ಚೈತ್ರಾ ಕುಂದಾಪುರ ಪ್ರಕರಣ: ವಂಚನೆ ಹಣದಲ್ಲಿ ಸ್ವಾಮೀಜಿ ಮಾಡಿದ್ದು ಏನೇನು ಗೊತ್ತೇ? ತಿಳಿದರೆ ಗಾಬರಿ ಗ್ಯಾರಂಟಿ
ಬೆಂಗಳೂರು, ಸೆಪ್ಟೆಂಬರ್ 14: ಹಿಂದುತ್ವವಾದಿ ಉಗ್ರ ಭಾಷಣಕಾರ್ತಿ ಚೈತ್ರಾ ಕುಂದಾಪುರ ಅವರ ವಂಚನೆ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಆರು ಮಂದಿಯನ್ನು ಬಂಧಿಸಿದ್ದಾರೆ. ಚೈತ್ರಾ ಕುಂದಾಪುರ ಅವರನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ಆದರೆ, ಈ ಪ್ರಕರಣ ಮಾತ್ರ ಅಗೆದಷ್ಟೂ ಆಳವಾಗುತ್ತಲೇ ಇದೆ.
ದೂರುದಾರ ಗೋವಿಂದ ಬಾಬು ಪೂಜಾರಿಯಿಂದ 1.5 ಕೋಟಿ ರೂ.ಗಳನ್ನು ಪಡೆದು ತಲೆಮರೆಸಿಕೊಂಡಿರುವ ಸ್ವಾಮೀಜಿ ಬಗೆಗಿನ ವಿವರಗಳು ಹೊರಬಂದಿವೆ. ಅಕ್ರಮವಾಗಿ ಬಂದಿರುವ ಹಣದಿಂದಲೇ ಸ್ವಾಮೀಜಿ ಪೆಟ್ರೋಲ್ ಬಂಕ್ನಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ನೀರಾವರಿ ಜಮೀನುಗಳನ್ನೂ ಖರೀದಿಸಿರುವ ಮಾಹಿತಿ ಲಭ್ಯವಾಗಿದೆ.
ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀ ಸ್ವಾಮೀಜಿ ತಲೆಮರೆಸಿಕೊಂಡಿದ್ದಾನೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಸೇರಿ ಇತರ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿ ಮಾತ್ರ ಪೊಲೀಸರಿಗೂ ಇನ್ನೂ ಸಿಕ್ಕಿಲವೆಂದು ತಿಳಿದುಬಂದಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರಿನಿಂದ ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಲಾಗಿತ್ತು. ಈ ಸಂಬಂಧ ಐದು ಕೋಟಿ ರೂಪಾಯಿ ವಂಚಿಸಲಾಗಿದೆ ಎಂದು ಆರೋಪಿಸಿರುವ ಪೂಜಾರಿ ಅವರು ಒಟ್ಟು ಎಂಟು ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ.
ಪೂಜಾರಿಯವರು ಕಂತುಗಳಲ್ಲಿ ಹಣ ಪಾವತಿಸಿದ್ದು, ಅದರಲ್ಲಿ ಒಂದನ್ನು ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಅವರಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಚೈತ್ರಾ ಕುಂದಾಪುರ ಅವರು ದೂರುದಾರರನ್ನು ಮಠಕ್ಕೆ ಕರೆದೊಯ್ದು ಶ್ರೀಗಳಿಗೆ ಪರಿಚಯಿಸಿದರು ಎನ್ನಲಾಗಿದೆ.
ಟಿವಿ9 ಕನ್ನಡದ ವಾಹಿನಿಯ ಪ್ರಕಾರ, ಇತ್ತೀಚೆಗೆ ಸ್ವಾಮೀಜಿಯ ಜೀವನಶೈಲಿ ಬದಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. 68 ಲಕ್ಷ ಕೊಟ್ಟು ಮಾವನ ಹೆಸರಿನಲ್ಲಿ ಎಂಟು ಎಕರೆ ಜಮೀನು ಖರೀದಿಸಿದ್ದರು ಎನ್ನಲಾಗಿದೆ. ಚಂದ್ರಪ್ಪ ಎಂಬುವವರ ಒಡೆತನದ ಪೆಟ್ರೋಲ್ ಬಂಕ್ ನಲ್ಲಿಯೂ 40 ಲಕ್ಷ ರೂ. ಹೂಡಿಕೆ ಮಾಡಿದ್ದರು ಎಂದು ತಿಳಿದುಬಂದಿದೆ.
ದೂರುದಾರರು ತಮ್ಮ ಹಣವನ್ನು ವಾಪಾಸ್ಸು ಬೇಕೆಂದು ಕೇಳಿದ ನಂತರ, ಸ್ವಾಮೀಜಿ ಸ್ಥಳೀಯ ಮುಖಂಡರಿಂದ 10 ಲಕ್ಷ ರೂಪಾಯಿ ಸಾಲವನ್ನು ಕೇಳಿದ್ದಾರೆ ಎನ್ನಲಾಗಿದೆ.
ಹಣವನ್ನು ದೂರುದಾರರಿಗೆ ಹಿಂತಿರುಗಿಸುವುದಾಗಿ ಸ್ವಾಮೀಜಿ ಹೇಳಿದ್ದರೆಂದು ದೂರದಾರ ತಿಳಿಸಿದ್ದಾರೆ.
ಹಣ ಹಿಂತಿರುಗಿಸಲು ಸಮಯಬೇಕೆಂದು ಸ್ವಾಮೀಜಿ ಕೇಳಿದ್ದರು. ತಮ್ಮ ಹೆಸರನ್ನು ಬಹಿರಂಗಪಡಿಸಕೂಡದು ಎಂದು ಅವರು ಮನವಿ ಮಾಡಿಕೊಂಡಿದ್ದರು ಎಂದು ದೂರುದಾರ ತಿಳಿಸಿದ್ದಾರೆ.
ಚೈತ್ರಾ ಕುಂದಾಪುರ ಅವರು ಸಿಟಿ ಕ್ರೈಂ ಬ್ರಾಂಚ್ ಕಚೇರಿಗೆ ಪ್ರವೇಶಿಸಿದಾಗ, ಸ್ವಾಮೀಜಿಯನ್ನು ಬಂಧಿಸಿದ ನಂತರ ಹಲವಾರು ದೊಡ್ಡ ನಾಯಕರ ಹೆಸರುಗಳು ಹೊರಬೀಳಲಿವೆ ಎಂದು ಹೇಳಿದ್ದಾರೆ.
ಇದೇ ವೇಳೆ ಚೈತ್ರಾ ಅವರ ತಾಯಿ ತನ್ನ ಮಗಳು ನಿರಪರಾಧಿಯಾಗಿದ್ದು, ಆಕೆಯ ವಿರುದ್ಧ ನಡೆದ ಪಿತೂರಿ ಎಂದು ಆರೋಪಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?











Click it and Unblock the Notifications