Government Employees: ಮತ್ತೆ ಮತ್ತೆ ಸರ್ಕಾರ ನೌಕರರಿಗೆ ನಿರಾಸೆ; ಎರಡು ವರ್ಷವಾದ್ರೂ ಸಿಕ್ಕಿದ್ದು ಮಾತ್ರ ಭರವಸೆಯಷ್ಟೇ?
ಬೆಂಗಳೂರು, ಜುಲೈ 20: ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಕುರಿತು ನಿರಂತರವಾಗಿ ಹೋರಾಟಗಳು ನಡೆಯುತ್ತಿರುತ್ತವೆ. ರಾಜ್ಯದಲ್ಲಿ ಎನ್ ಪಿಎಸ್ ರದ್ದುಗೊಳಿಸಿ ಓಪಿಎಸ್ ಜಾರಿಗೊಳಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸರ್ಕಾರದ ವಿರುದ್ಧ ಸರ್ಕಾರಿ ನೌಕರರು ಸಿಡಿದೆದ್ದಿದ್ದಾರೆ. 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರಿ ನೌಕರರ ಬೇಡಿಕೆಯನ್ನ ಈಡೇರಿಸುವುದಾಗಿ ಭರವಸೆ ನೀಡಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಬರೋಬ್ಬರಿ ಎರಡು ವರ್ಷ ಪೂರೈಸಿದ್ದರು ಸರ್ಕಾರಿ ನೌಕರರಿಗೆ ಸರ್ಕಾರದಿಂದ ಭರವಸೆ ಮಾತ್ರ ಸಿಗುತ್ತಿರುವುದು ನಿರಾಸೆ ಉಂಟು ಮಾಡಿದೆ.
ಇನ್ನೂ 2006ರ ಎಪ್ರಿಲ್ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತ ರಾಜ್ಯಪತ್ರ ಹೊರಡಿಸಿದೆ. ಕೇಂದ್ರ ಸರ್ಕಾರವು ತನ್ನ ನೌಕರರಿಗೆ 2023ರ ಡಿಸೆಂಬರ್ 22ರ ಮೊದಲು ನೇಮಕಾತಿ / ನೇಮಕಾತಿಗಾಗಿ ಜಾಹೀರಾತು / ಅಧಿಸೂಚಿಸಲಾದ ಹುದ್ದೆ ಅಥವಾ ರಿಕ್ತ ಸ್ಥಾನದ ಎದುರಾಗಿ ನೇಮಕಾತಿ ಹೊಂದಿ 2004ರ ಜನವರಿ 1ರಂದು ಅಥವಾ ತದನಂತರ ಕರ್ತವ್ಯಕ್ಕೆ ಸೇರಿದ ನೌಕರರಿಗೆ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಒಂದು ಬಾರಿಯ ಆಯ್ಕೆಯ ಅವಕಾಶವನ್ನು ಕಲ್ಪಿಸಿ ಕೇಂದ್ರ ಸರ್ಕಾರ 2023ರ ಮಾರ್ಚ್ 3 ರಂದು ಮಾರ್ಗಸೂಚಿ ಹೊರಡಿಸಿದೆ. ರಾಜ್ಯ ಸರ್ಕಾರದ ಸೇವೆಯಲ್ಲಿರುವ ಅಖಿಲ ಭಾರತ ಸೇವೆಗೆ ಸೇರಿದ ಅರ್ಹ ಅಧಿಕಾರಿಗಳನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.

ಸರ್ಕಾರ ಎರಡು ವರ್ಷವಾದರೂ ಇನ್ನೂ ಹಳೇ ಪಿಂಚಣಿ ಯೋಜನೆ ಜಾರಿ ಕುರಿತು ಕೇವಲ ಭರವಸೆಯನ್ನಷ್ಟೇ ನೀಡುತ್ತಿದೆ. ಕಳೆದ ಅಧಿವೇಶನದಲ್ಲಿಯೂ ಶೀಘ್ರದಲ್ಲಿ ಈ ಬಗ್ಗೆ ಚರ್ಚಿಸಿ ತಿರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸದನದಲ್ಲಿ ಹೇಳಿದ್ರು, ಇನ್ನೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಹ ಸರ್ಕಾರಿ ನೌಕರರ ಬೇಡಿಕೆಯನ್ನ ಈಡೇರಿಸುವುದಾಗಿ ಹೇಳಿದ್ರು. ಆದರೆ, ಇದುವರೆಗೂ ಭರವಸೆಯೂ ಭರವಸೆಯಾಗಿಯೇ ಉಳಿದಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಆರೋಗ್ಯ ಸಂಜೀವಿನಿ ಬಗ್ಗೆಯೂ ಸೂಕ್ತ ತೀರ್ಮಾನ ಆಗಿದೆ ಎಂದು ತಿಳಿಸಿದರು. ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ದವಿದೆ. ನಿಮ್ಮ ಬೇಡಿಕೆಗಳ ಈಡೇರಿಕೆಗೆ ಸದಾ ತೆರೆದ ಮನಸ್ಸಿನಿಂದ ಇರುತ್ತೇನೆ. ಹಾಗೆಯೇ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು , ಈ ಜವಾಬ್ದಾರಿಯನ್ನೂ ನೀವು ಪರಿಣಾಮಕಾರಿಯಾಗಿ ಜನರಿಗೆ, ಫಲಾನುಭವಿಗಳಿಗೆ ತಲುಪಿಸಿ ಎಂದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications