Get Updates
Get notified of breaking news, exclusive insights, and must-see stories!

ಸಕಲ ಸರ್ಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಒಯಿ ಸಂತಾಪ ಸೂಚಿಸಿದರು.

ಬೆಂಗಳೂರು, ಮಾರ್ಚ್ 23: ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರವನ್ನ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶ್ರೀ ಚಾರುಕೀರ್ತಿ ಭಟ್ಟಾಚಾರಕ ಸ್ವಾಮೀಜಿಯವರ ನಿಧನಕ್ಕೆ ಸಿಎಂ ಸಂತಾಪ

ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು ಎಂದು ಸ್ವಾಮೀಜಿಗಳ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

Charukeerthi Bhattaraka Swamiji Body Will Be Cremated With State Honours Says Cm Basavaraj Bommai

ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ" ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದರು.

ಶ್ರೀ ಚಾರುಕೀರ್ತಿ ಭಟ್ಟಾಚಾರಕ ಸ್ವಾಮೀಜಿಯವರ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ..

ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀಗಳ ನಿಧನದ ಸುದ್ದಿ ಕೇಳಿ ಅತೀವ ನೋವಾಗಿದೆ ಎಂದು ವಿರೋಧ ಪಕ್ಷದ ನಾಯಕರ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಭಾರತೀಯ ಅಧ್ಯಾತ್ಮ ಪರಂಪರೆಯ ಹಿರಿಯ ಸಾಧಕರಾಗಿದ್ದ ಶ್ರೀಗಳು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ, ಚಿಕಿತ್ಸೆ ಫಲಿಸದ ಕಾರಣದಿಂದ ದೇಹತ್ಯಾಗ ಮಾಡಿದ್ದಾರೆ. ಸ್ವಸ್ಥಿ ಶ್ರೀ ಚಾರುಕೀರ್ತಿ ಬಿರುದಾಂಕಿತ ಜೈನ ಭಟ್ಟಾರಕ ಶ್ರೀಗಳಿಗೆ ಭಾರತ ಮಾತ್ರವಲ್ಲದೆ ವಿಶ್ವದ ನಾನಾ ದೇಶಗಳಲ್ಲಿ ಭಕ್ತರಿದ್ದಾರೆ. ಇಡೀ ಭಕ್ತ ಸಮೂಹಕ್ಕೆ ಶ್ರೀಗಳ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

Charukeerthi Bhattaraka Swamiji Body Will Be Cremated With State Honours Says Cm Basavaraj Bommai

ಮನುಕುಲದ ಅಂತರಂಗ ಶುದ್ಧಿ ಮತ್ತು ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡುತ್ತಿದ್ದ ಶ್ರೀಗಳು ಸ್ವತಃ ಬೆಂಗಳೂರು ಮತ್ತು ಮೈಸೂರು ವಿಶ್ವ ವಿದ್ಯಾಲಯದಲ್ಲಿ ಕ್ರಮವಾಗಿ ತತ್ವಶಾಸ್ತ್ರ ಮತ್ತು ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಪ್ರಾಕೃತ, ಸಂಸ್ಕೃತ ಮತ್ತು ಕನ್ನಡದಲ್ಲಿ ಅಪಾರ ಪಾಂಡಿತ್ಯ ಮತ್ತು ಪರಿಣತಿ ಹೊಂದಿದ್ದ ಇವರು ಪ್ರಾಕೃತ ವಿಶ್ವ ವಿದ್ಯಾಲಯವನ್ನೂ ಸ್ಥಾಪಿಸಿದ್ದರು. ಪಾಲಿಟೆಕ್ಷಿಕ್, ಎಂಜಿನಿಯರಿAಗ್, ನರ್ಸಿಂಗ್ ಕಾಲೇಜುಗಳನ್ನೂ ಸ್ಥಾಪಿಸಿ ಸಾವಿರಾರು ಮಕ್ಕಳಿಗೆ ಶಿಕ್ಷಣ ದೊರಕಿಸಿದ್ದಾರೆ.

ನಾನು ಹಲವು ಬಾರಿ ಶ್ರೀಗಳ ದರ್ಶನ ಮತ್ತು ಆಶೀರ್ವಾದ ಪಡೆದಿದ್ದೇನೆ. ಶ್ರೀಗಳು ಜೀವಮಾನದಲ್ಲಿ ಮೊಬೈಲ್ ಸ್ಪರ್ಷಿಸಿಲ್ಲ, ಆಧುನಿಕ ಸವಲತ್ತುಗಳನ್ನು ಆಶಿಸದೆ 12 ವರ್ಷಗಳ ಕಾಲ ವಾಹನ ಸಂಚಾರವನ್ನೇ ಮಾಡದೆ ಗ್ರಂಥ ರಚನೆ ಮಾಡಿದ್ದರು ಎನ್ನುವುದು ಬಹಳ ಉನ್ನತವಾದ ಮೌಲ್ಯ. ಜೈನ ಪರಂಪರೆ ಮತ್ತು ಅಧ್ಯಾತ್ಮದ ಮೌಲ್ಯಗಳನ್ನು ಹೇಳುವ ದವಳ ಮತ್ತು ಜಯದವಳ ಆಗಮ ಗ್ರಂಥಗಳನ್ನು ಶ್ರೀಗಳು ರಚನೆ ಮಾಡಿದ್ದಾರೆ ಎನ್ನುವುದನ್ನು ಕೇಳಿ ತಿಳಿದಿದ್ದೇನೆ.

1949ರಲ್ಲಿ ರತ್ನವರ್ಮರಾಗಿ ಕಾರ್ಕಳದ ವರಂಗ ಗ್ರಾಮದಲ್ಲಿ ಜನಿಸಿದ್ದ ಶ್ರೀಗಳು 1970ರಲ್ಲಿ ಶ್ರವಣಬೆಳಗೊಳದ ಪೀಠಾಧಿಪತಿಗಳಾಗಿ ಹೊಯ್ಸಳ ವಂಶದ ಚಾರುಕೀರ್ತಿ ಪಟ್ಟವನ್ನೂ ಪಡೆದರು. ಇವರು ತಮ್ಮ ಅವಧಿಯಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಶ್ರವಣಬೆಳಗೊಳದ ಮಹಾಮಸ್ತಾಭಿಷೇಕವನ್ನು 1981, 1993, 2006 ಮತ್ತು 2018 ರಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿಸಿದ್ದಾರೆ.

ಇವರ ಅಧ್ಯಾತ್ಮದ ಸಾಧನೆ ನಮ್ಮ ನೆಲದಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ. ಇವರ ಶಿಕ್ಷಣ ಕ್ಷೇತ್ರದ ಸಾಧನೆಗಳೂ ಹಲವು ತಲೆಮಾರುಗಳವರೆಗೂ ಬೆಳೆಯುತ್ತಲೇ ಇರುತ್ತದೆ. ಶ್ರೀಗಳ ನಿಧನ ಅತೀವ ನೋವು ತಂದಿದೆ. ಶ್ರೀಗಳ ಆತ್ಮಕ್ಕೆ ಶಾಂತಿ ಕೋರುತ್ತಾ, ಶ್ರದ್ದಾಂಜಲಿ ಸಲ್ಲಿಸುತ್ತೇನೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+