CP Yogeshwar: ರಾಜೀನಾಮೆ ಕೊಟ್ಟ ಸಿಪಿ ಯೋಗೇಶ್ವರ ವಿರುದ್ಧ ಪುತ್ರಿ 'ನಿಶಾ' ಸಮರ
ಬೆಂಗಳೂರು, ಅಕ್ಟೋಬರ್ 22: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ಸಿಗುವುದು ಅನುಮಾನ ವಿಚಾರ ಗೊತ್ತಾಗುತ್ತಿದ್ದಂತೆ ಮಾಜಿ ಸಚಿವ, ಪ್ರಬಲ ಟಿಕೆಟ್ ಆಕಾಂಕ್ಷಿ ಸಿ.ಪಿ.ಯೋಗೇಶ್ವರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷೇತರ ಸ್ಪರ್ಧೆಗೆ ಮುಂದಾಗಿರುವ ಅವರ ವಿರುದ್ಧ ಪುತ್ರಿ ನಿಶಾ ಯೋಗೇಶ್ವರ ಅವರು ಸಮರ ಸಾರಿದ್ದಾರೆ. ಎಲ್ಲವನ್ನು ಬಯಲು ಮಾಡುತ್ತೇನೆ ಎಂದು ಪಣ ತೊಟ್ಟಿದ್ದಾರೆ.
ಹೌದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಚುನಾವಣೆಗೆ ನಿಲ್ಲಲು ತಯಾರಿ ನಡೆಸಿರುವ ಸಿ.ಪಿ ಯೋಗೇಶ್ವರ ಅವರು ಪುತ್ರಿ ನಿಶಾ ಅವರಿಂದಲೇ ಸಂಕಷ್ಟ ಎದುರಿಸುವಂತಾಗಿದೆ. ರಾಜೀನಾಮೆ ಕೊಡುತ್ತಿದ್ದಂತೆ ತಂದೆ ಸಿಪಿ ಯೋಗೇಶ್ವರ ಅವರ ವಿರುದ್ಧ ಬಹಿರಂಗವಾಗಿ ವಿಡಿಯೋ ಮಾಡಿದ್ದಾರೆ. ಆದರೆ ಎಲ್ಲೂ ತಂದೆಯ ಹೆಸರು ಪ್ರಸ್ತಾಪಿಸದೇ ಕೆಲವು ಅಂಶಗಳನ್ನು ಮಾತನಾಡಿದ್ದಾರೆ.

ತಂದೆ ವಿರುದ್ಧ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ನಿಶಾ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲವನ್ನು ಬೆಳಕಿಗೆ ತರುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಜೀವನದ ಸತ್ಯ ಜನರ ಮುಂದಿಡುವೆ: ನಿಶಾ
ನಾನು ರಾಜಕೀಯಕ್ಕೆ ಬರಬಾರದು ಎಂದು ತಡೆದರು. ಉತ್ತಮ ವಿದ್ಯಾಭ್ಯಾಸ ಮಾಡದಂತೆ, ಸಮಾಜ ಸೇವೆ ಮಾಡದಂತೆ ನನ್ನು ತಡೆಯಲಾಯಿತು. ಇಷ್ಟದ ಯಾವ ರಂಗದಲ್ಲೂ ಮುಂದೆ ಬರದಂತೆ ಮಾಡಿದರು. ಜೀವನದಲ್ಲಿ ಯಾವೊಂದು ಹಂತದಲ್ಲಿಯೂ ಮುಂದೆ ಬರಲು ಬಿಡದಂತೆ ಮಾಡಿದರೂ. ನನ್ನ ಜೀವನ ಸತ್ಯ, ಅದರ ಕುರಿತು ಹಲವು ಅಂಶಗಳನ್ನು ಜನರು ಮುಂದಿಡುತ್ತೇನೆ ಎಂದು ತಂದೆ ವಿರುದ್ಧ ನಿಶಾ ಅವರು ಗುಡುಗಿದ್ದಾರೆ.

ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ತಂದೆ ಸಿಪಿ ಯೋಗೇಶ್ವರ ಪರ ನಿಶಾ ಅವರು ಭರ್ಜರಿ ಪ್ರಚಾರ ನಡೆಸಿದ್ದರು. ಅದಾಗಿ ಕೆಲವು ದಿವಸಗಳಲ್ಲಿಯೇ ಇಬ್ಬರು ಮಧ್ಯೆ ಮನಸ್ತಾಪ ಶುರುವಾಗಿತ್ತು. ಇದು ಸಹ ಸಾಕಷ್ಟು ಚರ್ಚೆ ಆಗಿತ್ತು. ಅದಾಗುತ್ತಿದ್ದಂತೆ ಲೋಕಸಭಾ ಚುನಾವಣೆ ಹೊತ್ತಿಗೆ ನಿಶಾ ಯೋಗೇಶ್ವರ ಅವರು, ಕಾಂಗ್ರೆಸ್ ಪಕ್ಷ ಸೇರಿಕೊಂಡರು.
ಕ್ಷೇತ್ರದಲ್ಲಿ ತಂದೆ ಇಮೇಜ್ಗೆ ಡ್ಯಾಮೇಜ್
ಇದೀಗ ಪಕ್ಷೇತರವಾಗಿ ಚನ್ನಪಟ್ಟಣದಲ್ಲಿ ಸ್ಪರ್ಧಿಸುತ್ತಿರುವ ಸಿ.ಪಿ ಯೋಗೇಶ್ವರ ವಿರುದ್ಧ ಮಗಳೇ ತಿರುಗಿ ಬಿದ್ದಿದ್ದಾರೆ. ಕ್ಷೇತ್ರದಲ್ಲಿ ತಂದೆ ಇಮೇಜ್ ಡ್ಯಾಮೇಜ್ ಮಾಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಸದ್ಯ ಚುನಾವಣೆ ಸಂದರ್ಭವಾಗಿದ್ದರಿಂದ ಕಾಂಗ್ರೆಸ್ಗೆ ಅಪ್ಪ ಮಗಳ ಜಗಳ ವರದಾನವಾಗುವ ಸಾಧ್ಯತೆ ಇದೆ..
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications