ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಬೈ ಎಲೆಕ್ಷನ್: ಇಲ್ಲಿದೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ!
ಬೆಂಗಳೂರು, ಅಕ್ಟೋಬರ್ 16: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಉಪ ಚುನಾವಣೆ ಘೋಷಣೆಯಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿಯ ಶಿಗ್ಗಾಂವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆಗಿದ್ದು, ಟಿಕೆಟ್ಗಾಗಿ ಫೈಪೋಟಿ ಜೋರಾಗಿದೆ.
ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ರಂಗೇರಿದ್ದು, ಟಿಕೆಟ್ಗಾಗಿ ಭಾರೀ ಲಾಬಿಗಳು ನಡೆಯುತ್ತಿವೆ. ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರ ಸಾಕಷ್ಟು ಮಹತ್ವದವನ್ನ ಪಡೆದುಕೊಂಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಅಸ್ತಿತ್ವದ ಪ್ರಶ್ನೆಯಾದ್ರೆ, ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಪ್ರತಿಷ್ಠೆಯಾಗಿದೆ.

ಮೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆ ಆದ ಬೆನ್ನಲ್ಲೇ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಕಾಂಕ್ಷಿಗಳಿಂದ ಪೈಪೋಟಿ ಜೋರಾಗಿದೆ. ಟಿಕೆಟ್ ಗಾಗಿ ಲಾಬಿ ಶುರುವಾಗಿದ್ದು, ಹಲವು ಆಕಾಂಕ್ಷಿಗಳು ರಾಜ್ಯ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ರೆ, ಇನ್ನೂ ಕೆಲವರು ರಾಷ್ಟ್ರ ಮಟ್ಟದ ನಾಯಕರ ಮುಂದೆ ಬೇಡಿಕೆ ಇಟ್ಟಿದ್ದಾರೆ. ಅದರಲ್ಲೂ ಶಿಗ್ಗಾಂವಿಯಲ್ಲಿ ಹಲವು ಆಕಾಂಕ್ಷಿಗಳು ಇದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ.
ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಯಾರು ಎಂಬುವುದು ಕುತೂಹಲಕ್ಕೆ ಕಾರಣವಾಗಿದ್ದು, ಮೂರು ಕ್ಷೇತ್ರಗಳಿಗೆ ಹಲವು ಆಕಾಂಕ್ಷಿಗಳು ಕಾಂಗ್ರೆಸ್ನಲ್ಲಿ ಇದ್ದಾರೆ. ಟಿಕೆಟ್ಗಾಗಿ ಭಾರೀ ಲಾಬಿಗಳು ನಡೆಯುತ್ತಿದ್ದು, ಅಭ್ಯರ್ಥಿ ಆಯ್ಕೆ ಕಸರತ್ತು ಇನ್ನೂ ಮುಂದುವರಿದಿದೆ. ಹಾಗಾದ್ರೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳು ಯಾರೆಲ್ಲಾ? ಇಲ್ಲಿದೆ ಮಾಹಿತಿ
ಮೂರು ಕ್ಷೇತ್ರಗಳ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿಗಳು ಯಾರು?
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ
* ಡಿಕೆ ಸುರೇಶ್, ಮಾಜಿ ಸಂಸದ
* ಡಿಕೆ ಶಿವಕುಮಾರ್, ಡಿಸಿಎಂ
* ರಘುನಂದನ್ ರಾಮಣ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
* ಅಶ್ವಥ್, ಮಾಜಿ ಶಾಸಕ
ಶಿಗ್ಗಾಂವಿ ವಿಧಾನಸಭೆ ಕ್ಷೇತ್ರ
* ಯಾಸಿರ್ ಖಾನ್ ಪಠಾಣ್, 2023 ಪರಾಜಿತ ಅಭ್ಯರ್ಥಿ
* ಅಜಂಪೀರ್ ಖಾದ್ರಿ, ಮಾಜಿ ಶಾಸಕ
* ಆನಂದ್ ಗಡ್ಡದೇವರ ಮಠ, ಲೋಕಸಭಾ ಅಭ್ಯರ್ಥಿ
* ಸಿಎಂ ಫೈಜ಼್, ಸಿಎಂ ಇಬ್ರಾಹಿಂ ಪುತ್ರ
* ಸೋಮಣ್ಣ ಬೇವಿನಮರದ, ಮಾಜಿ ಎಂಎಲ್ಸಿ
ಸಂಡೂರು ವಿಧಾನಭೆ ಕ್ಷೇತ್ರ
* ಅನ್ನಪೂರ್ಣ ತುಕಾರಾಂ, ತುಕಾರಾಂ ಪತ್ನಿ
* ಸೌಪರ್ಣಿಕ, ತುಕಾರಾಂ ಪುತ್ರಿ
ಚುನಾವಣೆಯ ಪ್ರಮುಖ ದಿನಾಂಕಗಳು
* ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟ
* ಅಕ್ಟೋಬರ್ 25ರಂದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಕೊನೆ ದಿನ
* ಅಕ್ಟೋಬರ್ 28ರಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ
* ಅಕ್ಟೋಬರ್ ಅ.30ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications