CET Good News: ಈ ಮಕ್ಕಳಿಗೂ ಸಿಇಟಿಯಲ್ಲಿ ಅವಕಾಶ: ರಾಜ್ಯ ಸರ್ಕಾರದಿಂದ ಗುಡ್ನ್ಯೂಸ್
CET Good News: ಕರ್ನಾಟಕ ಸರ್ಕಾರವು ಸಿಇಟಿಗೆ ಸಂಬಂಧಿಸಿದಂತೆ ಭರ್ಜರಿ ಗುಡ್ನ್ಯೂಸ್ ನೀಡಿದೆ. ಕರ್ನಾಟಕದಲ್ಲಿ ಸಿಇಟಿಗೆ ಸಂಬಂಧಿಸಿದಂತೆ ಹೊಸದೊಂದು ಬಿಗ್ ಅಪ್ಡೇಟ್ಸ್ ನೀಡಲಾಗಿದೆ. ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 3ರಷ್ಟು ಮೀಸಲಾತಿ ಕಲ್ಪಿಸಿದ್ದು, ಈವರೆಗೆ 180 ಜನ ಮೀಸಲಾತಿಯನ್ನು ಪಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ. ಇದರೊಂದಿಗೆ ಮತ್ತೊಂದು ಗುಡ್ನ್ಯೂಸ್ ಅನ್ನೂ ನೀಡಲಾಗಿದೆ.
ಬೆಂಗಳೂರಿನ ಆಡುಗೋಡಿ ಸಿಎಆರ್ ಕವಾಯತು ಮೈದಾನದಲ್ಲಿ ಗುರುವಾರ ನವೆಂಬರ್ 20ರಂದು ನಡೆದ "ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025" ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿರುವ ಅವರು, ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಕ್ರೀಡಾ ಮೀಸಲಾತಿಯ ಸದ್ಬಳಕೆ ಮಾಡಿಕೊಂಡು 180 ಜನ ಪಿಎಸ್ಐ, ಪೇದೆ ಹುದ್ದೆಗಳಿಗೆ ನೇಮಕಾತಿ ಹೊಂದಿದ್ದಾರೆ. ಅದೇರೀತಿ, ಪೊಲೀಸ್ ಕುಟುಂಬದಿಂದ ಬಂದ ಮಕ್ಕಳಿಗೆ ಸಿಇಟಿಯಲ್ಲಿ ಅವಕಾಶ ಕಲ್ಪಿಸಲಾಗುವುದು. ಕ್ರೀಡೆ ದೈಹಿಕವಾಗಿ ಮಾತ್ರವಲ್ಲದೇ, ಮಾನಸಿಕವಾಗಿಯೂ ನಮ್ಮನ್ನು ಹೆಚ್ಚು ಸದೃಡಗೊಳಿಸುತ್ತದೆ. ನಮ್ಮ ಜೀವನದ ಅನೇಕ ಸಂದರ್ಭಗಳಲ್ಲಿ ಸೋಲು-ಗೆಲುವುಗಳ ಅನುಭವಗಳು ಎದುರಾಗುತ್ತವೆ. ಸೋತಾಗ ನಿರಾಶೆಯಾಗುತ್ತದೆ. ಕ್ರೀಡೆಗಳು ಆತ್ಮಸ್ಥೈರ್ಯ ಹೆಚ್ಚಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಅಲ್ಲದೇ ಮುಂದುವರಿದು ಕರ್ನಾಟಕ ಪೊಲೀಸ್ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಅನೇಕ ಸಂದರ್ಭಗಳಲ್ಲಿ ಸದನದ ಒಳಗಡೆ ಮತ್ತು ಹೊರಗಡೆ ಹೇಳಿದ್ದೇನೆ. ಅರೋಪಿಗಳನ್ನು ಹಿಡಿಯುವುದರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಮುಂಚೂಣಿಯಲ್ಲಿದೆ. ಯಾವುದೇ ರೀತಿಯ ಘಟನೆಗಳು ನಡೆದಾಗ ಸ್ವಾಭಾವಿಕವಾಗಿ ಟೀಕೆಗಳು ಬರುತ್ತವೆ. ಟೀಕೆಗಳು ನಮಗೆ ಶಕ್ತಿಯನ್ನು ಕೊಡುತ್ತವೆ. ಟೀಕೆಗಳನ್ನು ಸವಾಲಾಗಿ ಸ್ವೀಕರಿಸಿ, ಹೆಚ್ಚಿನ ಕೆಲಸದ ಮೂಲಕ ನಮ್ಮ ಸಾಮರ್ಥ್ಯವನ್ನು ತೋರಿಸಬೇಕು ಎಂದು ಹೇಳಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತರು ಉಪಸ್ಥಿತರಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications