CET Exam 2026: ಸಿಇಟಿ 2026 ದಿನಾಂಕ ಪ್ರಕಟ, ಏಪ್ರಿಲ್ ತಿಂಗಳಲ್ಲಿ ಪರೀಕ್ಷೆಗೆ ಮುಹೂರ್ತ
ಕರ್ನಾಟಕ ರಾಜ್ಯದಲ್ಲಿ ಪರೀಕ್ಷೆಗಳು ಮೆಲ್ಲಗೆ ಹತ್ತಿರವಾಗುತ್ತಿವೆ, ಇನ್ನು ಕೆಲವೇ ದಿನಗಳಲ್ಲಿ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ದಿನಗಳು ಬರಲಿವೆ. ಇದರ ಜೊತೆಗೆ ಸಿಇಟಿ ಪರೀಕ್ಷೆ 2026ರ ಬಗ್ಗೆ ಮಾಹಿತಿ ಪಡೆಯಲು ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಈಗ ಗುಡ್ ನ್ಯೂಸ್ ಸಿಕ್ಕಿದೆ. ಸಿಇಟಿ ಪರೀಕ್ಷೆ 2026ರ ಬಗ್ಗೆ ಇಂದು ಮಾಹಿತಿ ಹೊರಬಿದ್ದಿದ್ದು, ಏಪ್ರಿಲ್ ತಿಂಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ.
ಪಿಯುಸಿ ನಂತರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸಾಮಾನ್ಯ ಪ್ರವೇಶ ಪರೀಕ್ಷೆ ಎಂದರೆ ಸಿಇಟಿ-CET ಅತ್ಯಂತ ಮುಖ್ಯವಾದ ಹಂತ. ಹೀಗಾಗಿ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ 2026ರ ಬಗ್ಗೆ ಮಾಹಿತಿಗಾಗಿ ಕಾಯುತ್ತಿದ್ದರು. ಇಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 2026ನೇ ಸಾಲಿನ ಸಿಇಟಿ ಬಗ್ಗೆ ಸಂಪೂರ್ಣ ಮಾಹಿತಿ ಒಳಗೊಂಡಿರುವ ಸಿಇಟಿ ದಿಕ್ಕೂಚಿ ಎಂಬ ಕಿರು ಹೊತ್ತಿಗೆ ಬಿಡುಗಡೆ ಕೂಡ ಮಾಡಲಾಗಿದೆ.

2026 ಸಿಇಟಿ ಪರೀಕ್ಷೆಗಳು ಯಾವಾಗ?
ಇನ್ನು ಸಿಇಟಿ ದಿಕ್ಕೂಚಿ ಕಿರು ಹೊತ್ತಿಗೆ ಬಿಡುಗಡೆ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವರ ಜೊತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ ಉಪಸ್ಥಿತರಿದ್ದರು. ಏಪ್ರಿಲ್ 23 ಹಾಗೂ 24ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನ ಸಲ್ಲಿಸಲು ಜನವರಿ 17ರಿಂದ ಅವಕಾಶ ಕಲ್ಪಿಸಲಾಗಿದ್ದು, ಮಲ್ಲೇಶ್ವರಂನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಸಿಇಟಿ ದಿಕ್ಕೂಚಿ ಕಿರು ಹೊತ್ತಿಗೆ ರಿಲೀಸ್ ಮಾಡಲಾಯಿತು. ಈ ಮೂಲಕ ವಿದ್ಯಾರ್ಥಿಗಳಿಗೆ ಮತ್ತೊಂದು ಟೆನ್ಷನ್ ಕಡಿಮೆ ಆದಂತೆ ಆಗಿದ್ದು, ಅರ್ಜಿ ಸಲ್ಲಿಸಲು ಸಿದ್ಧರಾಗುತ್ತಿದ್ದಾರೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications