Siddaramaiah: ಸೋನಿಯಾ-ರಾಹುಲ್ ವಿರುದ್ಧ ಚಾರ್ಜ್ಶೀಟ್ ಮೋದಿ ಸರ್ಕಾರ ಸೇಡಿನ ರಾಜಕಾರಣ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯವು (ಇಡಿ) ದೋಷಾರೋಪ ಪಟ್ಟಿ ಸಲ್ಲಿಸಿದೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಆರೋಪ ಮಾಡಿದ್ದಾರೆ.
ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ. ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವ ಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ. ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸ್ವಾಯತ್ತ ತನಿಖಾ ಸಂಸ್ಥೆಯಾದ ಇಡಿಯನ್ನು ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಸಾಧಿಸಲು ಆಯುಧವನ್ನಾಗಿ ಬಳಸುತ್ತಾ ಬಂದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಾಗಿರುವ ಸುಳ್ಳು ಆರೋಪವನ್ನು ಬಳಸಿಕೊಂಡಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದಂತೆಯೇ ಈ ದ್ವೇಷದ ರಾಜಕಾರಣ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ ಎಂದು ದೂರಿದ್ದಾರೆ.
ವಿಚಾರಣೆಯ ನೆಪದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಪೀಡಿಸಿದ ಜಾರಿ ನಿರ್ದೇಶನಾಲಯ ಅದರಿಂದ ಯಾವುದೇ ಫಲ ಸಿಗದೆ ಇದ್ದಾಗ, ಕಲ್ಪಿತ ಕತೆಗಳನ್ನು ಕಟ್ಟಿ ಆರೋಪ ಪಟ್ಟಿ ಸಲ್ಲಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟಿಸಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಏನಿದು ಪ್ರಕರಣ?: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಅಸೋಸಿಯೇಟೆಡ್ ಲಿಮಿಟೆಡ್ ಜರ್ನಲ್ (ಎಜೆಎಲ್) ಒಡೆತನದಲ್ಲಿದ್ದು, ಎಜೆಎಲ್ಗೆ ಎಐಸಿಸಿ ಮೂಲಕ 90 ಕೋಟಿ ರೂಪಾಯಿ ಸಾಲ ನೀಡಿತ್ತು. ಆದರೆ ಈ ಸಾಲ ಮರುಪಾವತಿ ಆಗಿರಲಿಲ್ಲ. ಎಜೆಎಲ್ ಸುಮಾರು 2,000 ಕೋಟಿ ರೂಪಾಯಿ ಆಸ್ತಿ ಹೊಂದಿತ್ತು. ಈ ನಡುವೆ ಎಜೆಎಲ್ ಆಸ್ತಿಯನ್ನು ಕಡಿಮೆ ತೋರಿಸಿ, ಕೇವಲ 50 ಲಕ್ಷ ರೂಪಾಯಿಗೆ ಯಂಗ್ ಇಂಡಿಯನ್ ಎಂಬ ಕಂಪನಿಗೆ ಎಜೆಎಲ್ ಅನ್ನು ಮಾರಾಟ ಮಾಡಲಾಗಿತ್ತು.
ಜಾರಿ ನಿರ್ದೇಶನಾಲಯವು ಕೆಲವು ವರ್ಷಗಳ ಹಿಂದೆಯೇ ಈ ಪ್ರಕರಣದಲ್ಲಿ ಸೋನಿಯಾ ಮತ್ತು ರಾಹುಲ್ ಅವರನ್ನು ವಿಚಾರಣೆ ನಡೆಸಿತ್ತು. ಸೋನಿಯಾ ಮತ್ತು ರಾಹುಲ್ ಗಾಂಧಿ ಅವರ ಒಡೆತನದ ಖಾಸಗಿ ಕಂಪನಿಯಾದ ಯಂಗ್ ಇಂಡಿಯನ್, ಎಜೆಎಲ್ಗೆ ಸೇರಿದ 2,000 ಕೋಟಿ ಮೌಲ್ಯದ ಆಸ್ತಿಯನ್ನು ಕೇವಲ ₹50 ಲಕ್ಷಕ್ಕೆ ತನ್ನದಾಗಿಸಿಕೊಂಡಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. 18 ಕೋಟಿ ಮೊತ್ತದ ನಕಲಿ ಡೊನೇಷನ್, 38 ಕೋಟಿ ಮೊತ್ತದ ನಕಲಿ ಮುಂಗಡ ಬಾಡಿಗೆ, 29 ಕೋಟಿ ಮೊತ್ತದ ನಕಲಿ ಜಾಹೀರಾತು ಹಣಕ್ಕೆ ಯಂಗ್ ಇಂಡಿಯನ್ ಮತ್ತು ಎಜೆಎಲ್ನ ಆಸ್ತಿಗಳನ್ನು ಮೂಲವೆಂದು ತೋರಿಸಲಾಗಿದೆ ಎಂದು ಇಡಿ ತಿಳಿಸಿದೆ.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications