"ಇವತ್ತಿನವರೆಗೂ ಅತಿ ಹೆಚ್ಚು ಸಾಲ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ"
ಬೆಂಗಳೂರು, ನವೆಂಬರ್ 21: 25 ವಸ್ತುಗಳ ಬೆಲೆ ಏರಿಸಿದ್ದಾರೆ. ವಿದ್ಯುತ್, ಹಾಲು ದರ, ನೋಂದಣಿ ಶುಲ್ಕ, ಪೆಟ್ರೋಲ್, ಡೀಸೆಲ್, ಅಬಕಾರಿ ಸೇರಿ- ಏನೇನಿದೆಯೋ ಅದೆಲ್ಲವೂ ದುಬಾರಿಯಾಗಿದೆ. ಒಂದೇ ವರ್ಷದಲ್ಲಿ ಇಷ್ಟು ಬೆಲೆ ಏರಿಸಿದ ನಂಬರ್ 1 ಪಾಪಿ ಸರ್ಕಾರ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ವಾಗ್ದಾಳಿ ನಡೆಸಿದರು. ಇವತ್ತಿನವರೆಗೂ ಅತಿ ಹೆಚ್ಚು ಸಾಲ (2 ಲಕ್ಷ ಕೋಟಿಗೂ ಹೆಚ್ಚು) ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.
ಇಂದು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಆರ್ ಅಶೋಕ್ ಅವರು, ಇವರು ಬೆಲೆ ಏರಿಕೆ, ಅಕ್ರಮ, ಹಗರಣಗಳ, ಸಾಲ ಮಾಡುವುದರಲ್ಲಿ ಚಾಂಪಿಯನ್ ಎಂದು ಟೀಕಿಸಿದರು. ರೈತರನ್ನು ಸಾಯಿಸುವುದರಲ್ಲಿ ಇವರು ಚಾಂಪಿಯನ್, ಗುತ್ತಿಗೆದಾರರ ಆತ್ಮಹತ್ಯೆಯಲ್ಲಿ ಚಾಂಪಿಯನ್, ಜಾತಿಗಳ ನಡುವೆ ಬೆಂಕಿ ಹಚ್ಚುವುದರಲ್ಲಿ ಚಾಂಪಿಯನ್, ದೆಹಲಿಗೆ ಗರಿಷ್ಠ ಹಣ ಕಳಿಸುವುದರಲ್ಲೂ ಇವರೇ ಚಾಂಪಿಯನ್- ಈ ಥರ ಎರಡೂವರೆ ವರ್ಷದಲ್ಲಿ ನೀವು ಚಾಂಪಿಯನ್ ಆಗಿದ್ದೀರಿ ಎಂದು ವ್ಯಂಗ್ಯವಾಗಿ ನುಡಿದರು.

ನಿಮ್ಮನ್ನು ಸಿಎಂ ಆಗಿ ಆಯ್ಕೆ ಮಾಡಿದ ಶಾಸಕರೇ ನೀವು ಬೇಡ ಎಂದು ದೆಹಲಿಯಲ್ಲಿ ಖರ್ಗೆಯವರನ್ನು ಭೇಟಿ ಮಾಡಿದ್ದಾರೆ. ಇಷ್ಟಿದ್ದರೂ ಕ್ರಾಂತಿ- ಭ್ರಾಂತಿ ಇಲ್ಲವೆಂದು ಸಿದ್ದರಾಮಯ್ಯ ಹೇಳುತ್ತಾರೆ ಎಂದು ಟೀಕಿಸಿದರು. ಶಾಸಕರು ಖರ್ಗೆ ಮನೆಗೆ ವಾಂತಿ ಮಾಡಲು ಹೋಗಿದ್ದರೇ ಎಂದು ಕೇಳಿದರು.ಸಿಎಂ ಬದಲಾವಣೆ ಕಾಂಗ್ರೆಸ್ಸಿನ ಆಂತರಿಕ ವಿಚಾರ. ಎರಡುವರೆ ವರ್ಷದ ಒಪ್ಪಂದ ಆಗಿದೆಯೇ ಇಲ್ಲವೇ ಬೊಗಳಿ ಎಂದು ರಾಜ್ಯದ ಜನತೆ ಕೇಳುತ್ತಿದ್ದಾರೆ. ನಾನು ಇದನ್ನು ಕೇಳುತ್ತಿಲ್ಲ ಎಂದು ಆರ್.ಅಶೋಕ ಅವರು ಪ್ರಶ್ನಿಸಿದರು.
ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿಯವರು 5 ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹೇಳಲಿ. ಅವರೂ ಹೇಳುತ್ತಿಲ್ಲ; ಇವರೂ ಹೇಳುತ್ತಿಲ್ಲ. ಸಿದ್ದರಾಮಯ್ಯ- ಡಿಕೆ ಬಳಿ ಕೇಳಿದರೆ 4 ಗೋಡೆ ಮಧ್ಯೆ ಎನ್ನುತ್ತಾರೆ. 4 ಗೋಡೆ ಮಧ್ಯೆ ಏನಾಗಿದೆ ಎಂದು ಜನರಿಗೆ ತಿಳಿಸಿ ಎಂದು ಆಗ್ರಹಿಸಿದರು. ಕಾಂಗ್ರೆಸ್ ಸರಕಾರ ಹೋಳು; ಜನರ ಪಾಲಿಗೆ ಗೋಳು, ರೈತರಿಗೆ ಹೂಳು ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ ಅವರು ಟೀಕಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಕಾಯಿಲೆ ಬಿದ್ದು ಸೊರಗಿ ಡ್ರಿಪ್ ಹಾಕಿಸಿಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಗೆ ಹೋದವರಿಗೆ 'ಕ್ಯಾಬಿನೆಟ್ನಿಂದ ವಜಾ ಮಾಡುವುದಾಗಿ' ಬೆದರಿಕೆ ಹಾಕಿದ್ದಾರೆ. ಶಾಸಕರ ನಿಧಿ ಕೊಡುವುದಿಲ್ಲ ಎಂದು ಧಮ್ಕಿ ಹಾಕಿರುವುದು ಕೂಡ ಮಾಧ್ಯಮಗಳಲ್ಲಿ ಬರುತ್ತಿದೆ. ಒಂದು ಕಡೆ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗಿ ಎನ್ನುತ್ತಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರು ದೆಹಲಿಗೆ ಯಾಕೆ ಹೋದೆ ಎಂದು ಕೇಳುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಎರಡುವರೆ ವರ್ಷದ ಓಳು ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ಸರಕಾರ ಹೋಳು; ಜನರ ಪಾಲಿಗೆ ಗೋಳು, ರೈತರಿಗೆ ಹೂಳುವ ಪರಿಸ್ಥಿತಿ ತಂದಿದ್ದಾರೆ ಎಂದು ಆರೋಪಿಸಿದರು.
ವರೆ ವರ್ಷ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರಿಗೆ ಪೂರ್ತಿ ವರಿ ತಂದಿದೆ. ರಾಜ್ಯದ ಜನರ ಪಾಲಿಗೆ ಇದು ಬೆಲೆ ಏರಿಕೆಯ ಹೊರೆ, ಜನರಿಗೆ ಬರೆ ಎಂದು ಆಕ್ಷೇಪಿಸಿದರು. ಜಿಎಸ್ಟಿಯನ್ನು ನರೇಂದ್ರ ಮೋದಿಜೀ ಅವರು ಕಡಿಮೆ ಮಾಡಿ, ತುಪ್ಪ ತಿನ್ರಪ್ಪ, ಆರೋಗ್ಯ ಒಳ್ಳೆಯದಾಗಲೆಂದು ಜಿಎಸ್ಟಿ ಪ್ರಮಾಣ ಕಡಿಮೆ ಮಾಡಿದ್ದರು. ಕಾಂಗ್ರೆಸ್ಸಿನವರು ಆ ತುಪ್ಪದ ಮೇಲೂ ದರ ಏರಿಸಿದ್ದಾರೆ ಎಂದು ಆರ್.ಅಶೋಕ ಅವರು ದೂರಿದರು. ತುಪ್ಪಕ್ಕೂ ಕಲ್ಲು ಹಾಕಿದ ಪಾಪಿ ಸರಕಾರ ಇದೆಂದು ಆರೋಪಿಸಿದರು.
-
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ












Click it and Unblock the Notifications