ಪಲಿಮಾರು, ರಾಘವೇಶ್ವರ ಶ್ರೀಗಳ ಚಾತುರ್ಮಾಸ ವೃತ ಆರಂಭ
ಉಡುಪಿ ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಗಳ ಮತ್ತು ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ಚಾತುರ್ಮಾಸ ವೃತ ಆಷಾಢ ಹುಣ್ಣಿಮೆಯ (ಗುರು ಪೂರ್ಣಿಮಾ) ದಿನವಾದ ಭಾನುವಾರ (ಜು 9) ಆರಂಭವಾಗಿದೆ.
ಬೆಂಗಳೂರು, ಜುಲೈ 9: 2018ರಲ್ಲಿ ಉಡುಪಿ ಪರ್ಯಾಯ ಸರ್ವಜ್ಞ ಪೀಠವನ್ನೇರಲಿರುವ ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಗಳ ಮತ್ತು ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ಚಾತುರ್ಮಾಸ ವೃತ ಆಷಾಢ ಹುಣ್ಣಿಮೆಯ (ಗುರು ಪೂರ್ಣಿಮಾ) ದಿನವಾದ ಭಾನುವಾರ (ಜು 9) ಆರಂಭವಾಗಿದೆ.
ಪಲಿಮಾರು ಮಠದ ಶ್ರೀಗಳ ಪುರಪ್ರವೇಶ ಭಾನುವಾರ ಸಂಜೆ ವಿಜೃಂಭಣೆಯಿಂದ ನಗರದ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ನಡೆದರೆ, ರಾಘವೇಶ್ವರ ಶ್ರೀಗಳ 'ಅಭಯ ಚಾತುರ್ಮಾಸ' ಕಾರ್ಯಕ್ರಮ ಗಿರಿನಗರದ ಶಾಖಾಮಠದಲ್ಲಿ ನಡೆದಿದೆ. ಪಲಿಮಾರು ಶ್ರೀಗಳು ಮಲ್ಲೇಶರಂನಲ್ಲಿರುವ ಶಾಖಾ ಮಠದಲ್ಲಿ ಚಾತುರ್ಮಾಸ ವೃತದಲ್ಲಿರುತ್ತಾರೆ.

ಮುಂದಿನ ವರ್ಷ ಎರಡನೇ ಬಾರಿ ಉಡುಪಿ ಕೃಷ್ಣಮಠದ ಪರ್ಯಾಯ ಪೀಠವನ್ನೇರಲಿರುವ ಪಲಿಮಾರು ವಿದ್ಯಾಧೀಶತೀರ್ಥ ಶ್ರೀಗಳ 38ನೇ ಚಾತುರ್ಮಾಸ ವೃತ ಇದಾಗಿದ್ದು, ವೃಥಾಚರಣೆಯ ಮುನ್ನ ಉತ್ತರಭಾರತ ಮತ್ತು ದಕ್ಷಿಣಭಾರತದ ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡಿ ನಗರಕ್ಕೆ ಆಗಮಿಸಿದ್ದಾರೆ.
ಅಭಯಾಕ್ಷರ ಆಂದೋಲನ ಗೋವನ್ನು ಕತ್ತರಿಸುವ ಕತ್ತಿಗೆ ಲೇಖನಿಯಿಂದ ಉತ್ತರ ನೀಡುವ, ರಕ್ತಕ್ಕೆ ಶಾಯಿಯಿಂದ ಉತ್ತರ ನೀಡುವ ಮಹದಭಿಯಾನ, ಇದಕ್ಕೆ ಅಭಯ ಚಾತುರ್ಮಾಸ್ಯ ಮೀಸಲು ಎಂದು ರಾಘವೇಶ್ವರ ಶ್ರೀಗಳು ಅಭಯ ಚಾತುರ್ಮಾಸ ಆರಂಭದ ದಿನ ಆಶೀರ್ವಚನ ನೀಡುತ್ತಾ ಘೋಷಿಸಿದ್ದಾರೆ.
ಪಲಿಮಾರು ಶ್ರೀಗಳ ಪುರಪ್ರವೇಶ ಕಾರ್ಯಕ್ರಮ ಮತ್ತು ಸ್ವಾಗತ ಸಮಾರಂಭದ ವೇಳೆ ಬಸವನಗುಡಿ ಕ್ಷೇತ್ರದ ಶಾಸಕ ರವಿ ಸುಬ್ರಮಣ್ಯ, ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಅಶ್ವಥ್ ನಾರಾಯಣ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ರಾಘವೇಶ್ವರ ಶ್ರೀಗಳ ಚಾತುರ್ಮಾಸ ಕಾರ್ಯಕ್ರಮದಲ್ಲಿ ಭಾರತೀಯ ಕಿಸಾನ್ ಸಂಘದ ರಾಜ್ಯ ಕಾರ್ಯದರ್ಶಿ ರಾಜೇಂದ್ರ, ಉದ್ಯಮಿ ಪವನ್ ಶೇಟ್, ಪಶುವೈದ್ಯ ಡಾ.ಬಸವರಾಜ ಬಿರಾದಾರ್, ಹವ್ಯಕ ಸಭಾ ಅಧ್ಯಕ್ಷ ಡಾ.ಗಿರಿಧರ್ ಕಜೆ, ಹವ್ಯಕ ಮಹಾಮಂಡಲ ಅಧ್ಯಕ್ಷೆ ಈಶ್ವರಿ ಬೇರ್ಕಡವು ಸೇರಿದಂತೆ ಹಲವರು ಭಾಗವಹಿಸಿದ್ದರು.

ಋಷಿ ಪರಂಪರೆಯಲ್ಲಿ ಚಾತುರ್ಮಾಸ ಕಾಲವು ಪುಣ್ಯ ಸಂಪಾದನೆಯಲ್ಲಿ ಮಹತ್ವಪೂರ್ಣವಾಗಿದ್ದು, ವೃತಾದಿಗಳ ಅನುಷ್ಠಾನಕ್ಕೆ ಪುಣ್ಯಕಾಲ. ಶ್ರೀಕೃಷ್ಣ, ಮುಖ್ಯಪ್ರಾಣ ಮತ್ತು ಗುರುಗಳ ಅನುಗ್ರಹ ಭಕ್ತ ಸಮುದಾಯಕ್ಕೆ ಇರಲಿ ಎಂದು ಪಲಿಮಾರು ಶ್ರೀಗಳು ಆಶೀರ್ವಚನ ನೀಡುತ್ತಾ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications