ರಾಜನ್ಗೆ ಮಂಡ್ಯ ವಿಳಾಸದ ಪಾಸ್ಪೋರ್ಟ್ ಸಿಕ್ಕ ಬಗ್ಗೆ ತನಿಖೆ
ಬೆಂಗಳೂರು, ನವೆಂಬರ್ 18 : ಭೂಗತ ಪಾತಕಿ ಛೋಟಾ ರಾಜನ್ ವಿಚಾರಣೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಕರ್ನಾಟಕಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ರಾಜನ್ಗೆ ಕರ್ನಾಟಕದ ವಿಳಾಸದಲ್ಲಿ ಹೇಗೆ ಪಾಸ್ಪೋರ್ಟ್ ನೀಡಲಾಯಿತು? ಎಂದು ಅಧಿಕಾರಿಗಳು ವಿವರ ಸಂಗ್ರಹಿಸಲಿದ್ದಾರೆ.
ಕರ್ನಾಟಕಕ್ಕೆ ಆಗಮಿಸುವ ಸಿಬಿಐ ಅಧಿಕಾರಿಗಳು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪ್ರಾದೇಶಿಕ ಪಾಸ್ಪೋರ್ಟ್ ಕೇಂದ್ರದ ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಣೆ ಮಾಡಲಿದ್ದಾರೆ. 2003ರಲ್ಲಿ ಮೋಹನ್ ಕುಮಾರ್ ಎಂಬ ಹೆಸರಿನಲ್ಲಿ ರಾಜನ್ಗೆ ಪಾಸ್ಪೋರ್ಟ್ ನೀಡಲಾಗಿದ್ದು, ಅದರಲ್ಲಿ ಮಂಡ್ಯ ವಿಳಾಸವಿದೆ. [ಭಾರತಕ್ಕೆ ಬಂದ ಛೋಟಾ ರಾಜನ್]

ಛೋಟಾ ರಾಜನ್ನನ್ನು ಭಾರತಕ್ಕೆ ಕರೆತಂದ ಬಳಿಕ ಆತನ ವಿರುದ್ಧ ಪಾಸ್ಪೋರ್ಟ್ ಕಾಯ್ದೆ 1967ರ ಪ್ರಕಾರ ಸಿಬಿಐ ಅಧಿಕಾರಿಗಳು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪಾಸ್ಪೋರ್ಟ್ ನೀಡಿರುವ ಅಧಿಕಾರಿಗಳ ತಪ್ಪು ಸಾಬೀತಾದರೆ ಅವರ ವಿರುದ್ಧವೂ ಪ್ರಕರಣ ದಾಖಲಿಸಲಾಗುತ್ತದೆ. [ಛೋಟಾ ರಾಜನ್ ಬಂಧನ]
ಮಂಡ್ಯದ ವಿಳಾಸ : ರಾಜೇಂದ್ರ ಸದಾಶಿವ್ ನಿಕ್ಲಾಜೆ ಅಲಿಯಾಸ್ ಛೋಟಾ ರಾಜನ್ ಹೊಂದಿರುವ ಪಾಸ್ಪೋರ್ಟ್ ನಂಬರ್ G9273860. ಮೋಹನ್ ಕುಮಾರ್ ಎಂಬ ಹೆಸರಿನಲ್ಲಿ ಇದನ್ನು ಆತ ಹೊಂದಿದ್ದು, ಇದರಲ್ಲಿ ಮಂಡ್ಯ ಜಿಲ್ಲೆಯ ವಿಳಾಸವಿದೆ. [ಸಂದರ್ಶನ : ಛೋಟಾ ರಾಜನ್ ಬಂಧನ ಕೇವಲ ಆಕಸ್ಮಿಕ]
ಮೋಹನ್ ಕುಮಾರ್, 107/ಬಿ, ಓಲ್ಡ್ ಎಂ.ಸಿ.ರಸ್ತೆ, ಆಜಾದ್ ನಗರ, ಮಂಡ್ಯ, ಕರ್ನಾಟಕ ವಿಳಾಸ ಪಾಸ್ಪೋರ್ಟ್ನಲ್ಲಿದೆ. ಈ ಪಾಸ್ಪೋರ್ಟ್ ಹೇಗೆ ಪಡೆಯಲಾಯಿತು? ಎಂಬ ಬಗ್ಗೆ ರಾಜನ್ ಹೆಚ್ಚಿನ ಮಾಹಿತಿ ನೀಡಿಲ್ಲ.
ಮಂಡ್ಯಕ್ಕೆ ಆಗಮಿಸುವ ಅಧಿಕಾರಿಗಳು ಪಾಸ್ಪೋರ್ಟ್ ನೀಡುವಾಗ ವಿಳಾಸ ಪರಿಶೀಲನೆ ನಡೆಸಲಾಯಿತೇ?. ಪಾಸ್ಪೋರ್ಟ್ ಸಿದ್ಧಪಡಿಸಿದ ಅಧಿಕಾರಿಗಳು ರಾಜನ್ ಜೊತೆ ಸಂಪರ್ಕ ಹೊಂದಿದ್ದರೆ ಎಂದು ತನಿಖೆ ನಡೆಸಲಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು?











Click it and Unblock the Notifications