ಭಕ್ತರಂತೆ ಬಂದ್ರು, ಅರ್ಚಕರನ್ನು ಕಟ್ಟಿಹಾಕಿ ವಿಗ್ರಹ ದೋಚಿದ್ರು!
ಚಿಕ್ಕಬಳ್ಳಾಪುರ, ಮಾ.12 : ಭಕ್ತರಂತೆ ಬಂದಿದ್ದ ಮೂವರು ಪಾಪಾಗ್ನಿ ಮಠದ ಕಾಶಿ ವಿಶ್ವನಾಥ ದೇವಾಲಯದಲ್ಲಿದ್ದ ವಿಗ್ರಹಗಳನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಸುಮಾರು 300 ಕೆಜಿ ಪಂಚಲೋಹದ ವಿಗ್ರಹಗಳನ್ನು ಕದ್ದು ಪರಾರಿಯಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿನ ಕಾಶಿ ವಿಶ್ವನಾಥ ದೇವಾಲಯಕ್ಕೆ ಬುಧವಾರ ರಾತ್ರಿ ಕಾರಿನಲ್ಲಿ ಬಂದ ಮೂವರು ಅರ್ಚಕ ಗಂಗಾಧರಾಚಾರಿ ಮತ್ತು ಸಹಾಯಕ ಅರ್ಚಕ ರಾಜೇಶ್ ಅವರನ್ನು ಭೇಟಿ ಮಾಡಿ ತಾವು ಇಲ್ಲಿನ ಭಕ್ತರು ಗುರುವಾರ ಕುಟುಂಬದೊಂದಿಗೆ ವಿಶೇಷ ಪೂಜೆ ಮಾಡಿಸುತ್ತಿದ್ದೇವೆ ಎಂದು ದೇವಾಲಯದಲ್ಲಿ ವಾಸ್ತವ್ಯ ಹೂಡಿದ್ದರು.

ರಾತ್ರಿ 12.30ರ ಸುಮಾರಿಗೆ ಅರ್ಚಕರನ್ನು ಎಬ್ಬಿಸಿದ ಅವರು ಅವರನ್ನು ಕಟ್ಟಿ ಹಾಕಿ ದೇವಾಲಯದಲ್ಲಿದ್ದ 11 ಪಂಚಲೋಹದ ವಿಗ್ರಹಗಳನ್ನು ಕದ್ದು ಪರಾರಿಯಾಗಿದ್ದಾರೆ. ಅರ್ಚಕರ ಕೂಗಾಟ ಕೇಳಿ ಸ್ಥಳೀಯರು ಬಂದು ನೋಡುವಾಗ ಕಳ್ಳರು ಕಾರಿನಲ್ಲಿ ಪರಾರಿಯಾಗಿದ್ದಾರೆ. [ಕುಕ್ಕೆ ಸುಬ್ರಮಣ್ಯದ ಅಭಿವೃದ್ಧಿಗೆ ಪ್ರಾಧಿಕಾರ ರಚನೆ?]
ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಮತ್ತು ಎಸ್ಟಿ ದಿವ್ಯ ಗೋಪಿನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 11 ವಿಗ್ರಹಗಳು ಸುಮಾರು 300 ಕೆಜಿ ತೂಕವಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. [ತುಮಕೂರು : ಗೊರವನಹಳ್ಳಿ ದೇವಾಲಯ ಜಿಲ್ಲಾಡಳಿತದ ವಶಕ್ಕೆ]
ಅರ್ಚಕ ಗಂಗಾಧರಾಚಾರಿ ಅವರು ನೀಡಿರುವ ದೂರಿನ ಅನ್ವಯ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಆರೋಪಿಗಳ ಭಾವಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದು, ಆರೋಪಿಗಳ ಪತ್ತೆಗೆ ಕಾರ್ಯಚರಣೆ ಆರಂಭಿಸಿದ್ದಾರೆ.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications