ಡಿವೈನ್ ಟೈಡ್ಸ್: ಕನ್ನಡಿಗ ರಿಕಿ ಕೇಜ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನ
ಬೆಂಗಳೂರು, ಮೇ 2: ತಮ್ಮ ಸುಮಧುರ ಸಂಗೀತದ ಮೂಲಕ ಪ್ರಕೃತಿಯಿಂದ ದೈವೀಕತೆಯ ಅದ್ಭುತ ಕಲ್ಪನೆಯನ್ನು ಡಿವೈನ್ ಟೈಡ್ಸ್ ಆಲ್ಬಂನಲ್ಲಿ ರಿಕಿ ಕೇಜ್ ಅಭಿವ್ಯಕ್ತಗೊಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಡಿವೈನ್ ಟೈಡ್ಸ್ ಆಲ್ಬಂಗಾಗಿ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ ಪಡೆದಿರುವ ಕನ್ನಡಿಗ ರಿಕಿ ಕೇಜ್ ಅವರನ್ನು ಸನ್ಮಾನಿಸಿ ಮಾತನಾಡಿದರು.

ಡಿವೈನ್ ಟೈಡ್ಸ್ನಲ್ಲಿ ಪ್ರಕೃತಿಯ ಬಗ್ಗೆ ಬಿಂಬಿಸಿರುವುದು ಬಹಳ ಸತ್ಯ. ದೈವೀಕತೆ ಎಂದರೆ ಪ್ರಕೃತಿಯೊಂದಿಗೆ ಸಂಪರ್ಕ ಹೊಂದುವುದು. ಪ್ರಕೃತಿಯ ಸಂಪರ್ಕವಿಲ್ಲದಿದ್ದರೆ ದೈವೀಕತೆ ದೊರಕುವುದಿಲ್ಲ ಎಂದರು ಮುಖ್ಯ ಮಂತ್ರಿಗಳು ಅಭಿಪ್ರಾಯ ಪಟ್ಟರು.
ಅತ್ಯಂತ ಕಡು ಬಡವ, ಶಿಕ್ಷಣ ಇಲ್ಲದವನೂ ದೇವರನ್ನು ಸೃಷ್ಟಿಸಬಹುದು ಎನ್ನುವುದು ಅದ್ಭುತವಾದ ಕಲ್ಪನೆ ಎಂದರು.

Recommended Video
ಅಪ್ಪಟ ಕನ್ನಡಿಗರಾದ ರಿಕಿ ಕೇಜ್ ಅವರು ವಿಶ್ವಮಟ್ಟದ ಸಾಧನೆ ಮಾಡಿದ್ದು, ಕನ್ನಡಿಗರ ಹೆಮ್ಮೆಯಾಗಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಅವರು ತಮ್ಮ ಛಾಪನ್ನು ಮೂಡಿಸಿರುವುದು ದೊಡ್ಡ ಸಂಗತಿ . ಗ್ರ್ಯಾಮಿ ಅವಾರ್ಡ್ ಕನ್ನಡದಲ್ಲಿ ಯಾವುದೇ ಸಂಗೀತ ಸಂಸ್ಥೆಗೂ ಈವರೆಗೂ ದೊರೆತಿರಲಿಲ್ಲ. ಈ ಪ್ರಶಸ್ತಿಗೆ ನಾಮನಿರ್ದೇಶಗೊಳ್ಳುವುದೇ ದೊಡ್ಡ ವಿಷಯ. ಲಹರಿ ಸಂಸ್ಥೆ ಇದರ ಭಾಗವಾಗಿರುವುದು ಶ್ಲಾಘನೀಯ. ಪ್ರಶಸ್ತಿ ಪಡೆದು ನಮ್ಮ ನಿರೀಕ್ಷೆಯನ್ನು ಎತ್ತರಕ್ಕೆ ಕೊಂಡೊಯ್ದಿದ್ದೀರಿ ಎಂದರು. ಇಡೀ ವಿಶ್ವದಲ್ಲಿ ಸಿಗದ ವಿಚಾರ, ತತ್ವಗಳು, ಭಾರತದಲ್ಲಿ ಇವೆ. ಬದಲಾವಣೆ ಒಳಗಿನಿಂದ ಬರಬೇಕೆನ್ನುವುದು ಅಪ್ಪಟ ಸತ್ಯ. ವೈಯಕ್ತಿಕವಾಗಿ ಹಾಗೂ ಸರ್ಕಾರದಲ್ಲಿ ಕೆಲಸ ಮಾಡಲು ನನಗೆ ಸ್ಫೂರ್ತಿಯಾಗಿದ್ದೀರಿ. ನೀವು ಹೇಳಿರುವ ಮಾತು ಯಶಸ್ವಿಯಾಗಿದೆ ಎನ್ನುವುದನ್ನು ಮುಂದಿನ ದಿನಗಳಲ್ಲಿ ನಾವು ಮಾಡಿ ತೋರಿಸುತ್ತೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications