ಖಾದಿ ಮತ್ತು ಗ್ರಾಮೋದ್ಯೋಗ ಉತ್ತೇಜನಕ್ಕೆ ಸರ್ಕಾರದ ಆದ್ಯತೆ: ಬಸವರಾಜ ಬೊಮ್ಮಾಯಿ
ಬೆಂಗಳೂರು, ಅ. 02: ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಬೆಂಗಳೂರಿನ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಗಾಂಧಿ ಸೇವಾ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ಮಾತನಾಡಿದರು.
"ಗಾಂಧೀಜಿ ಒಬ್ಬ ವ್ಯಕ್ತಿಯಲ್ಲ. ಅವರು ಸ್ವಾತಂತ್ರ್ಯ ಹೋರಾಟಗಾರರಷ್ಟೇ ಅಲ್ಲ, ನೈತಿಕ ಭಾರತವನ್ನು ಕಟ್ಟುವ ಶಕ್ತಿ' ಎಂದು ಸಿಎಂ ಬೊಮ್ಮಾಯಿ ವಿವರಿಸಿದರು.

ಕರ್ತವ್ಯ ಪ್ರಜ್ಞೆ ಕೆಲಸ ಗಾಂಧೀಜಿಗೆ ಕೊಡುವ ಗೌರವ!
ನಾವು ಇಂದು ದೇಶಕ್ಕಾಗಿ ದುಡಿಯುವ ಮೂಲಕ ವಿಶ್ವದಲ್ಲಿ ಅಗ್ರ ಸ್ಥಾನ ಪಡೆಯಲು ಶ್ರಮಿಸಬೇಕು. ಇಂದಿನ ಸಮಾಜದಲ್ಲಿ ನಾವು ನಾಗರಿಕ ಜವಾಬ್ದಾರಿಯ ಕೊರತೆಯನ್ನು ಕಾಣುತ್ತೇವೆ. ಕರ್ತವ್ಯ ಪ್ರಜ್ಞೆ ಮೂಡಿಸಿಕೊಂಡು ಕೆಲಸ ಮಾಡಿದರೆ ಯಾವ ಸವಾಲೂ ದೊಡ್ಡದಲ್ಲ. ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡಿದರೆ, ಅದುವೇ ಗಾಂಧೀಜಿಯವರಿಗೆ ನಾವು ನೀಡುವ ಗೌರವ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ವೇಳೆ ಹೇಳಿದ್ದಾರೆ.

ಕಾಯಕ ಪೂಜೆಗಿಂತಲೂ ಮಿಗಿಲಾದದ್ದು
ಜನರಿಂದ ಉತ್ಪಾದನಾ ಚಟುವಟಿಕೆಗಳು ನಡೆಯಬೇಕು ಎಂದು ಗಾಂಧೀಜಿ ಬಯಸಿದ್ದರು. ದುಡಿಮೆಯಲ್ಲಿ ಆರ್ಥಿಕತೆ ಇದೆ. ದುಡ್ಡಿನಲ್ಲಿ ಅಲ್ಲ ಎಂದ ಮುಖ್ಯಮಂತ್ರಿಗಳು, ಅದಕ್ಕಾಗಿಯೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ನುಡಿದರು. ಕಾಯಕ ಪೂಜೆಗಿಂತಲೂ ಮಿಗಿಲಾದದ್ದು. ಸ್ವರ್ಗ ಸಮಾನ ಎಂದು ಮುಖ್ಯಮಂತ್ರಿಗಳು ನುಡಿದರು.
ಪರಿವರ್ತನೆ ಗಾಂಧೀಜಿಯವರ ದೊಡ್ಡ ಗುಣ. ನಾವು ಇಂದು ಸುಳ್ಳನ್ನು ಉಳಿತಾಯ ಮಾಡಿ, ಸತ್ಯವನ್ನು ಖರ್ಚು ಮಾಡಬೇಕಾಗಿದೆ ಎಂದು ಸಿಎಂ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಶೀಘ್ರ ಗಾಂಧಿ ಭವನಗಳ ಲೋಕಾರ್ಪಣೆ!
ಗಾಂಧೀಜಿ ಹೋರಾಟಕ್ಕೆ ತಾತ್ವಿಕ, ಸೈದ್ಧಾಂತಿಕ ಹಾಗೂ ವೈಜ್ಞಾನಿಕ ಹಿನ್ನಲೆಯಿದೆ. ಪ್ರತಿಯೊಬ್ಬರೂ ಬದ್ಧತೆಯೊಂದಿಗೆ ಕೆಲಸ ಮಾಡಿದಾಗ ಸಾರ್ಥಕತೆ ಮೂಡುತ್ತದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣ ಪ್ರಗತಿಯಲ್ಲಿದೆ. ದಾವಣಗೆರೆಯ ಗಾಂಧೀ ಭವನ ಇತ್ತೀಚೆಗೆ ಉದ್ಘಾಟನೆಯಾಗಿದ್ದು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಉದ್ಘಾಟನೆಗೆ ಸಜ್ಜುಗೊಂಡಿವೆ. ಉಳಿದ ಜಿಲ್ಲೆಗಳ ಗಾಂಧಿ ಭವನಗಳೂ ಶೀಘ್ರವೇ ಸಿದ್ಧವಾಗಲಿವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಗಾಂಧಿ ಸೇವಾ ಪುರಸ್ಕಾರ ಪ್ರಶಸ್ತಿ ಪ್ರದಾನ
ತುಮಕೂರಿನ ಸಿದ್ದಗಂಗಾ ಮಠದ ಪರವಾಗಿ ಡಾ. ಶಿವಪ್ಪ ಹಾಗೂ ಮೀರಾತಾಯಿ ಕೊಪ್ಪಿಕರ್ ಪರವಾಗಿ ಮುಧೋಳ ಶಾಸಕರೂ ಆಗಿರುವ ಸಚಿವ ಗೋವಿಂದ ಕಾರಜೋಳ ಅವರು ಪ್ರಶಸ್ತಿ ಸ್ವೀಕರಿಸಿದರು.
ಮಾಜಿ ಸಚಿವ ಹೆಚ್.ಕೆ. ಪಾಟೀಲ, ನ್ಯಾ. ಅಶೋಕ ಬಿ. ಹಿಂಚಗೇರಿ ಮಾತನಾಡಿದರು. ಸಚಿವರಾದ ಗೋವಿಂದ ಎಂ. ಕಾರಜೋಳ, ಹಾಲಪ್ಪ ಆಚಾರ್, ಸಂಸದರಾದ ಶಿವಕುಮಾರ್ ಉದಾಸಿ, ಡಾ. ಎಲ್. ಹನುಮಂತಯ್ಯ ಮತ್ತು ಇತರರು ಉಪಸ್ಥಿತರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications