CET Exam 2024: ವೃತ್ತಿಪರ ಕೋರ್ಸ್ಗಳ 'ಸಿಇಟಿ ಪರೀಕ್ಷೆ' ದಿನಾಂಕ ಘೋಷಣೆ, ಕೋರ್ಸ್-ವೇಳಾಪಟ್ಟಿ ಮಾಹಿತಿ
ಬೆಂಗಳೂರು, ಡಿಸೆಂಬರ್ 24: ಕರ್ನಾಟಕ ರಾಜ್ಯ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸ್ಗಳ 'ಸಾಮಾನ್ಯ ಪ್ರವೇಶ ಪರೀಕ್ಷೆ' (CET) 2024ಕ್ಕೆ ದಿನಾಂಕ ನಿಗದಿ ಮಾಡಿದ್ದು, ಶನಿವಾರ ವೇಳಾಪಟ್ಟಿ ಪ್ರಕಟಿಸಿದೆ. ಯಾವ ಕೋರ್ಸ್ಗಳು, ಪರೀಕ್ಷೆ ಆರಂಭ ಬಗ್ಗೆ ತಿಳಿಯಿರಿ.
ಇಂಜಿನಿಯರಿಂಗ್, ಫಾರ್ಮಸಿ, ಪಶುವೈದ್ಯಕೀಯ ವಿಜ್ಞಾನ ಮತ್ತು ಕೃಷಿಯಂತಹ ಕೋರ್ಸ್ಗಳಿಗೆ 2024 ರ ಏಪ್ರಿಲ್ 20 ಮತ್ತು 21 ರಂದು CET-2024 ಅನ್ನು ನಡೆಸಲು ಕರ್ನಾಟಕ ರಾಜ್ಯ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.

ಮುಂದಿನ ತಿಂಗಳು ಜನವರಿ 10ರಿಂದ ಅರ್ಜಿಗಳ ನೋಂದಣಿ ಮತ್ತು ಭರ್ತಿ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಎಸ್ ಅವರು ಮೊನ್ನೆಯಷ್ಟೇ ಮಾಹಿತಿ ನೀಡಿದರು. ಮೊದಲ ಬಾರಿಗೆ, ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸ್ಗಳಿಗೆ ಪರೀಕ್ಷೆ ಮತ್ತು ಕೌನ್ಸೆಲಿಂಗ್ಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಅರ್ಜಿ ಸಲ್ಲಿಸಬೇಕಿದೆ.
ಕೋರ್ಸ್ಗಳನ್ನು ಸೇರಬಯಸುವ ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡುವಾಗ ತಮ್ಮ ಸರಿಯಾದ ಆರ್ಡಿ (ಕಂದಾಯ ದಾಖಲೆಗಳು) ಸಂಖ್ಯೆಯನ್ನು ನಮೂದಿಸುವಂತೆ ಪ್ರಾಧಿಕಾರ ಸೂಚಿಸಿದೆ. ಅದು ಇಲ್ಲದೆ ಪ್ರಕ್ರಿಯೆಯು ಅಪೂರ್ಣವಾಗಿರುತ್ತದೆ. ಅಭ್ಯರ್ಥಿಯು ಆರ್ಡಿ ಸಂಖ್ಯೆ ಇಲ್ಲದೆ ಜಾತಿ ಪ್ರಮಾಣಪತ್ರ ಹೊಂದಿದ್ದರೆ, ಅವರು ಆರ್ಡಿ ಸಂಖ್ಯೆ ಹೊಂದಿರುವ ಹೊಸ ಪ್ರಮಾಣಪತ್ರ ಪಡೆಯಬೇಕು ಅಥವಾ ಅವರು ಜಾತಿ ಮೀಸಲಾತಿಗೆ ಅರ್ಹತೆ ಸಿಗುವುದಿಲ್ಲ ಎಂದು ತಿಳಿಸಿದೆ..
ಹೆಚ್ಚಿನ ಮಾಹಿತಿಗೆ ಇಲ್ಲಿ ಸಂಪರ್ಕಿಸಿ
ಬಿಪಿಟಿ, ಆರ್ಕಿಟೆಕ್ಚರ್, ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಬಿಪಿಒ ಕೋರ್ಸ್ಗಳಿಗೆ ಆಕಾಂಕ್ಷಿ ವಿದ್ಯಾರ್ಥಿಗಳು ತಮ್ಮ ಅರ್ಜಿಗಳನ್ನು ಸಹ ಭರ್ತಿ ಮಾಡಬೇಕು. ಹೆಚ್ಚಿನ ಪ್ರಶ್ನೆಗಳಿಗೆ [email protected] ಗೆ ಮೇಲ್ ಮಾಡುವಂತೆ ಪ್ರಾಧಿಕಾರ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನೂ ವಿವಿಧ ಕೋರ್ಸ್ಗಳಿಗೆ ಯಾವಾಗ ಕಾಮನ್ ಎಂಟ್ರನ್ಸ್ ಟೆಸ್ಟ್ (CET-2024) ನಡೆಸುತ್ತಾರೆ ಎಂದು ಕಾದಿದ್ದ ಅಭ್ಯರ್ಥಿಗಳು ಇದೀಗ, ನಿಮ್ಮ ಇಷ್ಟದ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸ್ಗಳಿಗೆ ನಡೆಸುತ್ತಿರುವ ಸಿದ್ಧತೆಯನ್ನು ಮತ್ತಷ್ಟು ಚುರುಕುಗೊಳಿಸಬಹುದು.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications