ಸಿದ್ದರಾಮಯ್ಯಗೆ ತುಂಬಾ ಇಷ್ಟವಾದ ಜಿಲ್ಲೆ ಯಾವುದು ಗೊತ್ತಾ?
ಚಾಮರಾಜನಗರ, ಏಪ್ರಿಲ್ 26: ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತದೆ ಎನ್ನುವ ಮೂಢನಂಬಿಕೆ ಜಿಲ್ಲೆಯ ಜನರಿಗೆ ಮಾಡುವ ಅವಮಾನ. ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ. ನನಗೆ ಚಾಮರಾಜನಗರ ಅತ್ಯಂತ ಇಷ್ಟವಾದ ಜಿಲ್ಲೆ. ಚಾಮರಾಜನಗರಕ್ಕೆ 20 ಸಾರಿ ಬಂದು-ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಈಗಾಗಲೇ 2 ಕೋಟಿ ರೂಪಾಯಿಯಲ್ಲಿ 50 ಲಕ್ಷ ರೂಪಾಯಿ ಬಿಡುಗಡೆ ಆಗಿದೆ. ಹಲವರು ದೇಣಿಗೆ ಕೂಡ ಕೊಟ್ಟಿದ್ದಾರೆ. ಇವರೆಲ್ಲರಿಗೂ ಒಳ್ಳೆಯದಾಗಲಿ ಎಂದರು. ಸಮುದಾಯ ಭವನ ಕಟ್ಟಿ. ಆದರೆ, ಇದಕ್ಕಿಂತ ಹೆಚ್ಚಾಗಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ, ಜಿಲ್ಲೆಯ ಎಲ್ಲಾ ಹಿಂದುಳಿದ ಸಮುದಾಯಗಳ ಬಡ ಮಕ್ಕಳಿಗೆ ಶೈಕ್ಷಣಿಕ ನೆರವು ದೊರಕುವಂತೆ ಮಾಡಿ ಎಂದು ಕರೆ ನೀಡಿದರು.
ಚಾಮರಾಜನಗರ ಜಿಲ್ಲೆ ಅತ್ಯಂತ ಹಿಂದುಳಿದಿರುವ ಜಿಲ್ಲೆ. ಇಲ್ಲಿ ಶಿಕ್ಷಣ ಹೆಚ್ಚೆಚ್ಚು ಸಿಗಬೇಕಿದೆ. ಶಿಕ್ಷಣ ಕಲಿಯಬೇಕಿದ್ದರೆ ಹಾಸ್ಟೆಲ್ ಗಳ ಅಗತ್ಯವೂ ಇದೆ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರಿಗೂ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ ಸೇರಿ ನಮ್ಮ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡ ಮಹಿಳೆಯರಿಗೂ ಅನುಕೂಲ ಆಗುತ್ತಿದೆ. ಕೆಲಸಕ್ಕೆ ಹೋಗುವ ಬಡ ಮತ್ತು ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ಇದರಿಂದ ಹೆಚ್ಚು ಸಮಾಧಾನ ಆಗಿದೆ. ವಿದ್ಯಾರ್ಥಿನಿಯರಿಗೂ ಸಮಾಧಾನ ಆಗಿದೆ. ಹೀಗೆ ಎಲ್ಲಾ ಜಾತಿಯ ಬಡವರು, ಮಧ್ಯಮ ವರ್ಗದವರಿಗೆ ನೆರವಾಗುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.
ಸಂವಿಧಾನ ಬಂದು 75 ವರ್ಷ ಆದರೂ ಸಾಮಾಜಿಕ ನ್ಯಾಯ ಈಡೇರಿಲ್ಲ. ಅವಕಾಶ ವಂಚಿತ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ಅರಿಯಲು ಸಮೀಕ್ಷೆ ನಡೆಸಿದ್ದೇವೆ. 2015 ರಲ್ಲಿ ನಡೆಸಿದ ಸಮೀಕ್ಷೆ ಬಳಿಕ ಬಂದ ಸಿಎಂ ಗಳು ಸ್ವೀಕರಿಸಿಲ್ಲ. ನಾನು ಸ್ವೀಕರಿಸಿ ಕ್ಯಾಬಿನೆಟ್ ಮುಂದೆ ಇಟ್ಟಿದ್ದೀನಿ. ಇದು ಯಾರ ವಿರುದ್ಧವೂ ಇರುವ ಸಮೀಕ್ಷೆ ಅಲ್ಲ. ಎಲ್ಲರ ಸ್ಥಿತಿ ಗತಿ ತಿಳಿಯುವ ಸಮೀಕ್ಷೆ ಮಾತ್ರ ಆಗಿದೆ ಎಂದರು. ಬಿಜೆಪಿಯ ರಾಮಾ ಜೋಯಿಸ್ ಅವರು ಮೀಸಲಾತಿ ವಿರೋಧಿಸಿ ಕೋರ್ಟ್ ಗೆ ಹೋಗಿದ್ದರು. ನಿಮಗೆ ಸೈದ್ಧಾಂತಿಕವಾಗಿ ಸ್ಪಷ್ಟ ತಿಳಿವಳಿಕೆ ಇರಬೇಕು.
ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದರು.ಸಮುದಾಯ ಭವನ ಕಟ್ಟಿ. ಆದರೆ, ಇದಕ್ಕಿಂತ ಹೆಚ್ಚಾಗಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ. ಜಿಲ್ಲೆಯ ಎಲ್ಲಾ ಹಿಂದುಳಿದ ಸಮುದಾಯಗಳ ಬಡ ಮಕ್ಕಳಿಗೆ ಶೈಕ್ಷಣಿಕ ನೆರವು ದೊರಕುವಂತೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications