'ಸಿದ್ದರಾಮಯ್ಯನವರೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳಿ'
ಹುಬ್ಬಳ್ಳಿ, ಏಪ್ರಿಲ್ 15: ಚುನಾವಣೆಯಲ್ಲಿ ಬಿ ಆರ್ ಅಂಬೇಡ್ಕರ್ ರನ್ನು ಸೋಲಿಸಿದ್ದು ಸಾರ್ವಕರ್ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಇದನ್ನು ಸಾಬೀತು ಮಾಡಿದ್ರೆ ನನ್ನ ವಿಪಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುತ್ತೆನೆ. ಅವರು ಸಾಬೀತು ಮಾಡಲು ಆಗದ್ದಿದ್ದರೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸವಾಲು ಹಾಕಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ವಿಚಾರದಲ್ಲಿ ಸುಳ್ಳು ಹೇಳುತ್ತಿದ್ದಾರೆ. ಪ್ರಿಯಾಂಕಾ ಖರ್ಗೆ ಅವರನ್ನು ಆಧರಿಸಿ, ಅವರನ್ನು ಗುರುಗಳಂತ ಸ್ವೀಕಾರ ಮಾಡಿತ್ತಾರಿ ಸಿಎಂ? ನಿಮ್ಮ ಸ್ಥಾನ ಎಂತಹದ್ದು, ಜನ ನಿಮಗೆ ಎಷ್ಟು ಗೌರವ ನೀಡುತ್ತಾರೆ. ಯಾಕೆ ಸುಳ್ಳು ಹೇಳುತ್ತಾರೆ. ಸಿದ್ದರಾಮಯ್ಯ ಅವರು ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮೂರ್ತಿಯನ್ನು ಹಿಡಿದುಕೊಳ್ಳದೆ ಕೇಳಗೆ ಕೆಡವಿದ್ದಾರೆ. ಇಷ್ಟು ಅಂಬೇಡ್ಕರ್ ಬಗ್ಗೆ ಸಿಎಂಗೆ ಶ್ರದ್ಧೆ ಇಲ್ಲ. ಅಂಬೇಡ್ಕರ್ ದೊಡ್ಡ ದೊಡ್ಡ ಮೂರ್ತಿ ಮಾಡಿದ್ದು, ಗೌರವ ನೀಡಿದ್ದು ಬಿಜೆಪಿ. ಕಾಂಗ್ರೆಸ್ ಸುಳ್ಳು ಹೇಳುವ ಫ್ಯಾಕ್ಟರಿ ಓಪನ್ ಮಾಡಿದೆ. ಅಂಬೇಡ್ಕರ್ ಪ್ರಶಸ್ತಿ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡಿದೆ. ದಲಿತರಲ್ಲೆ ರೈಟು, ಲೆಫ್ಟ್ ಅಂತ ಕಾಂಗ್ರೆಸ್ ಗೊಂದಲ ಸೃಷ್ಟಿ ಮಾಡಿದೆ ಎಂದು ಹೇಳಿದರು.

ರಾಜ್ಯದಲ್ಲಿ ಜನಾಕ್ರೋಶ ಆರಂಭವಾಗಿ, ಅಭಿವೃದ್ಧಿ ಶೂನ್ಯವಾಗಿದೆ. ಐದು ವರ್ಷ ಆಡಳಿತ ಮುಗಿಸಿದ್ರೆ ಸಾಕು ಎನ್ನುವ ಸ್ಥಿತಿಗೆ ಸರ್ಕಾರ ಬಂದು ತಲುಪಿದೆ. ಇಡೀ ರಾಜ್ಯದಲ್ಲಿಯೇ ಗೊಂದಲದಲ್ಲಿದೆ. ನಮ್ಮ ಪಕ್ಷ ಜನಾಕ್ರೋಶ ಯಾತ್ರೆ ಕೈಗೊಂಡಿದೆ. ನಾಳೆ ಬೆಳಗಾವಿಯಿಂದ ಎರಡನೇ ಸುತ್ತಿನ ಯಾತ್ರೆ ಆರಂಭವಾಗುತ್ತಿದೆ. ಕಾಂಗ್ರೆಸ್ ದೊಡ್ಡ ಗೊಂದಲದ ಗೂಡಾಗಿದೆ. ಕಾಂಗ್ರೆಸ್ ಅಂಬೇಡ್ಕರ್ ಅವರಿಗೆ ಗೌರವದ ಬದಲು ಅಪಮಾನ ಕಾರ್ಯ ಮಾಡುತ್ತಿದೆ. ಬೆಳಗಾವಿ ಗಾಂಧಿಜೀ ಬಂದು ನೂರು ವರ್ಷವಾದ ಹಿನ್ನಲೆ ದೊಡ್ಡ ಕಾರ್ಯಕ್ರಮ ಮಾಡಿತ್ತು. ಆದರೆ ಅಂಬೇಡ್ಕರ್ ಬಂದು ನೂರು ವರ್ಷವಾಗಿದೆ ಯಾಕೆ ಕಾರ್ಯಕ್ರಮ ಮಾಡಿಲ್ಲ. ಈ ಕಾರ್ಯಕ್ರಮವನ್ನು ಬಿಜೆಪಿ ಮಾಡುತ್ತಿದೆ ಎಂದರು.
ಮುಸ್ಲಿಂ ಸಮುದಾಯದಲ್ಲಿ ಅನೇಕ ಜಾತಿಗಳಿವೆ. ಅದನ್ನು ಎಲ್ಲರನ್ನೂ ಒಂದು ಮಾಡಿ ಮುಸ್ಲಿಂರನ್ನು ಅತೀ ಹೆಚ್ಚು ಅಂತ ಬಿಂಬಿಸಿದ್ದಿರಿ. ಇಷ್ಟು ದಿನ ಯಾರು ಅಲ್ಪಸಂಖ್ಯಾತರು ಇದ್ದರು ಈಗ ಅವರು ಬಹುಸಂಖ್ಯಾತರು ಆಗಿದ್ದಾರೆ. ಆಗಿದ್ದದರೇ ಅವರಿಗೆ ಅಲ್ಪಸಂಖ್ಯಾತ ಸೌಲಭ್ಯ ಯಾಕೆ. ಕಾಂಗ್ರೆಸ್ ಮಾಡುತ್ತಿರುವುದು ಮುಸ್ಲಿಂರಿಗೆ ಯಾವುದು ಉಪಯೋಗಕ್ಕೆ ಬರೋದಿಲ್ಲಾ. ಮುಸ್ಲಿಂರನ್ನು ಅತೀ ಹೆಚ್ಚು ಅಂತ ತೋರಿಸಿ ಅವರಿಗೆ ಇತರರ ಕೆಂಗಣ್ಣಿಗೆ ಗುರಿ ಮಾಡಿದ್ದಿರಿ. ಇದು ಅಲ್ಪಾಯುಶಿ ಸರ್ಕಾರ ಈ ಸರ್ಕಾರ ಯಾವತ್ತಾದ್ರೂ ಹೋಗಬಹುದು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications