ಕೆಎಂಎಫ್ ಸಂಸ್ಥೆ ಇಡೀ ದೇಶದಲ್ಲಿ ನಂಬರ್ 1 ಸಂಸ್ಥೆಯಾಗಬೇಕು: ಸಿಎಂ ಬೊಮ್ಮಾಯಿ

ಬೆಂಗಳೂರು, ಸೆ. 29: "ಹಾಲು ಮತ್ತು ಸಕ್ಕರೆಯ ಉಪ ಉತ್ಪನ್ನಗಳು ಬಹಳಷ್ಟಿವೆ. ಕೆಎಂಎಫ್‌ನ ಉತ್ಪನ್ನಗಳು ಕೂಡ ಉತ್ತಮವಾಗಿವೆ. ಹೀಗಾಗಿ ತನ್ನ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಣೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸುವಂತೆ" ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಬುಧವಾರ ಕರ್ನಾಟಕ ಹಾಲು ಮಹಾಮಂಡಲದ ನೂತನ ಯೋಜನೆಗಳಿಗೆ ಚಾಲನೆ ನೀಡಿ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.

''ಹಾಲಿನ‌ ಉಪ ಉತ್ಪನ್ನಗಳ ಮಾರುಕಟ್ಟೆಯನ್ನು ಪರಿಣಾಮಕಾರಿಯಾಗಿ ವಿಸ್ತರಣೆ ಮಾಡಬೇಕು. ಈ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ದೊರೆತರೆ ಹೆಚ್ಚು ಹಾಲು ಉತ್ಪಾದನೆ ಆಗುತ್ತದೆ. ಮುಂದಿನ ಮೇ - ಜೂನ್ ಮಾಹೆಯೊಳಗೆ 100 ಲಕ್ಷ ಲೀ. ಹಾಲು ಉತ್ಪಾದಿಸುವ ಗುರಿಯನ್ನು ಹಾಕಿಕೊಳ್ಳಿ, ಅದಕ್ಕೆ ಬೇಕಾದ ಮಾರುಕಟ್ಟೆಯೂ ನಿಮಗೆ ದೊರೆಯುತ್ತದೆ'' ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.

ಆರ್ಥಿಕವಾಗಿ ನಮ್ಮ ರಾಜ್ಯ ಮುಂದೆ ಬರಬೇಕಾದರೆ ದುಡಿಮೆಯಿಂದ ಮಾತ್ರ ಸಾಧ್ಯ ಎಂದರಲ್ಲದೆ ಪಿರಮಿಡ್‌ನ ತಳಹಂತದಲ್ಲಿರುವ ದುಡಿಯುವ ವರ್ಗದವರು ಅಂದರೆ ರೈತರು, ಕೂಲಿಕಾರ್ಮಿಕರು. ಅವರೇ ನಮ್ಮ ದೇಶದ ಆರ್ಥಿಕ ಪ್ರಗತಿಗೆ ಕಾರಣೀಭೂತರು ಎಂದು ಬೊಮ್ಮಾಯಿ ವಿವರಿಸಿದರು.

ಸರ್ವ ಜನರಿಗೂ ಸಮಪಾಲು

ಸರ್ವ ಜನರಿಗೂ ಸಮಪಾಲು

ಸಹಕಾರಿ ರಂಗ ಬಹಳ ಶಕ್ತಿಯುತವಾದ ಕ್ಷೇತ್ರ. ಆದರೆ, ಈಗಲೂ ಪೂರ್ಣಪ್ರಮಾಣದಲ್ಲಿ ಉತ್ತಮ ರೀತಿ ಸದುಪಯೋಗ ಆಗಬೇಕಾಗಿದೆ. ಮಹಾರಾಷ್ಟ್ರ ಮತ್ತು ಗುಜರಾತಿನಂತೆ ನಮ್ಮ ಸಹಕಾರಿ ರಂಗವೂ ಶಕ್ತಿಶಾಲಿ ಆಗಬೇಕು ಎಂದು ಸಿಎಂ ಬೊಮ್ಮಾಯಿ ಇದೇ ವೇಳೆ ಹೇಳಿದ್ದಾರೆ.

'ಸರ್ವ ಜನರಿಗೂ ಸಮಪಾಲು' ಎನ್ನುವ ಸಹಕಾರಿ ರಂಗದ ಮೂಲ ಉದ್ದೇಶಕ್ಕೆ ಯಾವ ಕಾರಣದಿಂದಲೂ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಂಡಾಗ ಮಾತ್ರ ಸಹಕಾರಿ ರಂಗಕ್ಕೆ ಅರ್ಥ ಬರುತ್ತದೆ ಎಂದಿದ್ದಾರೆ.

ಹಾಲು ಉತ್ಪಾದಕರ ಸಂಘಗಳಲ್ಲಿ ಸಹಕಾರಿ ರಂಗದ ಶಕ್ತಿ

ಹಾಲು ಉತ್ಪಾದಕರ ಸಂಘಗಳಲ್ಲಿ ಸಹಕಾರಿ ರಂಗದ ಶಕ್ತಿ

ಕೃಷಿ ಬೆಳೆದಿದೆ, ಹಸಿರು ಕ್ರಾಂತಿಯಾಗಿದೆ. 130 ಕೋಟಿ ಜನಸಂಖ್ಯೆಗೆ ಆಹಾರ ಒದಗಿಸಿಕೊಳ್ಳುವ ಸ್ವಾವಲಂಬಿ ದೇಶ ಭಾರತ. ಆದರೆ ಹಸಿರು ಕ್ರಾಂತಿಗೆ ಕಾರಣನಾದ ಅನ್ನದಾತ ಬೆಳೆದಿಲ್ಲ. ಎಲ್ಲಿದ್ದಾನೋ ಅಲ್ಲೇ ಇದ್ದಾನೆ. ಕೃಷಿಕನ ಮೇಲೆ ನಮ್ಮ ಗಮನ ಇರಬೇಕಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಸಹಕಾರಿ ರಂಗದ ಶಕ್ತಿಯನ್ನು ಕರ್ನಾಟಕ ಹಾಲು ಉತ್ಪಾದಕರ ಸಂಘಗಳಲ್ಲಿ ಕಾಣಬೇಕು. ನಮ್ಮ ಪ್ರಧಾನಿಗಳು ರೈತರ ಆದಾಯ ದ್ವಿಗುಣಗೊಳಿಸಲು ಉದ್ದೇಶಿಸಿದ್ದಾರೆ. ಆದಾಯ ಹೆಚ್ಚಿಸುವಲ್ಲಿ ಹೈನುಗಾರಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಸಮಗ್ರ ಕೃಷಿ, ಕೃಷಿಕನ ಭೂಮಿ ಕೇವಲ ಬೆಳೆ ಬೆಳೆಯಲು ಮಾತ್ರವಲ್ಲ ಇತರ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯವಾಗುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೆಲಸ ಮಾಡುತ್ತಿವೆ ಎಂದರು.

ಗೋ ರಕ್ಷಣೆ ಮಾಡಬೇಕು

ಗೋ ರಕ್ಷಣೆ ಮಾಡಬೇಕು

ಹಾಲು ನಿರಂತರವಾಗಿ ಅವಶ್ಯಕತೆ ಇರುವಂತಹ ವಸ್ತು. ಹಾಲು ಕೊಡುವ ಗೋವಿನ ರಕ್ಷಣೆ ಕೂಡ ಅತ್ಯವಶ್ಯಕ. ಗೋವುಗಳು ಹಾಲು ಕೊಡುವುದನ್ನು ನಿಲ್ಲಿಸಿದಾಗಲೂ ಅದರ ರಕ್ಷಣೆ ನಮ್ಮ ನೈತಿಕ ಜವಾಬ್ದಾರಿ. ಗೋವನ್ನು ಕಸಾಯಿಖಾನೆಗೆ ನೀಡಲು ನಿಷೇದ ಹೇರಿ ಕಾನೂನು ರಚಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ನಿರ್ಮಿಸಲು ಬೇಕಾದ ಅನುದಾನ ನೀಡಲಾಗುವುದು. ಸರ್ಕಾರ ಗೋಶಾಲೆ ನಿರ್ಮಾಣ ಮಾಡುತ್ತದೆ. ಅದರ ನಿರ್ವಹಣೆ, ರಕ್ಷಣೆಯ ಜವಾಬ್ದಾರಿ ಕೆಎಂಎಫ್ ತೆಗೆದುಕೊಳ್ಳಬೇಕು. ಲಾಭವೂ ಇಲ್ಲದ ನಷ್ಟವೂ ಇಲ್ಲದ ಆಧಾರದ ಮೇಲೆ ಗೋ ರಕ್ಷಣೆ ಮಾಡಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಹಾಲು ಉತ್ಪಾದನೆಯಲ್ಲಿ ಅಭಿವೃದ್ಧಿ ಅಗತ್ಯ!

ಹಾಲು ಉತ್ಪಾದನೆಯಲ್ಲಿ ಅಭಿವೃದ್ಧಿ ಅಗತ್ಯ!

ಕೆಎಂಎಫ್ ಸಂಸ್ಥೆ ಇಡೀ ದೇಶದಲ್ಲಿ ನಂಬರ್ 1 ಸಂಸ್ಥೆಯಾಗಬೇಕು. ಹೊಸ ತಂತ್ರಜ್ಞಾನ ಬಳಸುವ ಮೂಲಕ ಹಾಲು ಉತ್ಪಾದನೆ ಹೆಚ್ಚಿಸಿ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಬರಬೇಕು. ಉತ್ತರ ಕರ್ನಾಟಕದಲ್ಲಿಯೂ ಹಾಲು ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕು. ದಕ್ಷಿಣ ಕರ್ನಾಟಕದ ಮಾದರಿಯಲ್ಲಿಯೇ ಹಾಲು ಉತ್ಪಾದನೆಯಲ್ಲಿ ಅಭಿವೃದ್ಧಿ ಹೊಂದಬೇಕು. ಬೆಳಗಾವಿ, ಬಿಜಾಪುರ, ಬಾಗಲಕೋಟೆ ಸೇರಿದಂತೆ ಉತ್ತರಕರ್ನಾಟಕದಲ್ಲಿ ಹೆಚ್ಚಿನ ನೀರಾವರಿ ಹೆಚ್ಚು ಹಸಿರನ್ನು ಹೊಂದಿರುವ ಪ್ರದೇಶ. ಹಾಲು ಉತ್ಪಾದಕರನ್ನೂ ಹಾಗೂ ಸಂಸ್ಥೆಯನ್ನೂ ರಕ್ಷಣೆ ಮಾಡಬೇಕು ಎಂದರು. ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವರಾದ ಎಸ್.ಟಿ. ಸೋಮಶೇಖರ್, ಡಾ. ಸಿ.ಎನ್. ಅಶ್ವಥ್ ನಾರಾಯಣ, ಪ್ರಭು ಚೌಹಾಣ್, ಸಂಸದ ಉಮೇಶ್ ಜಾಧವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+