CET Exam 2024: ವೃತ್ತಿಪರ ಕೋರ್ಸ್ಗಳ 'ಸಿಇಟಿ ಪರೀಕ್ಷೆ' ದಿನಾಂಕ ಘೋಷಣೆ, ಕೋರ್ಸ್-ವೇಳಾಪಟ್ಟಿ ಮಾಹಿತಿ
ಬೆಂಗಳೂರು, ಡಿಸೆಂಬರ್ 24: ಕರ್ನಾಟಕ ರಾಜ್ಯ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸ್ಗಳ 'ಸಾಮಾನ್ಯ ಪ್ರವೇಶ ಪರೀಕ್ಷೆ' (CET) 2024ಕ್ಕೆ ದಿನಾಂಕ ನಿಗದಿ ಮಾಡಿದ್ದು, ಶನಿವಾರ ವೇಳಾಪಟ್ಟಿ ಪ್ರಕಟಿಸಿದೆ. ಯಾವ ಕೋರ್ಸ್ಗಳು, ಪರೀಕ್ಷೆ ಆರಂಭ ಬಗ್ಗೆ ತಿಳಿಯಿರಿ.
ಇಂಜಿನಿಯರಿಂಗ್, ಫಾರ್ಮಸಿ, ಪಶುವೈದ್ಯಕೀಯ ವಿಜ್ಞಾನ ಮತ್ತು ಕೃಷಿಯಂತಹ ಕೋರ್ಸ್ಗಳಿಗೆ 2024 ರ ಏಪ್ರಿಲ್ 20 ಮತ್ತು 21 ರಂದು CET-2024 ಅನ್ನು ನಡೆಸಲು ಕರ್ನಾಟಕ ರಾಜ್ಯ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.

ಮುಂದಿನ ತಿಂಗಳು ಜನವರಿ 10ರಿಂದ ಅರ್ಜಿಗಳ ನೋಂದಣಿ ಮತ್ತು ಭರ್ತಿ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಎಸ್ ಅವರು ಮೊನ್ನೆಯಷ್ಟೇ ಮಾಹಿತಿ ನೀಡಿದರು. ಮೊದಲ ಬಾರಿಗೆ, ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸ್ಗಳಿಗೆ ಪರೀಕ್ಷೆ ಮತ್ತು ಕೌನ್ಸೆಲಿಂಗ್ಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಅರ್ಜಿ ಸಲ್ಲಿಸಬೇಕಿದೆ.
ಕೋರ್ಸ್ಗಳನ್ನು ಸೇರಬಯಸುವ ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡುವಾಗ ತಮ್ಮ ಸರಿಯಾದ ಆರ್ಡಿ (ಕಂದಾಯ ದಾಖಲೆಗಳು) ಸಂಖ್ಯೆಯನ್ನು ನಮೂದಿಸುವಂತೆ ಪ್ರಾಧಿಕಾರ ಸೂಚಿಸಿದೆ. ಅದು ಇಲ್ಲದೆ ಪ್ರಕ್ರಿಯೆಯು ಅಪೂರ್ಣವಾಗಿರುತ್ತದೆ. ಅಭ್ಯರ್ಥಿಯು ಆರ್ಡಿ ಸಂಖ್ಯೆ ಇಲ್ಲದೆ ಜಾತಿ ಪ್ರಮಾಣಪತ್ರ ಹೊಂದಿದ್ದರೆ, ಅವರು ಆರ್ಡಿ ಸಂಖ್ಯೆ ಹೊಂದಿರುವ ಹೊಸ ಪ್ರಮಾಣಪತ್ರ ಪಡೆಯಬೇಕು ಅಥವಾ ಅವರು ಜಾತಿ ಮೀಸಲಾತಿಗೆ ಅರ್ಹತೆ ಸಿಗುವುದಿಲ್ಲ ಎಂದು ತಿಳಿಸಿದೆ..
ಹೆಚ್ಚಿನ ಮಾಹಿತಿಗೆ ಇಲ್ಲಿ ಸಂಪರ್ಕಿಸಿ
ಬಿಪಿಟಿ, ಆರ್ಕಿಟೆಕ್ಚರ್, ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಬಿಪಿಒ ಕೋರ್ಸ್ಗಳಿಗೆ ಆಕಾಂಕ್ಷಿ ವಿದ್ಯಾರ್ಥಿಗಳು ತಮ್ಮ ಅರ್ಜಿಗಳನ್ನು ಸಹ ಭರ್ತಿ ಮಾಡಬೇಕು. ಹೆಚ್ಚಿನ ಪ್ರಶ್ನೆಗಳಿಗೆ [email protected] ಗೆ ಮೇಲ್ ಮಾಡುವಂತೆ ಪ್ರಾಧಿಕಾರ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನೂ ವಿವಿಧ ಕೋರ್ಸ್ಗಳಿಗೆ ಯಾವಾಗ ಕಾಮನ್ ಎಂಟ್ರನ್ಸ್ ಟೆಸ್ಟ್ (CET-2024) ನಡೆಸುತ್ತಾರೆ ಎಂದು ಕಾದಿದ್ದ ಅಭ್ಯರ್ಥಿಗಳು ಇದೀಗ, ನಿಮ್ಮ ಇಷ್ಟದ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸ್ಗಳಿಗೆ ನಡೆಸುತ್ತಿರುವ ಸಿದ್ಧತೆಯನ್ನು ಮತ್ತಷ್ಟು ಚುರುಕುಗೊಳಿಸಬಹುದು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications