YSV Datta: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ವೈಎಸ್ವಿ ದತ್ತ ವಿರುದ್ಧ ಬಂಧನದ ವಾರೆಂಟ್
ವೈಎಸ್ವಿ ದತ್ತ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿ ಮಾರ್ಚ್ 27ಕ್ಕೆ ಕೋರ್ಟ್ಗೆ ಹಾಜರುಪಡಿಸುವಂತೆ ಬೆಂಗಳೂರು ಉತ್ತರ ಡಿಸಿಪಿಗೆ ಆದೇಶ ನೀಡಿದೆ.
ಬೆಂಗಳೂರು, ಫೆಬ್ರವರಿ. 16: ರಾಜ್ಯದಲ್ಲಿ ಚೆಕ್ ಬೌನ್ಸ್ ಪ್ರಕರಣ ಸದ್ದು ಮಾಡುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವೈಎಸ್ವಿ ದತ್ತ ವಿರುದ್ಧ ಬಂಧನದ ವಾರೆಂಟ್ ಜಾರಿಯಾಗಿದೆ.
ಕಾಂಗ್ರೆಸ್ ನಾಯಕರ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದೆ. ಚೆಕ್ ಬೌನ್ಸ್ ಪ್ರಕರಣದ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಆದೇಶ ಹೊರಡಿಸಲಾಗಿದೆ.
ಮಾಜಿ ಶಾಸಕ ವೈಎಸ್ವಿ ದತ್ತ ಅವರ ವಿರುದ್ಧ ಸಿ.ಎಸ್ ಸೋಮೇಗೌಡ, ಎನ್ ನಿತ್ಯಾನಂದ ಎಂಬವರು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು, ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ದೂರುದಾರ ಎನ್ ನಿತ್ಯಾನಂದ ಹೂಡಿರುವ ಪ್ರಕರಣದಲ್ಲಿ ಸತತ ನಾಲ್ಕನೇ ಬಾರಿಗೆ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದ್ದು, ಐದು ಬಾರಿ ಜಾಮೀನುರಹಿತ ವಾರೆಂಟ್ ಹೊರಡಿಸಿದೆ. ಸಿ.ಎಸ್. ಸೋಮೇಗೌಡ ಅವರ ಪ್ರಕರಣದಲ್ಲಿ ನ್ಯಾಯಾಲಯವು ಸತತ 10ನೇ ಬಾರಿಗೆ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಸದ್ಯ ಜಾಮೀನು ರಹಿತ ವಾರೆಂಟ್ ಹೊರಡಿಸಿ ಮಾರ್ಚ್ 27ಕ್ಕೆ ಕೋರ್ಟ್ಗೆ ಹಾಜರುಪಡಿಸುವಂತೆ ಬೆಂಗಳೂರು ಉತ್ತರ ಡಿಸಿಪಿಗೆ ಆದೇಶ ನೀಡಲಾಗಿದೆ.
ಪ್ರಕರಣದಲ್ಲಿ ಆರೋಪಿಯಾಗಿರುವ ವೈಎಸ್ವಿ ದತ್ತ ವಿರುದ್ಧ 2022ರ ನವೆಂಬರ್ನಲ್ಲಿ ಪ್ರಕಾಶ್ ಜಿ ಎಸ್ ಎಂಬವರು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದಾರೆ. ಮೂರು ಪ್ರತ್ಯೇಕ ಪ್ರಕರಣಗಳ ವಿಚಾರಣೆಯನ್ನು ಮಾರ್ಚ್ 27ಕ್ಕೆ ನಿಗದಿಪಡಿಸಲಾಗಿದೆ.
ಕಳೆದೆರಡು ದಿನಗಳ ಹಿಂದೆ ಲಕ್ಷಾಂತರ ರೂಪಾಯಿ ಮೊತ್ತದ ಕಾಮಗಾರಿಯನ್ನು ತನ್ನ ಮಕ್ಕಳಿಗೆ ನೀಡದ ಪ್ರಕರಣದಲ್ಲಿ ಹಾವೇರಿಯ ಬಿಜೆಪಿ ಶಾಸಕ ನೆಹರು ಓಲೆಕಾರ್ ಹಾಗೂ ಅವರ ಇಬ್ಬರು ಮಕ್ಕಳಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವ ತೀರ್ಪು ನೀಡಿ ಆದೇಶ ಹೊರಡಿಸಿತ್ತು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications