ಮೂರು ವೈದ್ಯಕೀಯ ಕಾಲೇಜು ಆರಂಭಕ್ಕೆ ಒಪ್ಪಿಗೆ ಸಿಕ್ಕಿತು
ಕಲಬುರಗಿ, ಏಪ್ರಿಲ್ 29 : ರಾಜ್ಯದಲ್ಲಿ ನೂತನವಾಗಿ ಮೂರು ವೈದ್ಯಕೀಯ ಕಾಲೇಜು ಆರಂಭಿಸಲು ಎಂಸಿಐ ಅನುಮತಿ ನೀಡಿದೆ. ಪ್ರಸ್ತಕ ಶೈಕ್ಷಣಿಕ ವರ್ಷದಿಂದಲೇ ಮೂರು ಕಾಲೇಜುಗಳು ಕಾರ್ಯಾರಂಭ ಮಾಡಲಿವೆ.
ಕಲಬುರಗಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, 'ಚಾಮರಾಜನಗರ, ಕೊಡಗು, ಕಾರವಾರದಲ್ಲಿ ನೂತನವಾಗಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲು ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ಅನುಮತಿ ಸಿಕ್ಕಿದೆ'. ಎಂದು ಹೇಳಿದರು. [ರಾಜ್ಯದಲ್ಲಿ ಮೂರು ವೈದ್ಯಕೀಯ ಕಾಲೇಜು ಈ ವರ್ಷ ಆರಂಭ]

'ಕಳೆದ ವರ್ಷ ಕಲಬುರಗಿ, ಗದಗ ಮತ್ತು ಕೊಪ್ಪಳಗಳಲ್ಲಿ ಪ್ರಾರಂಭಿಸಲಾಗಿದ್ದ ವೈದ್ಯಕೀಯ ಕಾಲೇಜುಗಳಿಗೆ ಎಂಸಿಐ ದಿಂದ ನವೀಕರಣ ದೊರೆತ್ತಿದ್ದು, ಕಳೆದ ಎರಡೂವರೆ ವರ್ಷದಲ್ಲಿ ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಒಟ್ಟು 6 ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಿದಂತಾಗಿದೆ' ಎಂದರು. [ಆರು ಜಿಲ್ಲೆಗಳಲ್ಲಿ ನೂತನ ಮೆಡಿಕಲ್ ಕಾಲೇಜು ಸ್ಥಾಪನೆ]
'ರಾಜ್ಯದಲ್ಲಿರುವ ಬೆಂಗಳೂರು, ಹುಬ್ಬಳ್ಳಿ, ಬಳ್ಳಾರಿ ಮತ್ತು ಮೈಸೂರು ಕಾಲೇಜುಗಳಿಂದ 700 ಸೀಟುಗಳು, ಕಳೆದ ವರ್ಷ ಮತ್ತು ನೂತನವಾಗಿ ಪ್ರಾರಂಭಿಸುವ 6 ಕಾಲೇಜುಗಳಿಂದ 900 ಸೀಟುಗಳು ಹಾಗೂ ರಾಜ್ಯದಲ್ಲಿರುವ ಇತರೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಂದ 600 ಸೀಟುಗಳು ಹೀಗೆ ಒಟ್ಟು ರಾಜ್ಯದಲ್ಲಿನ 2,200 ಸೀಟುಗಳು ಸರ್ಕಾರಿ ಕೋಟಾಕ್ಕೆ ಲಭ್ಯವಿದೆ' ಎಂದು ಸಚಿವರು ತಿಳಿಸಿದರು. [ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು]
'ಮುಂದಿನ ವರ್ಷಗಳಲ್ಲಿ ಯಾದಗಿರಿ, ಬಾಗಲಕೋಟೆ, ಹಾವೇರಿ, ತುಮಕೂರು, ಚಿತ್ರದುರ್ಗ ಮತ್ತು ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇವುಗಳು ಪ್ರಾರಂಭವಾದರೆ ಇಡೀ ರಾಜ್ಯದಲ್ಲಿ ಒಟ್ಟು 22 ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಿದಂತಾಗುತ್ತದೆ' ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications