ಚಂದ್ರಯಾನ 3: 'ಶಿವಶಕ್ತಿ' ನಾಮಕರಣ ಇದು ವಿಜ್ಞಾನ-ಆಧ್ಯಾತ್ಮದ ಸಮ್ಮಿಲನ: ಬೊಮ್ಮಾಯಿ
ಬೆಂಗಳೂರು, ಆಗಸ್ಟ್ 27: ಚಂದ್ರನ ಅಂಗಳದಲ್ಲಿ ಸೆಟಲೈಟ್ ಸ್ಪರ್ಶ ಮಾಡಿದ ಸ್ಥಳಕ್ಕೆ ಶಿವಶಕ್ತಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನಾಮಕರಣ ಮಾಡುವ ಮೂಲಕ ವಿಜ್ಞಾನ ಮತ್ತು ಆಧ್ಯಾತ್ಮವನ್ನು ಒಗ್ಗೂಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಭಾನುವಾರ ಶೋಭಾ ನಾಗಸಂದ್ರ ಅಪಾರ್ಟ್ಮೆಂಟ್ ವೆಲ್ ಫೇರ್ ಅಸೋಸಿಯೇಷನ್ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚಂದ್ರಯಾನ 3 ಯಶಸ್ವಿ ಉಡಾವಣೆಗೆ ಕಾರಣರಾದ ವಿಜ್ಞಾನಿಗಳಿಗೆ ಸನ್ಮಾನ ಮಾಡಿ ಅವರು ಮಾತನಾಡಿದರು.

ಇಸ್ರೊ ವಿಜ್ಞಾನಿಗಳ ನಿರಂತರ ದಣಿವಿಲ್ಲದ ಶ್ರಮದ ಫಲವಾಗಿ ಭಾರತ ವಿಶ್ವ ಮಟ್ಟದಲ್ಲಿ ಮುಂಚೂಣಿ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲುವಂತಾಗಿದೆ. ಕರ್ನಾಟಕ ವಿಜ್ಞಾನ, ತಂತ್ರಜ್ಞಾನ ಕೃಷಿ ಸೇರಿದಂತೆ ಎಲ್ಲ ರಂಗಗಳಲ್ಲೂ ಮುಂಚೂಣಿಯಲ್ಲಿದ್ದು, ನಮ್ಮ ಸರ್ಕಾರ ಅಗತ್ಯ ನೆರವು ನೀಡಿತ್ತು ಎಂದು ಹೇಳಿದರು.
ಪ್ರಧಾನಿ ದೂರದೃಷ್ಟಿಯಿಂದ ಸಂಶೋಧನೆಗೆ ಒತ್ತು
ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿಯ ನಾಯಕತ್ವ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮನ್ವಯತೆಯಿಂದ ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ದೊರೆಯುವಂತಾಯಿತು ಎಂದರು.
ಇಸ್ರೋ ವಿಜ್ಞಾನಿಗಳ ಒಗ್ಗಟ್ಟಿನ ಶ್ರಮದ ಫಲವಾಗಿ ಚಂದ್ರಯಾನ 3 ಯಶಸ್ವಿಯಾಗಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಘನತೆ ಹೆಚ್ಚಾಗುವಂತೆ ಮಾಡಿದ್ದಲ್ಲದೇ ವಿಜ್ಞಾನ ಮತ್ತು ಆಧ್ಯಾತ್ಮವನ್ನೂ ಬೆಸೆಯುವಂತೆ ಮಾಡಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಜ್ಞಾನಿಗಳಾದ ಮನೀಷ್ ಚಾವ್ಲ, ಶ್ರೀಮತಿ ಕಲ್ಪನಾ ಅರವಿಂದ್, ಆಕಾಂಕ್ಷ ಭಾರದ್ವಾಜ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಾಸರಹಳ್ಳಿ ಶಾಸಕ ಮುನಿರಾಜು, ಶುಭ ನಾಗಸಂದ್ರ ಅಪಾರ್ಟ್ಮೆಂಟ್ ಅಧ್ಯಕ್ಷ ಚಂದ್ರಶೇಖರ ಬೆಳಗೆರೆ ಹಾಗು ಮತ್ತಿತರರು ಪಾಲ್ಗೊಂಡಿದ್ದರು.
ಅಪಾರ್ಟ್ಮೆಂಟ್ನಲ್ಲಿ ರಕ್ಷಾ ಬಂಧನ ಉತ್ಸವ
ಇನ್ನೂ ಇದೇ ಶೋಭಾ ಅಪಾರ್ಟ್ಮೆಂಟ್ ಆವರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಇಂದು ಬೆಂಗಳೂರಿನ ನಾಗಸಂದ್ರದ ಶೋಭಾ ಅಪಾರ್ಟ್ಮೆಂಟ್ ನಲ್ಲಿ ನಡೆದ "ರಕ್ಷಾಬಂಧನದ ಉತ್ಸವ" ದಲ್ಲಿ ಭಾಗವಹಿಸಿ, ನಮ್ಮ ರಾಷ್ಟ್ರೀಯತೆ ಹಾಗೂ ನಮ್ಮ ಸಂಸ್ಕೃತಿಗಳ ರಕ್ಷಣೆಗಾಗಿ ಪರಸ್ಪರ ರಕ್ಷಾಗಳನ್ನು ಕಟ್ಟಲಾಯಿತು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications