Get Updates
Get notified of breaking news, exclusive insights, and must-see stories!

ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಸ್ಪರ್ಧೆ: ನಿಖಿಲ್‌ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು, ಜೂನ್‌ 13: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆಕುರಿತು ಅಭ್ಯರ್ಥಿಯ ಆಯ್ಕೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಅಭ್ಯರ್ಥಿ ಯಾರು ಆಗಬೇಕೆಂದು ವರಿಷ್ಠರು ನಿರ್ಧಾರ ಮಾಡುತ್ತಾರೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ರಾಜ್ಯ, ರಾಷ್ಟ್ರೀಯ ನಾಯಕರು ಕೂತು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎರಡೂ ಪಕ್ಷಗಳ ನಾಯಕರ ಅಭಿಪ್ರಾಯ ಪಡೆದು ಅಂತಿಮವಾಗಿ ಆ ವರದಿಯನ್ನು ವರಿಷ್ಠರಿಗೆ ಸಲ್ಲಿಕೆ ಮಾಡುತ್ತೇವೆ. ಸದ್ಯಕ್ಕೆ ಅಲ್ಲಿ ನನ್ನ ಸ್ಪರ್ಧೆ ಚರ್ಚೆ ಅಪ್ರಸ್ತುತ. ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್ ಕೂಡ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದಾರೆ. ಹೀಗಾಗಿ ಅಂತಿಮವಾಗಿ ಅಭ್ಯರ್ಥಿ ಯಾರಾಗಬೇಕೆಂದು ಎರಡು ಪಕ್ಷಗಳ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ನಿಖಿಲ್ ಅವರು ತಿಳಿಸಿದರು.

Channapatna by-election candidate selection High Command decision Says Nikhil Kumaraswamy

ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವ ಬಗ್ಗೆ ಕಾಂಗ್ರೆಸ್‌ ನಾಯಕರೇ ಮಾತನಾಡುತ್ತಿದ್ದಾರೆ. ಇಂತಹ ಉದ್ಧಟತನದ ಮಾತುಗಳನ್ನು ಆಡುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯ ಹಾಗೂ ದೇಶದಲ್ಲಿ ನಮ್ಮ ಹೋರಾಟ ಇರುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದು, ಆ ಸಂಭ್ರಮದಲ್ಲಿ ನಾನು ಕೂಡ ಭಾಗಿಯಾಗುತ್ತೇನೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಮುಂದಿನ ದಿನಗಳಲ್ಲಿ ಜೆಡಿಎಸ್ ಸಂಘಟನೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುವೆ. 2019ರಲ್ಲಿ ಅನಿರೀಕ್ಷಿತವಾಗಿ ನಾನು ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯಾದೆ. ರಾಜಕಾರಣ ದೊಡ್ಡ ಜವಾಬ್ದಾರಿ. ಪ್ರಾದೇಶಿಕ ಪಕ್ಷ ನಿಭಾಯಿಸುವ ಜವಾಬ್ದಾರಿ ಕೂಡ ದೊಡ್ಡದು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡುತ್ತೇನೆ. ಸಿನಿಮಾಗಳಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ಅವರು, ನಮ್ಮ ನಡೆ ಉತ್ತಮವಾಗಿ ಇರಬೇಕು. ಸಾರ್ವಜನಿಕ ಜೀವನಕ್ಕೆ ಬಂದ ಮೇಲೆ ಜನ ನಮ್ಮನ್ನು ಗಮನಿಸುತ್ತಿರುತ್ತಾರೆ. ನಮ್ಮ ನಡೆ ಉತ್ತಮವಾಗಿ ಇರುವಂತೆ ನೋಡಿಕೊಳ್ಳಬೇಕು. ಅವರ ಪ್ರಕರಣ ಈಗಾಗಲೇ ತನಿಖೆ ನಡೆಯುತ್ತಿದೆ. ಈಗಲೇ ಆ ವಿಚಾರದ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ ಎಂದರು.

ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಜವರಾಯಿಗೌಡ, ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+