ಚಾಮುಂಡಿ ಬೆಟ್ಟ, ಕೊಡಚಾದ್ರಿ ಸೇರಿ 15 ಕಡೆ ರೋಪ್ವೇಗೆ ರಾಜ್ಯ ಸರ್ಕಾರದ ಪ್ರಸ್ತಾವನೆ; ಸಚಿವ ನಿತಿನ್ ಗಡ್ಕರಿ
ಕೊಡಚಾದ್ರಿ ಪರ್ವತದಲ್ಲಿ ರೋಪ್ವೇ ಯೋಜನೆ ಆರಂಭಿಸಲು ಕಾರ್ಯಸಾಧ್ಯತಾ ಅಧ್ಯಯನ ಮಾಡಲಾಗಿದೆ. ಉಳಿದ 14 ಬೆಟ್ಟಗಳಲ್ಲಿ ಈ ಯೋಜನೆಯ ಆರಂಭಕ್ಕೆ ಪೂರ್ವ ಕಾರ್ಯಸಾಧ್ಯತಾ ಅಧ್ಯಯನ ನಡೆಸಲಾಗಿದೆ.
ಬೆಂಗಳೂರು, ಫೆಬ್ರವರಿ. 09: ಚಾಮುಂಡಿ ಬೆಟ್ಟ, ಕೊಡಚಾದ್ರಿ ಸೇರಿ 15 ಕಡೆ ರೋಪ್ವೇಗೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.
ರಾಜ್ಯಸಭೆಯಲ್ಲಿ ಈ ಬಗ್ಗೆ ಸದಸ್ಯ ನಾರಾಯಣ ಕೊರಗಪ್ಪ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವ ನಿತಿನ್ ಗಡ್ಕರಿ, ಉಡುಪಿ ಜಿಲ್ಲೆಯ ಕೊಡಚಾದ್ರಿ ಪರ್ವತದಲ್ಲಿ ರೋಪ್ವೇ ಯೋಜನೆ ಆರಂಭಿಸಲು ಕಾರ್ಯಸಾಧ್ಯತಾ ಅಧ್ಯಯನ ನಡೆಸಲಾಗಿದೆ ಎಂದಿದ್ದಾರೆ.
ಕೊಡಚಾದ್ರಿ ಪರ್ವತದಲ್ಲಿ ರೋಪ್ವೇ ಯೋಜನೆ ಆರಂಭಿಸಲು ಕಾರ್ಯಸಾಧ್ಯತಾ ಅಧ್ಯಯನ ಮಾಡಲಾಗಿದೆ. ಉಳಿದ 14 ಬೆಟ್ಟಗಳಲ್ಲಿ ಈ ಯೋಜನೆಯ ಆರಂಭಕ್ಕೆ ಪೂರ್ವ ಕಾರ್ಯಸಾಧ್ಯತಾ ಅಧ್ಯಯನ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಲದ ಕೇಂದ್ರ ಬಜೆಟ್ನಲ್ಲಿ ಪರ್ವತಮಾಲಾ ಯೋಜನೆಯನ್ನು ಘೋಷಿಸಲಾಗಿದೆ. ಈ ಯೋಜನೆಯಲ್ಲಿ ಗುಡ್ಡಗಾಡು ಪ್ರದೇಶಗಳಿಗೆ ಜನರು ಸುಲಭವಾಗಿ ಪ್ರಯಾಣ ಮಾಡಲು ಅನುಕೂಲವಾಗಲಿದೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಇನ್ನು, 2022-23 ನೇ ಸಾಲಿನ ಕರ್ನಾಟಕ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದ್ದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಿಸುವ ಯೋಜನೆಗೆ ವಿವಿಧ ವಲಯಗಳಿಂದ ವಿರೋಧ ಬಂದ ಕಾರಣ, ಇದು ಯಾತ್ರಾ ಸ್ಥಳ ಎಂಬ ಕಾರಣದಿಂದ ಕೈಬಿಡಲಾಗಿತ್ತು.
ಚಾಮುಂಡಿ ಬೆಟ್ಟಗಳು ಮತ್ತು ಚಾಮುಂಡೇಶ್ವರಿ ದೇವಸ್ಥಾನವು ಮುಖ್ಯವಾಗಿ ಭಕ್ತರನ್ನು ಆಕರ್ಷಿಸುವ ಪವಿತ್ರ ಸ್ಥಳಗಳಾಗಿವೆ ಹೊರತು ಪ್ರವಾಸಿಗರಿಗಾಗಿಯಲ್ಲ. ಭಕ್ತರನ್ನು ಆಕರ್ಷಿಸಲು ಮೆಟ್ಟಿಲುಗಳ ಹೊರತಾಗಿ ಉತ್ತಮ ಡಾಂಬರು ಹಾಕಿದ ರಸ್ತೆಗಳು ಸೇರಿದಂತೆ ಹಲವಾರು ವಿಧಾನಗಳಿವೆ. ಇದಲ್ಲದೆ, ದೇವಾಲಯಕ್ಕೆ ಲಕ್ಷಾಂತರ ಭಕ್ತರು ಬರುವ ಕಾರಣ ರೋಪ್ವೇ ಕಾರ್ಯಸಾಧ್ಯವಾಗುವುದಿಲ್ಲ ಎಂದು ಪರಿಸರವಾದಿಗಲು ಆರೋಪಿಸಿದ್ದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ (ಪ್ರಾದೇಶಿಕ) ಕಮಲಾ ಕರಿಕಾಳನ್ ಅವರು 2013ರಲ್ಲಿ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ, 1997ರಲ್ಲಿ ಯೋಜನೆಗೆ ಮೊಟ್ಟಮೊದಲ ಬಾರಿಗೆ ಪ್ರಸ್ತಾವನೆ ಸಲ್ಲಿಸಿದಾಗ ನೀಡಿದ್ದ ಪರವಾನಗಿಯನ್ನು ರದ್ದುಗೊಳಿಸಿದ್ದರು. ಈಗ ಮತ್ತೆ ರೋಪ್ವೇ ಮಡುವ ಯೋಜನೆಗೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ.
ಇತ್ತ, ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮಕ್ಕೆ 85 ಕೋಟಿ ವೆಚ್ಚದಲ್ಲಿ ರೋಪ್ ವೇ ನಿರ್ಮಿಸಲು ಟೆಂಡರ್ ಕರೆದಿದ್ದು, ಇದೇ ತಿಂಗಳಲ್ಲಿ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ. ರೋಪ್ ವೇ ನಿರ್ಮಾಣದ ನಂತರ ಈ ಭಾಗದ ಭೂಮಿ ಬೆಲೆ ಗಗನಕ್ಕೆ ಏರಲಿದೆ. ಹಾಗಾಗಿ ರೈತರು ಭೂಮಿ ಮಾರಾಟ ಮಾಡಬಾರದು ಎಂದು ಮನವಿ ಮಾಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ












Click it and Unblock the Notifications