ಚನ್ನಪಟ್ಟಣದಲ್ಲಿ ಸೈನಿಕನಿಗೆ ರಾಜಕೀಯ ಭವಿಷ್ಯದ ಪ್ರಶ್ನೆ: ಸ್ಪರ್ಧೆ ಕುರಿತು ಸಿ ಪಿ ಯೋಗೇಶ್ವರ್ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 08: ಸೈನಿಕ ಸಿ ಪಿ ಯೋಗೇಶ್ವರ್ ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡದಿದ್ದರೇ ಸ್ಪತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸದಿರಲು ಮಾಜಿ ಸಚಿವ, ಬಿಜೆಪಿ ಎಂಎಲ್ಸಿ ಸಿಪಿ ಯೋಗೇಶ್ವರ ನಿರ್ಧರಿಸಿದ್ದಾರೆ. ನವದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ ನಂತರ, ಯೋಗೇಶ್ವರ ಅವರು ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರಯತ್ನಗಳು ವ್ಯರ್ಥವಾಗಿರುವುದರಿಂದ ಸದ್ಯ ಸಿ ಪಿ ಯೋಗೇಶ್ವರ್ ಸೈಲೆಂಟ್ ಆಗಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ನನಗೆ ನನ್ನದೇ ಆದ ಬೆಂಬಲವಿದೆ. ಚುನಾವಣೆ ನಿಲ್ಲಲೇಬೇಕೆಂದು ಕಾರ್ಯಕರ್ತರು ಒತ್ತಡ ಹಾಕಿದ್ದಾರೆ. ಬಹುತೇಕ ಸ್ಪರ್ಧೆ ಮಾಡಲೇಬೇಕು ಎಂದುಕೊಂಡಿದ್ದೇನೆ. ಚಿಹ್ನೆ ಯಾವುದಾದರೂ ಇರಲಿ, ಸ್ಪರ್ಧೆ ಮಾಡುವ ಇಂಗಿತವಿದೆ. ಎಲ್ಲವನ್ನೂ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದೇನೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ನನಗೆ ನನ್ನದೇ ಆದ ಬೆಂಬಲವಿದೆ. (ಬೆಂಬಲಿಗರಿಂದ) ಒತ್ತಡ ಮತ್ತು ಅವರ (ಬೆಂಬಲಗಾರರ) ನೈತಿಕತೆಯನ್ನು ಹೆಚ್ಚಿಸಲು ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಸುಳಿವು ನೀಡಿದ್ದೇನೆ. ಆದರೆ ಈಗ ನಾನು ಬಿಜೆಪಿ ಅಥವಾ ಜೆಡಿಎಸ್ನಿಂದ ಸ್ಪರ್ಧಿಸಬೇಕು. ಇಲ್ಲವಾದಲ್ಲಿ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿ ಮೌನವಹಿಸಬೇಕು ಎಂದು ಎಂಎಲ್ಸಿ ಸಿ ಪಿ ಯೋಗೇಶ್ವರ್ ಗುರುವಾರ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಡುವೆ ಭಿನ್ನಾಭಿಪ್ರಾಯ ಉಂಟು ಮಾಡಿದ ಆರೋಪವನ್ನು ಹೊರಲು ಬಯಸದ ಕಾರಣ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಬೇಕಾಯಿತು ಎಂದು ಯೋಗೇಶ್ವರ ಹೇಳಿದರು.
ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಯೋಗೇಶ್ವರ್ ಪರ ಬಹಿರಂಗವಾಗಿ ಲಾಬಿ ನಡೆಸಿದ್ರು. ಆದರೆ, ಬಿಜೆಪಿ ಹೈಕಮಾಂಡ್ ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿಯನ್ನು ನಿರ್ಧರಿಸಲು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಬಿಟ್ಟಿದೆ ಎಂದು ಹೇಳಲಾಗಿದೆ.
ಬಿಜೆಪಿ ಹೈಕಮಾಂಡ್'ನ ಈ ನಿರ್ಧಾರ ಮೈತ್ರಿ ಪಕ್ಷ ಜೆಡಿಎಸ್'ಗೆ ಮತ್ತಷ್ಟು ಶಕ್ತಿ ನೀಡಿದಂತಾಗಿದೆ. ಹೀಗಾಗಿ ಕುಮಾರಸ್ವಾಮಿಯವರು ಇದೀಗ ಚನ್ನಪಟ್ಟಣ ಕ್ಷೇತ್ರದಲ್ಲಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ ಎಂದು ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
ಇನ್ನೂ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಯಾವುದೇ ಮನವಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications