Get Updates
Get notified of breaking news, exclusive insights, and must-see stories!

"ಸಿದ್ದರಾಮಯ್ಯನವರ ಪದಚ್ಯುತಿಗೆ ಎಐಸಿಸಿ ಖೆಡ್ಡಾ ಫಿಕ್ಸ್"

ಬೆಂಗಳೂರು‌, ಜುಲೈ 07: ಮಲ್ಲಿಕಾರ್ಜುನ್‌ ಖರ್ಗೆಯವರಿಗೆ ಖೆಡ್ಡಾ ತೋಡಿದ್ದ ಕಾಂಗ್ರೆಸ್ ಹೈಕಮಾಂಡ್ (ಎಐಸಿಸಿ) ಈಗ ಸಿದ್ದರಾಮಯ್ಯನವರಿಗೆ ಖೆಡ್ಡಾ ತೋಡುತ್ತಿದೆ ಎಂಬುದಾಗಿ ಜನರು ಮಾತನಾಡುತ್ತಿದ್ದಾರೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಹುದ್ದೆಯಿಂದ ಪದಚ್ಯುತಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ತಂತ್ರ- ಮಂತ್ರಗಳನ್ನು ಮಾಡುತ್ತಿದೆ ಎಂದು ಜನರೂ ಮಾತನಾಡುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಹೊಸದೇನೂ ಅಲ್ಲ ಎಂದು ಹೇಳಿದರು.

ಮೊದಲು ಖೆಡ್ಡಾ ತೋಡಿ ದೆಹಲಿಗೆ ಕರೆದುಕೊಂಡು ಖರ್ಗೆಯವರನ್ನು ಈಗಾಗಲೇ ಮುಗಿಸಿದ್ದಾರೆ. ಅವರನ್ನು ನಾಮಕಾವಾಸ್ತೆ ಅಧ್ಯಕ್ಷರನ್ನಾಗಿ ಮಾಡಿ ಕೂರಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಅವರೇ ಹೈಕಮಾಂಡ್ ಆಗಿದ್ದರೂ ಮಾತೆತ್ತಿದರೆ ಇನ್ನೊಂದು ಹೈಕಮಾಂಡ್ ಬಗ್ಗೆ ಮಾತನಾಡುತ್ತಾರೆ. ಈಗ ಸಿದ್ದರಾಮಯ್ಯನವರಿಗೆ ಖೆಡ್ಡಾ ತೋಡಿದ್ದಾರೆ. ಎಐಸಿಸಿ ಖೆಡ್ಡಾ ತೋಡಿದ್ದು, ಸಿದ್ದರಾಮಯ್ಯನವರಿಗೆ ಅರ್ಥ ಆದಂತಿದೆ ಎಂದರು.

Chalawadi Narayanaswamy AICC is preparing for Siddaramaiah s ouster

ರಾಜ್ಯದ ಕಾಂಗ್ರೆಸ್ ಸರಕಾರವು ದಲಿತ ವಿರೋಧಿಯಾಗಿದ್ದು, ದಲಿತರನ್ನು ಸರ್ವನಾಶ ಮಾಡುತ್ತಿದೆ ಎಂದು ನಾವು ಹೇಳಿದ್ದೆವು. ಆಗ ನಮ್ಮ ಬಗ್ಗೆ ಚೇಷ್ಟೆ ಮಾಡುತ್ತಿದ್ದ ಕಾಂಗ್ರೆಸ್ ನಾಯಕರು ಈಗ ಉತ್ತರ ಕೊಡಲಾಗದೆ, ಮೌನಕ್ಕೆ ಶರಣಾಗಿದ್ದಾರೆ ಎಂದು ಅವರು ಟೀಕಿಸಿದರು. ಕಾಂಗ್ರೆಸ್ ಸರಕಾರವು ತನ್ನ ಆಡಳಿತಾವಧಿಯಲ್ಲಿ ಅಧಿಕಾರಿಗಳಿಗೆ ನೀಡಿದ ನ್ಯಾಯದ ಕುರಿತು ಶ್ವೇತಪತ್ರ ಬಿಡುಗಡೆ ಮಾಡಬೇಕು ಆಗ್ರಹಿಸಿದರು.

