ಗುಪ್ತಚರ ಇಲಾಖೆಯ ಗುಪ್ತ್ ಗುಪ್ತ್ ವರದಿ: ಈ 4 ಕ್ಷೇತ್ರಗಳಲ್ಲಿ 50:50, ಬಿಎಸ್ವೈ ಫುಲ್ ಟೆನ್ಸನ್
Recommended Video
ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಪತನಗೊಳ್ಳಲು ಕಾರಣಕರ್ತರಾದ ಹದಿನೈದು ಶಾಸಕರ ಪೈಕಿ, ಹದಿಮೂರು ಅಭ್ಯರ್ಥಿಗಳ ಹಣೆಬರಹ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ.
ಸೋಮವಾರ (ಡಿ 9) ಮಧ್ಯಾಹ್ನದ ಹೊತ್ತಿಗೆ, ಇವರೆಲ್ಲರೂ ಅರ್ಹರೋ, ಅನರ್ಹರೋ ಎನ್ನುವ ಜನತಾ ನ್ಯಾಯಾಲಯದ ತೀರ್ಪು ಹೊರಬೀಳಲಿದೆ. ಈ ನಡುವೆ, ಗುಪ್ತಚರ ಇಲಾಖೆಯ ಅಂತಿಮ ವರದಿ, ಮುಖ್ಯಮಂತ್ರಿಗಳ ಕೈಸೇರಿದೆ ಎನ್ನುವ ಮಾಹಿತಿಯಿದೆ.
ಬಿಜೆಪಿ ಹದಿಮೂರು, ಜೆಡಿಎಸ್ ಮತ್ತು ಕಾಂಗ್ರೆಸ್ ತಲಾ ಒಂದೊಂದು ಕ್ಷೇತ್ರದಲ್ಲಿ ಗೆಲ್ಲಲಿವೆ ಎನ್ನುವ ವಿಶ್ವಾಸದ ಮಾತನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಆಡಿದ್ದಾರೆ. ಆದರೂ, ಅವರ ಮುಖದಲ್ಲಿ ಆ ವಿಶ್ವಾಸ ಎದ್ದು ಕಾಣುತ್ತಿರಲಿಲ್ಲ.
ಮುಖ್ಯಮಂತ್ರಿಗಳೇನೋ ಹದಿಮೂರು ಎಂದರೂ, ನಾಲ್ಕು ಕ್ಷೇತ್ರಗಳಲ್ಲಿ ಫಲಿತಾಂಶ ಹೇಗೆ ಬೇಕಾದರೂ ಬರಬಹುದು ಎನ್ನುವ ವರದಿಯನ್ನು ಗುಪ್ತಚರ ಇಲಾಖೆ ನೀಡಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆ ನಾಲ್ಕು ಕ್ಷೇತ್ರಗಳು ಇವೇ...

ಬಿಜೆಪಿ ಸರಕಾರ ಸೇಫ್
ಗುಪ್ತಚರ ಇಲಾಖೆ ನೀಡಿದೆ ಎನ್ನಲಾಗುತ್ತಿರುವ ಫಲಿತಾಂಶದ ಮುನ್ನಾ ಅಂತಿಮ ವರದಿಯ ಪ್ರಕಾರ, ಬಿಜೆಪಿ ಸರಕಾರ ಸೇಫ್. ಹದಿನೈದು ಕ್ಷೇತ್ರಗಳಲ್ಲಿ ಬಿಜೆಪಿ ಒಂಬತ್ತು ಕ್ಷೇತ್ರದಲ್ಲಿ ಜಯ ಸಾಧಿಸಲಿದೆ. ಆದರೆ, ಸಿಎಂ ಹೇಳಿರುವ ಹದಿಮೂರರಲ್ಲಿ, ನಾಲ್ಕು ಕ್ಷೇತ್ರಗಳಲ್ಲಿ ಫಲಿತಾಂಶ 50:50 ಸಾಧ್ಯತೆ.

ಎಂಟಿಬಿ ನಾಗರಾಜ್ ಮತ್ತು ಶರತ್ ಬಚ್ಚೇಗೌಡ ನಡುವೆ ನೇರ ಫೈಟ್
ಹೊಸಕೋಟೆಯಲ್ಲಿ ಬಿಜೆಪಿಗೆ ನಿರಾಯಾಸ ಗೆಲುವು ಸಾಧ್ಯವಿಲ್ಲ. ಅಲ್ಲಿ, ಭಾರೀ ಎನ್ನಬಹುದಾದ ಶೇ. 90.90ರಷ್ಟು ಮತದಾನವಾಗಿದೆ. ವರದಿಯ ಪ್ರಕಾರ, ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಡುವ ಸಾಧ್ಯತೆಯಿದೆ. ಎಂಟಿಬಿ ನಾಗರಾಜ್ ಮತ್ತು ಶರತ್ ಬಚ್ಚೇಗೌಡ ನಡುವೆ ನೇರ ಫೈಟ್ ಇದ್ದು, ಫಲಿತಾಂಶ ಹೇಗೆ ಬೇಕಾದರೂ ಬರಬಹುದು.

ಬಿಜೆಪಿಯ ಸರವಣ ಮತ್ತು ಕಾಂಗ್ರೆಸ್ಸಿನ ರಿಜ್ವಾನ್ ಅರ್ಷದ್ ನಡುವೆ ಹಣಾಹಣಿ
50:50 ಇರುವ ಇನ್ನೊಂದು ಕ್ಷೇತ್ರವೆಂದರೆ ಅದು ಬೆಂಗಳೂರು ವ್ಯಾಪ್ತಿಯ ಶಿವಾಜಿನಗರ. ಇಲ್ಲಿ, ಮತ್ತೆ ಜೆಡಿಎಸ್ಸಿನ ತನ್ವೀರ್ ಅಹಮದ್ ಮೂರನೇ ಸ್ಥಾನದಲ್ಲಿ ತೃಪ್ತಿ ಪಡಬೇಕಾಗಬಹುದು. ಬಿಜೆಪಿಯ ಸರವಣ ಮತ್ತು ಕಾಂಗ್ರೆಸ್ಸಿನ ರಿಜ್ವಾನ್ ಅರ್ಷದ್ ನಡುವೆ ಹಣಾಹಣಿ. ಕ್ಷೇತ್ರದಲ್ಲಿ ಶೇ. 48.05 ಮತದಾನವಾಗಿದೆ.

ಬಿಜೆಪಿಯ ಶ್ರೀಮಂತ ಪಾಟೀಲ ಮತ್ತು ಕಾಂಗ್ರೆಸ್ಸಿನ ರಾಜು ಕಾಗೆ
ಕಾಗವಾಡದಲ್ಲೂ ಇದೇ ರೀತಿಯ ವಾತಾವರಣವಿದೆ. ಮತದಾನಕ್ಕೆ ಇಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶೇ. 76.24 ಮತದಾನವಾಗಿದೆ. ಜೆಡಿಎಸ್ಸಿನ ಶ್ರೀಶೈಲ ತುಗಶೆಟ್ಟಿ ಮೂರನೇ ಸ್ಥಾನಕ್ಕೆ ಹೋಗಬಹುದು. ಬಿಜೆಪಿಯ ಶ್ರೀಮಂತ ಪಾಟೀಲ ಮತ್ತು ಕಾಂಗ್ರೆಸ್ಸಿನ ರಾಜು ಕಾಗೆ ನಡುವೆ ನೇರ ಸ್ಪರ್ಧೆ. ಇಲ್ಲಿಯ ಫಲಿತಾಂಶ ಕೂಡಾ ಫಿಫ್ಟಿ.. ಫಿಫ್ಟಿ

ಬಿಜೆಪಿಯ ನಾರಾಯಣ ಗೌಡ ಮತ್ತು ಜೆಡಿಎಸ್ಸಿನ ದೇವರಾಜ್ ಬಿ.ಎಲ್
50:50 ಸಾಧ್ಯತೆಯಿರುವ ಇನ್ನೊಂದು ಕ್ಷೇತ್ರವೆಂದರೆ ಕೆ.ಆರ್.ಪೇಟೆ. ಇಲ್ಲಿ, ಕಾಂಗ್ರೆಸ್ಸಿನ ಕೆ.ಬಿ.ಚಂದ್ರಶೇಖರ್ ಮೂರನೇ ಸ್ಥಾನಕ್ಕೆ ಹೋಗುವ ಸಾಧ್ಯತೆಯಿದೆ. ಇಲ್ಲಿ, ಬಿಜೆಪಿಯ ನಾರಾಯಣ ಗೌಡ ಮತ್ತು ಜೆಡಿಎಸ್ಸಿನ ದೇವರಾಜ್ ಬಿ.ಎಲ್ ನಡುವೆ ನೇರ ಸ್ಪರ್ಧೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications