Get Updates
Get notified of breaking news, exclusive insights, and must-see stories!

CH Vijayashankar: ಮೈಸೂರು ಮಾಜಿ ಸಂಸದ ಸಿ. ಎಚ್. ವಿಜಯಶಂಕರ್ ರಾಜ್ಯಪಾಲರಾಗಿ ನೇಮಕ

ಬೆಂಗಳೂರು, ಜುಲೈ 28: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಸಿ. ಎಚ್. ವಿಜಯಶಂಕರ್ ಸಹ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

ಭಾನುವಾರ ಈ ಕುರಿತು ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಸಿ. ಎಚ್. ವಿಜಯಶಂಕರ್ ಅವರನ್ನು ಮೇಘಾಲಯ ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

CH Vijayashankar Appointed As Governor Of Meghalaya

ಸಿ. ಎಚ್. ವಿಜಯಶಂಕರ್ ಪರಿಚಯ: ಸಿ. ಎಚ್. ವಿಜಯಶಂಕರ್ ಅವರ ಪೂರ್ಣ ಹೆಸರು ಚಂದ್ರಶೇಖರ್ ಹೆಚ್. ವಿಜಯಶಂಕರ್. 1956ರ ಅಕ್ಟೋಬರ್ 21ರಂದು ಅವರು ಜನಿಸಿದರು. ಮೂಲತಃ ರಾಣೆಬೆನ್ನೂರಿನವರಾದ ಅವರು ರಾಜಕೀಯ ನೆಲೆ ಕಂಡುಕೊಂಡಿದ್ದು ಮೈಸೂರಿನಲ್ಲಿ.

ಸಿ. ಎಚ್. ವಿಜಯಶಂಕರ್ 1998ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿ ಸಂಸದರಾಗಿ ಆಯ್ಕೆಯಾದರು. 2004ರ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು, 316,442 ಮತಗಳನ್ನು ಪಡೆದು ಜೆಡಿಎಸ್‌ನ ಎ. ಎಸ್. ಗುರುಸ್ವಾಮಿ ಸೋಲಿಸಿ ಸಂಸದರಾಗಿ 2ನೇ ಬಾರಿಗೆ ಆಯ್ಕೆಯಾದರು.

ಆದರೆ 2009ರ ಲೋಕಸಭೆ ಚುನಾವಣೆಯಲ್ಲಿ ಸಿ. ಎಚ್. ವಿಜಯಶಂಕರ್, ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು-ಕೊಡಗು ಕ್ಷೇತ್ರದಿಂದ ಕಣಕ್ಕಿಳಿದು 3,47,119 ಮತಗಳನ್ನು ಪಡೆದು, ಕಾಂಗ್ರೆಸ್‌ನ ಎಚ್. ವಿಶ್ವನಾಥ್ ವಿರುದ್ಧ ಸೋಲು ಕಂಡರು.

2014ರ ಲೋಕಸಭೆ ಚುನಾವಣೆಯಲ್ಲಿ ಸಿ. ಎಚ್. ವಿಜಯಶಂಕರ್ ಅವರನ್ನು ಬಿಜೆಪಿ ಹಾಸನ ಕ್ಷೇತ್ರದಿಂದ ಕಣಕ್ಕಿಳಿಸಿತು. 1,65,688 ಮತಗಳನ್ನು ಪಡೆದ ಅವರು ಜೆಡಿಎಸ್‌ನ ಎಚ್. ಡಿ. ದೇವೇಗೌಡರ ವಿರುದ್ಧ ಸೋತರು, ಚುನಾವಣೆಯಲ್ಲಿ 3ನೇ ಸ್ಥಾನವನ್ನು ಪಡೆದರು.

ಸಿ. ಎಚ್. ವಿಜಯಶಂಕರ್ ಕುರುಬ ಸಮುದಾಯದ ನಾಯಕರು. ಸಜ್ಜನ ರಾಜಕಾರಣಿಯಾದ ಅವರು, ಒಂದು ಕಾಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದವರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಅವರಿಗೆ 2019ರ ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೊಡಿಸಿದ್ದರು ಸಿದ್ದರಾಮಯ್ಯ. ಆದರೆ ಚುನಾವಣೆಯಲ್ಲಿ ವಿಜಯಶಂಕರ್ 550,327 ಮತಗಳನ್ನು ಪಡೆದು, ಬಿಜೆಪಿಯ ಪ್ರತಾಪ್ ಸಿಂಹ ವಿರುದ್ಧ ಸೋಲು ಕಂಡರು.

ಬಳಿಕ 2019ರ ನವೆಂಬರ್‌ನಲ್ಲಿಯೇ ಸಿ. ಎಚ್. ವಿಜಯಶಂಕರ್ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ವಾಪಸ್ ಆದರು. 2004ರ ಚುನಾವಣೆಯಲ್ಲಿ ದಿ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೋಲಿಸಿದ್ದ ಸಿ. ಎಚ್. ವಿಜಯಶಂಕರ್ 2009ರ ಚುನಾವಣೆಯಲ್ಲಿ ಸೋತರು.

2014ರ ಚುನಾವಣೆಯಲ್ಲಿ ಸಿ. ಎಚ್. ವಿಜಯಶಂಕರ್ ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಪ್ರತಾಪ್ ಸಿಂಹಗೆ ಟಿಕೆಟ್ ನೀಡಿತು. ಅಲ್ಲದೇ ವಿಜಯಶಂಕರ್‌ ಅವರನ್ನು ಹಾಸನದಿಂದ ಕಣಕ್ಕಿಳಿಸಿತು.

ಲೋಕಸಭೆ ಚುನಾವಣೆ 2014ರ ಬಳಿಕ ಸಿ. ಎಚ್. ವಿಜಯಶಂಕರ್, "ಬಿಜೆಪಿಯಲ್ಲಿ ನನಗೆ ಅತೀವ ಅನ್ಯಾಯವಾಗಿದೆ. ನನ್ನ ಮಾತೃಪಕ್ಷ ಕಾಂಗ್ರೆಸ್‌ಗೆ ಸೇರುವೆ" ಎಂದು 2017ರಲ್ಲಿ ಹೇಳಿದ್ದರು. ಬಳಿಕ ಕಾಂಗ್ರೆಸ್ ಸೇರಿದ್ದರು. 2019ರ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಬಿಜೆಪಿಗೆ ಅವರು ವಾಪಸ್ ಆಗಿದ್ದರು.

1998ರಿಂದ 2000ದ ತನಕ ಸಿ. ಎಚ್. ವಿಜಯಶಂಕರ್ ವಿಧಾನ ಪರಿಷತ್ ಸದಸ್ಯರಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾಗಿ, ಬಿಜೆಪಿ ರಾಷ್ಟ್ರೀಯ ಪರಿಷತ್‌ ಸದಸ್ಯರಾಗಿ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಸಿ. ಎಚ್. ವಿಜಯಶಂಕರ್ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಕರ್ನಾಟಕ ಸರ್ಕಾರದಲ್ಲಿ ಅರಣ್ಯ ಹಾಗೂ ಸಣ್ಣ ಕೈಗಾರಿಕೆ ಸಚಿವರಾಗಿಯೂ ಕೆಲಸ ಮಾಡಿದ್ದಾರೆ.

1992-94 ಮೈಸೂರು (ಮೈಸೂರು ಮತ್ತು ಚಾಮರಾಜನಗರ ಅಖಂಡ ಜಿಲ್ಲೆ) ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕೆಲಸ ಮಾಡಿದರು. 1994ರಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1999ರಲ್ಲಿ ನಡೆದ ಮಧ್ಯಂತರ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+