ಈ ಸರಕಾರವು ದಲಿತರಿಗೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣವನ್ನು ಗ್ಯಾರಂಟಿಗಳಿಗೆ ಬಳಸಿ ದಲಿತರಿಗೆ ಸಂಪೂರ್ಣವಾಗಿ ಅನ್ಯಾಯ ಮಾಡಿತ್ತು. ಈಗ ದಲಿತ ಸಮುದಾಯದ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳು ಉನ್ನತ ಹುದ್ದೆಗೆ ನೇಮಿಸುವ ಸಂದರ್ಭದಲ್ಲಿ ಸಂಪೂರ್ಣವಾಗಿ ಅನ್ಯಾಯ ಮಾಡಿದ್ದಾರೆ. ತಮ್ಮನ್ನು ತಿರಸ್ಕರಿಸಿದ್ದಾರೆ. ಕೆಲಸಕ್ಕೆ ಬಾರದ ಸ್ಥಳದಲ್ಲಿ ಕೊಳೆ ಹಾಕಿದ್ದಾರೆ ಎಂದು ಹೇಳಿಕೆಗಳನ್ನು ಕೊಟ್ಟಿದ್ದಾರೆ. ಜೊತೆಗೇ ನಿನ್ನೆ ಬೆಂಗಳೂರು ವಿಶ್ವವಿದ್ಯಾಲಯದ 10 ಜನ ದಲಿತ ಪ್ರೊಫೆಸರ್‍ಗಳು ತಾರತಮ್ಯವನ್ನು ಆಕ್ಷೇಪಿಸಿ, ಸರಕಾರದ ಕ್ರಮವನ್ನು ವಿರೋಧಿಸಿ ಕುಲಪತಿಗಳಿಗೆ ರಾಜೀನಾಮೆ ಸಲ್ಲಿಸಿ ಹೊರಬಂದಿದ್ದಾರೆ ಎಂದು ವಿವರಿಸಿದರು.

ರಸ್ತೆ ಬೇಕೇ, ಗ್ಯಾರಂಟಿ ಬೇಕೇ ಎಂಬ ರಾಯರೆಡ್ಡಿ ಅವರ ಹೇಳಿಕೆ ಕುರಿತು ಪ್ರಶ್ನಿಸಿದಾಗ ಉತ್ತರಿಸಿ, ರಾಯರೆಡ್ಡಿ ಅವರು ಮುಖ್ಯಮಂತ್ರಿಗಳ ಮುಖವಾಣಿ ಇದ್ದಂತೆ. ಅವರು ಆರ್ಥಿಕ ತಜ್ಞರು, ಸಿಎಂ ಸಲಹೆಗಾರರು. ಅವರು ಕಾಂಗ್ರೆಸ್ ಪಕ್ಷ, ಸರಕಾರದ ಮುಖವಾಣಿಯೂ ಹೌದು. ನಾವು ಗ್ಯಾರಂಟಿ ಕೊಟ್ಟಿದ್ದೇವೆ. ನೀವ್ಯಾರೂ ಬೇರೇನೂ ಮಾತನಾಡಬಾರದೆಂಬ ಉದ್ದೇಶ ಇದರ ಹಿಂದೆ ಇದ್ದಂತಿದೆ ಎಂದು ಟೀಕಿಸಿದರು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಇದನ್ನು ಹೇಳಲಾಗದೆ ಇವರ ಕೈಲಿ ಈ ಸಂದೇಶ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಅಭಿವೃದ್ಧಿ ಬೇಕಿದ್ದರೆ ಗ್ಯಾರಂಟಿ ಕೇಳಬೇಡಿ ಎನ್ನುವ ಮೂಲಕ ಅವರು ಬೆದರಿಕೆ ಹಾಕುತ್ತಿದ್ದಾರಾ? ಈ ರೀತಿ ಬ್ಲ್ಯಾಕ್‍ಮೇಲ್ ಮಾಡಿ ರಾಜಕೀಯ ಮಾಡುವುದನ್ನು ಕಾಂಗ್ರೆಸ್ ಪಕ್ಷ ಮೊದಲು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದರು. ನಾವೀಗ ಪಾರದರ್ಶಕ ಯುಗದಲ್ಲಿದ್ದೇವೆ. ಜನರು ಮೊದಲಿನಂತಿಲ್ಲ ಎಂದು ಕಿವಿಮಾತು ಹೇಳಿದರು. ಜನರಿಗೆ ಹೆಚ್ಚು ದಿನ ಮೋಸ ಮಾಡಿ ನೀವು ಬದುಕಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+