Get Updates
Get notified of breaking news, exclusive insights, and must-see stories!

Channapatna By Election| ಜೆ.ಪಿ ನಡ್ಡಾ ಭೇಟಿ‌ ಮಾಡಿದ ಸಿ.ಪಿ ಯೋಗೇಶ್ವರ್ !

ಚನ್ನಪಟ್ಟಣ ಉಪ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಒಂದು ಕಡೆ ಮೈತ್ರಿ ಪಕ್ಷಗಳಾದ ಬಿಜೆಪಿ - ಜೆಡಿಎಸ್ ಯಾರನ್ನು ಕಣಕ್ಕೆ ಇಳಿಸಬೇಕು ಎನ್ನುವ ಗೊಂದಲದಲ್ಲಿ ಇದ್ದರೆ, ಇನ್ನೊಂದು ಕಡೆ ಕಾಂಗ್ರೆಸ್‌ ತನ್ನದೇ ತಂತ್ರವನ್ನು ಮಾಡುತ್ತಿದೆ. ಇದೀಗ ಚನ್ನಪಟ್ಟಣ ಉಪ ಚುನಾವಣೆ ಕ್ಲೈಮಾಕ್ಸ್‌ ತಲುಪುವ ಹಂತಕ್ಕೆ ಬಂದಿದೆ.

ಚನ್ನಪಟ್ಟಣದಿಂದ ಆಯ್ಕೆಯಾಗಿದ್ದ ಜೆಡಿಎಸ್ ಪ್ರಮುಖ ನಾಯಕ ಎಚ್‌.ಡಿ ಕುಮಾರಸ್ವಾಮಿ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಕೇಂದ್ರ ಸಚಿವರು ಆಗಿದ್ದಾರೆ. ಎಚ್‌.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದಾಗಿ ತೆರವಾಗಿರುವ ಸ್ಥಾನಕ್ಕೆ (ಚನ್ನಪಟ್ಟಣದಲ್ಲಿ) ಉಪ ಚುನಾವಣೆ ಕಣ ಎಲ್ಲ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿ ಬದಲಾಗಿದೆ. ಇದೇ ಸಂದರ್ಭದಲ್ಲಿ ಸಿ.ಪಿ ಯೋಗೇಶ್ವರ್ ಅವರು ಮೈತ್ರಿ ಪಕ್ಷಗಳಾದ ಬಿಜೆಪಿ - ಜೆಡಿಎಸ್ ಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ.

Channapatna By Election JP Nadda met CP Yogeshwar

ಜೆ.ಪಿ ನಡ್ಡಾ ಭೇಟಿ ಮಾಡಿದ ಯೋಗೇಶ್ವರ್

ಚನ್ನಪಟ್ಟಣದಿಂದ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಉತ್ಸುಕರಾಗಿರುವ ಹಾಗೂ ಚನ್ನಪಟ್ಟಣದಲ್ಲಿ ತಮ್ಮದೇ ಹವಾ ಮೂಡಿಸಿರುವ ಸಿ.ಪಿ ಯೋಗೇಶ್ವರ್ ಅವರು ಶುಕ್ರವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚನ್ನಪಟ್ಟಣ ಉಪ ಚುನಾವಣೆಯ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಕರ್ನಾಟಕದ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್, ಅಶ್ವಥ್ ನಾರಾಯಣ ಹಾಗೂ ಅರವಿಂದ ಬೆಲ್ಲದ ಅವರು ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಯೋಗೇಶ್ವರ್ ನಡೆಗೆ ವಿರೋಧ ವ್ಯಕ್ತಪಡಿಸಿದ್ದ ಎಚ್‌.ಡಿಕೆ

ಸಿ.ಪಿ ಯೋಗೇಶ್ವರ್ ಅವರು ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಆರ್‌. ಅಶೋಕ್‌ ಅವರ ಟೀಂ ಸಿ.ಪಿ ಯೋಗೇಶ್ವರ ಅವರನ್ನು ದೆಹಲಿಗೆ ಕರೆದುಕೊಂಡು ಹೋಗಿ ಜೆ.ಪಿ ನಡ್ಡಾ ಅವರೊಂದಿಗೆ ಸಭೆ ನಡೆಸಿದೆ.

