ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಸ್ಪರ್ಧೆ: ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ಬೆಂಗಳೂರು, ಜೂನ್ 13: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆಕುರಿತು ಅಭ್ಯರ್ಥಿಯ ಆಯ್ಕೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಅಭ್ಯರ್ಥಿ ಯಾರು ಆಗಬೇಕೆಂದು ವರಿಷ್ಠರು ನಿರ್ಧಾರ ಮಾಡುತ್ತಾರೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ರಾಜ್ಯ, ರಾಷ್ಟ್ರೀಯ ನಾಯಕರು ಕೂತು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎರಡೂ ಪಕ್ಷಗಳ ನಾಯಕರ ಅಭಿಪ್ರಾಯ ಪಡೆದು ಅಂತಿಮವಾಗಿ ಆ ವರದಿಯನ್ನು ವರಿಷ್ಠರಿಗೆ ಸಲ್ಲಿಕೆ ಮಾಡುತ್ತೇವೆ. ಸದ್ಯಕ್ಕೆ ಅಲ್ಲಿ ನನ್ನ ಸ್ಪರ್ಧೆ ಚರ್ಚೆ ಅಪ್ರಸ್ತುತ. ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್ ಕೂಡ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದಾರೆ. ಹೀಗಾಗಿ ಅಂತಿಮವಾಗಿ ಅಭ್ಯರ್ಥಿ ಯಾರಾಗಬೇಕೆಂದು ಎರಡು ಪಕ್ಷಗಳ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ನಿಖಿಲ್ ಅವರು ತಿಳಿಸಿದರು.

ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವ ಬಗ್ಗೆ ಕಾಂಗ್ರೆಸ್ ನಾಯಕರೇ ಮಾತನಾಡುತ್ತಿದ್ದಾರೆ. ಇಂತಹ ಉದ್ಧಟತನದ ಮಾತುಗಳನ್ನು ಆಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಹಾಗೂ ದೇಶದಲ್ಲಿ ನಮ್ಮ ಹೋರಾಟ ಇರುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದು, ಆ ಸಂಭ್ರಮದಲ್ಲಿ ನಾನು ಕೂಡ ಭಾಗಿಯಾಗುತ್ತೇನೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಜೆಡಿಎಸ್ ಸಂಘಟನೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುವೆ. 2019ರಲ್ಲಿ ಅನಿರೀಕ್ಷಿತವಾಗಿ ನಾನು ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯಾದೆ. ರಾಜಕಾರಣ ದೊಡ್ಡ ಜವಾಬ್ದಾರಿ. ಪ್ರಾದೇಶಿಕ ಪಕ್ಷ ನಿಭಾಯಿಸುವ ಜವಾಬ್ದಾರಿ ಕೂಡ ದೊಡ್ಡದು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡುತ್ತೇನೆ. ಸಿನಿಮಾಗಳಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ಅವರು, ನಮ್ಮ ನಡೆ ಉತ್ತಮವಾಗಿ ಇರಬೇಕು. ಸಾರ್ವಜನಿಕ ಜೀವನಕ್ಕೆ ಬಂದ ಮೇಲೆ ಜನ ನಮ್ಮನ್ನು ಗಮನಿಸುತ್ತಿರುತ್ತಾರೆ. ನಮ್ಮ ನಡೆ ಉತ್ತಮವಾಗಿ ಇರುವಂತೆ ನೋಡಿಕೊಳ್ಳಬೇಕು. ಅವರ ಪ್ರಕರಣ ಈಗಾಗಲೇ ತನಿಖೆ ನಡೆಯುತ್ತಿದೆ. ಈಗಲೇ ಆ ವಿಚಾರದ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ ಎಂದರು.
ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಜವರಾಯಿಗೌಡ, ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಉಪಸ್ಥಿತರಿದ್ದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications