CET 2025: ವೈದ್ಯಕೀಯ ಕೋರ್ಸ್ ಅಭ್ಯರ್ಥಿಗಳಿಗೆ ಅಂತಿಮ ಅವಕಾಶ, ಆ.16 ಕೊನೆ ದಿನ! KEA ಸೂಚನೆಗಳು ಇಲ್ಲಿವೆ
ಬೆಂಗಳೂರು, ಆಗಸ್ಟ್ 13: ಕರ್ನಾಟಕ ರಾಜ್ಯ ಪರೀಕ್ಷಾ ಪ್ರಾಧಿಕಾರವು (ಕೆಇಎ) ಇತ್ತೀಚೆಗೆ UGCET/UGNEET-25 ಪರೀಕ್ಷೆ ಬರೆದು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸುವವರಿಗೆ ಗುಡ್ ನ್ಯೂಸ್ ನೀಡಿದೆ. ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಛಾಯ್ಸ್ ದಾಖಲಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ತಪ್ಪದೆ ನಿಗದಿತ ಅವಧಿಯಲ್ಲಿ ಶುಲ್ಕ ಪಾವತಿಸಿ ಕಾಲೇಜಿಗೆ ಪ್ರವೇಶ ಪಡೆಯಲು ಕೊನೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಬುಧವಾರ ತಿಳಿಸಿದ್ದಾರೆ.
ಎಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್, ಫಾರ್ಮ್-ಡಿ, ಯೋಗ ಮತ್ತು ನ್ಯಾಚುರೋಪತಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್, ಆರ್ಕಿಟೆಕ್ಚರ್, ಬಿ ಎಸ್ ಸಿ ನರ್ಸಿಂಗ್, ಹೋಮಿಯೋಪಥಿ ಕೋರ್ಸ್ ಗಳಿಗೆ ಸೀಟು ಹಂಚಿಕೆಯಾಗಿರುವವರು ಛಾಯ್ಸ್ ದಾಖಲಿಸಲು ಆಗಸ್ಟ್ 14 ರಂದು ಬೆಳಿಗ್ಗೆ 11ಗಂಟೆವರೆಗೆ ಅವಕಾಶ ನೀಡಲಾಗಿದೆ.

ಶುಲ್ಕ ಪಾವತಿಗೆ ಆಗಸ್ಟ್ 14ರಂದು ಸಂಜೆ 4ರವರೆಗೆ ಅವಕಾಶ ನೀಡಲಾಗಿದೆ. ಕಾಲೇಜಿಗೆ ವರದಿ ಮಾಡಿಕೊಳ್ಳಲು ಆಗಸ್ಟ್ 15 ಕೊನೆ ದಿನ. ಈ ವೇಳಾಪಟ್ಟಿಯಲ್ಲಿ ಯಾವ ಬದಲಾವಣೆ ಇರುವುದಿಲ್ಲ. ದಿನಾಂಕ ಕೂಡ ವಿಸ್ತರಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
UGNEET-25: ಆ.14ರಿಂದ ಛಾಯ್ಸ್ ದಾಖಲು
ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳಿಗೆ ಸೀಟು ಹಂಚಿಕೆಯಾಗಿರುವವರಿಗೆ ಛಾಯ್ಸ್ ದಾಖಲಿಸಲು ಆಗಸ್ಟ್ 14ರಂದು ಮಧ್ಯಾಹ್ನ 1 ಗಂಟೆಯಿಂದ ಲಿಂಕ್ ತೆರೆಯಲಾಗುವುದು. ಆಗಸ್ಟ್ 16ರವರೆಗೆ ಛಾಯ್ಸ್ ದಾಖಲಿಸಬಹುದು. ಶುಲ್ಕ ಪಾವತಿಸಲು ಆಗಸ್ಟ್ 18 ಹಾಗೂ ಕಾಲೇಜಿಗೆ ವರದಿ ಮಾಡಿಕೊಳ್ಳಲು ಆಗಸ್ಟ್ 19 ಕೊನೆ ದಿನವಾಗಿದೆ. ನಂತರ ಬಂದವರಿಗೆ ಅವಕಾಶ ನೀಡಲಾಗುವುದಿಲ್ಲ.
ಛಾಯ್ಸ್-1 ಆಯ್ಕೆ ಮಾಡಿದವರು ಆನ್ ಲೈನ್ ನಲ್ಲಿ ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಳ್ಳಬೇಕು. ಬಳಿಕ ಎಲ್ಲ ಮೂಲ ದಾಖಲೆಗಳ ಸಮೇತ ಸಂಬಂಧಪಟ್ಟ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
ಈ ಬಾರಿ ಮೂಲ ದಾಖಲೆಗಳ ಪರಿಶೀಲನೆ ಕಾಲೇಜು ಹಂತದಲ್ಲೇ ಆಗುತ್ತದೆ. ಹೀಗಾಗಿ ಕ್ಲೇಮ್ ಪ್ರಕಾರ ಮೂಲ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು. ದಾಖಲೆಗಳು ಸರಿ ಇವೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವ ಜವಾಬ್ದಾರಿಯನ್ನು ಕಾಲೇಜುಗಳಿಗೂ ನೀಡಲಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ











Click it and Unblock the Notifications