ಬಿಸಿಯೂಟದ ಅಕ್ಕಿ ತಿಂದ ಅಧಿಕಾರಿಗಳಿಗೆ ಅಮಾನತು ಶಿಕ್ಷೆ
ಚಾಮರಾಜನಗರ, ಮಾರ್ಚ್ 02 : ಸೋಮವಾರಪೇಟೆಯಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ ನಡೆದಿರುವ ಅಕ್ಕಿ ಅಕ್ರಮ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಅಮಾನತು ಮಾಡಲಾಗಿದೆ. ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಮೀಸಲಿಟ್ಟ ಅಕ್ಕಿ ಇದ್ದಕ್ಕಿದಂತೆ ನಾಪತ್ತೆಯಾಗಿತ್ತು.
ಚಾಮರಾಜನಗರ ಜಿಲ್ಲಾಧಿಕಾರಿ ಬಿ. ರಾಮು ಅವರು ಓರ್ವ ಆಹಾರ ಶಿರಸ್ತೇದಾರ್ ಹಾಗೂ ಆಹಾರ ನಿರೀಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಸುಮಾರು ಎರಡು ಸಾವಿರ ಕ್ವಿಂಟಾಲ್ಗೂ ಅಧಿಕ ಅಕ್ಕಿ ನಿಗೂಢವಾಗಿ ನಾಪತ್ತೆಯಾಗಿತ್ತು, ಈ ಅಕ್ಕಿ ಹಗರಣ ಭಾರೀ ಚರ್ಚೆಗೆ ಕಾರಣವಾಗಿತ್ತು. [ಮದ್ದೂರು ಲಕ್ಷ್ಮಮ್ಮನ ಹಸಿವು ನೀಗಿದ ಅನ್ನಭಾಗ್ಯ]

ಉಗ್ರಾಣದಲ್ಲಿ ಅಕ್ಕಿ ನಿಗೂಢವಾಗಿ ನಾಪತ್ತೆಯಾದ ಬಗ್ಗೆ ಸಾರ್ವಜನಿಕರು ಮತ್ತು ಕೆಲವು ನ್ಯಾಯ ಬೆಲೆ ಅಂಗಡಿ ಮಾಲೀಕರು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದರು. ಸಾರ್ವಜನಿಕ ವಲಯದಿಂದ ಬಂದ ದೂರು, ಆಹಾರ ಇಲಾಖೆಯ ಫುಡ್ ಇನ್ಸ್ಪೆಕ್ಟರ್ ಭಾರತಿ ಅವರ ಮೇಲೆ ಬರುತ್ತಿದ್ದ ಆರೋಪಗಳನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದರು. [ಮೈಸೂರಿನಲ್ಲಿ ಬಿಸಿ ಊಟಕ್ಕೆ ಬಿಸಿಬಿಸಿ ರಾಗಿ ಮುದ್ದೆ]
ಸೋಮವಾರಪೇಟೆಯಲ್ಲಿರುವ ಗೋದಾಮಿನ ಮೇಲೆ ಫೆ. 19 ರಂದು ದಾಳಿ ನಡೆಸಿ, ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಆಗ, ಅಕ್ಕಿ ಅಕ್ರಮ ಬೆಳಕಿಗೆ ಬಂದಿತ್ತು. ಸ್ಥಳದಲ್ಲಿಯೇ ಗೋದಾಮು ವ್ಯವಸ್ಥಾಪಕ ತಮ್ಮಯ್ಯನನ್ನು ಅಮಾನತು, ಬಂಧಿಸಲು ಆದೇಶ ನೀಡಿದ್ದರು. [ನೀವು ತಿನ್ನುವ ಅಕ್ಕಿ ಯಾವುದರಿಂದ ಮಾಡಿದ್ದು!?]
ಸದ್ಯ, ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿಗೆ ಭೇಟಿ ನೀಡದೆ, ಕುಳಿತಲ್ಲೇ ವರದಿ ಸಿದ್ದಪಡಿಸುತ್ತಿದ್ದ ಹಾಗೂ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಫುಡ್ ಇನ್ಸ್ಪೆಕ್ಟರ್ ಕೆ.ಎಂ.ಭಾರತಿ ಮತ್ತು ಫುಡ್ ಶಿರಸ್ತೇದಾರ್ ಶ್ರೀಕಂಠ ಆರಾಧ್ಯ ಅವರನ್ನು ಅಮಾನತು ಮಾಡಲಾಗಿದೆ. [ಅಕ್ಕಿ ಮೇಲೆ ಆಸೆ ಇದ್ದರೆ ಕಡಿಮೆ ಮಾಡಿಕೊಂಡು ಬನ್ನಿ!]
ಆಹಾರ ಇಲಾಖೆಯಲ್ಲಿ ನಡೆದಿರುವ ಅಕ್ಕಿ ಹಗರಣದಲ್ಲಿ ಇನ್ನಷ್ಟು ಹಿರಿಯ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ಇದೆ. ಇಲಾಖೆಯ ಉನ್ನತ ಅಧಿಕಾರಿಗಳಿಗೆ ಹಗರಣದ ಬಗ್ಗೆ ವರದಿ ಸಲ್ಲಿಸಲಾಗಿದೆ.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು












Click it and Unblock the Notifications