ಈಚೆಗೆ ಬಿಜೆಪಿ ಹಾಗೂ ಜೆಡಿಎಸ್ ಗೆ ಸಿ.ಪಿ ಯೋಗೇಶ್ವರ ಅವರ ಪಟ್ಟು ಬಿಸಿ ತುಪ್ಪವಾಗಿ ಪರಿಣಮಿಸಿತ್ತು. ಗುರುವಾರ ನಡೆದ ಬಿಜೆಪಿ - ಜೆಡಿಎಸ್ ಸಭೆಯಲ್ಲೂ ಎಚ್‌.ಡಿ ಕುಮಾರಸ್ವಾಮಿ ಅವರು ಬಹಿರಂಗವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ್ದರು. ಎಚ್‌.ಡಿ ಕುಮಾರಸ್ವಾಮಿ ಅವರ ವರ್ತನೆಗೆ ಬಿಜೆಪಿ - ಜೆಡಿಎಸ್ ನಾಯಕರು ಸಹ ಶಾಕ್‌ ಆಗಿದ್ದರು. ಅದರ ಬೆನ್ನಲ್ಲೇ ಈ ಸಭೆ ನಡೆದಿದೆ.

ಜೆಡಿಎಸ್ ಟಿಕೆಟ್ ಕೊಟ್ಟರೂ ಓಕೆ ಎಂದಿದ್ದ ಯೋಗೇಶ್ವರ್

ಬಿಜೆಪಿಯಿಂದ ಟಿಕೆಟ್ ಕೊಡಲು ಸಾಧ್ಯವಾಗದೆ ಇದ್ದರೆ, ಜೆಡಿಎಸ್ ನಿಂದ ನನಗೆ ಟಿಕೆಟ್ ಕೊಟ್ಟರೂ ಸಮಸ್ಯೆ ಇಲ್ಲ ಎಂದು ಟಿಕೆಟ್ ಆಕಾಂಕ್ಷಿ ಸಿ.ಪಿ ಯೋಗೇಶ್ವರ್ ಹೇಳಿದ್ದರು. ಎರಡು ಪಕ್ಷಗಳಲ್ಲಿ ಯಾವುದೇ ಪಕ್ಷದಿಂದಾದರೂ ನನಗೆ ಟಿಕೆಟ್ ಸಿಕ್ಕರೂ ನಾನು ಚುನಾವಣೆಯಲ್ಲಿ ಸ್ಪರ್ಧಿಸಬಲ್ಲೆ.

ಒಂದೊಮ್ಮೆ ಎರಡೂ ಪಕ್ಷದಿಂದ ನನಗೆ ಟಿಕೆಟ್ ಸಿಗದೆ ಇದ್ದರೆ, ನಾನು ಪಕ್ಷೇತರ ಅಭ್ಯರ್ಥಿಯಾಗಿ ಇಲ್ಲವೇ ಬಿಎಸ್ ಪಿಯಿಂದ ಸ್ಪರ್ಧೆ ಮಾಡುತ್ತೇನೆ ಎಂದು ಸಿ.ಪಿ ಯೋಗೇಶ್ವರ್ ಹೇಳಿದ್ದರು. ಇದು ಎಚ್‌.ಡಿ ಕುಮಾರಸ್ವಾಮಿ ಗರಂ ಆಗಲು ಕಾರಣವಾಗಿತ್ತು. ಎಚ್‌.ಡಿ ಕುಮಾರಸ್ವಾಮಿ ಅವರು ಅವರ ಪುತ್ರ ಹಾಗೂ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರಿಗೆ ರಾಜಕೀಯ ಭವಿಷ್ಯ ರೂಪಿಸಬೇಕು ಎಂದು ನೋಡುತ್ತಿದ್ದಾರೆ. ಆದರೆ, ಅದು ಸಹಕಾರವಾಗುವ ಲಕ್ಷಣ ಕಾಣಿಸುತ್ತಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+