ತದೆ ಎಂದು ಹೇಳಲಾಗಿತ್ತು. ಕಾರ್ಯಕ್ರಮಕ್ಕೆ ಬಿಜೆಪಿಯಿಂದ ವಿರೋಧವು ವ್ಯಕ್ತವಾಗಿತ್ತು. ಆದರೆ ಈ ಮಧ್ಯೆಯು ಸುಸೂತ್ರವಾಗಿ ಬೆಂಗಳೂರು ಸೇರಿದಂತೆ ರಾಜ್ಯದ 592 ಕೇಂದ್ರಗಳಲ್ಲಿ ನಡೆಯಿತು. ಎಲ್ಲಿಯೂ ಸಹ ಅಹಿತಕರ ಘಟನೆಗಳ ವರದಿಯಾಗಿಲ್ಲ.
ಸಿಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಒಟ್ಟು 2,61,610 ವಿದ್ಯಾರ್ಥಿಗಳ ಪೈಕಿ ಜೀವಶಾಸ್ತ್ರ ಪರೀಕ್ಷೆಗೆ 2,00,457 (82.53%) ಹಾಗೂ ಗಣಿತ ಪರೀಕ್ಷೆಗೆ 2,39,716 (93.78%) ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನೂತನ ಮುಖ್ಯಮಂತ್ರಿಗಳ ಪದಗ್ರಹಣ ಸ್ವೀಕಾರ ಬೃಹತ್ ಕಾರ್ಯಕ್ರಮ ಇದ್ದುದರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಗತ್ಯಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿತ್ತು. ಮುಖ್ಯವಾಗಿ, ವಾಹನ ದಟ್ಟಣೆಯಲ್ಲಿ ಸಿಲುಕಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ತಲುಪುವುದು ತಡವಾಗಬಾರದೆಂದು ಕ್ರಮವಹಿಸಲಾಗಿತ್ತು.

ಇಂದು ಎರಡನೇ ದಿನದ ಪರೀಕ್ಷೆ
ಅದಕ್ಕಾಗಿ ಬೆಂಗಳೂರಿನ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವವರಿಗೆ ನಿಗದಿತ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಆಯಾ ಕೇಂದ್ರಕ್ಕೆ ಬರುವಂತೆ ಸೂಚಿಸಲಾಗಿತ್ತು. ಅಲ್ಲದೇ, ವಿದ್ಯಾರ್ಥಿಗಳಿಗೆ ಕೇಂದ್ರವನ್ನು ತಲುಪಲು ಸಹಾಯ ಮಾಡುವಂತೆ ಪೊಲೀಸರ ಸಹಕಾರವನ್ನು ಕೂಡ ಕೋರಲಾಗಿತ್ತು.
ಇಂದು ಭಾನುವಾರ ಮೇ 21ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಿಗೆ ನಿಗದಿಯಾಗಿರುವಂತೆ ಎರಡನೇ ದಿನದ ಸಿಇಟಿ ಪರೀಕ್ಷೆಗಳನ್ನು ಅಭ್ಯರ್ಥಿಗಳು ಆಯಾ ನಿಗದಿತ ಪರೀಕ್ಷಾ ಕೇಂದ್ರಗಳಲ್ಲಿ ಬರೆಯಲಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications