E Khata: ಇ ಖಾತಾ ಲೋಕಾರ್ಪಣೆ; ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಮತ್ತು ಮನೆ ಹಕ್ಕು ಪತ್ರ ವಿತರಣೆ
ಬೆಳಗಾವಿ: ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಸುವರ್ಣಸೌಧದಲ್ಲಿ ಇ-ಖಾತಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳು ಮತ್ತು ಮನೆಯ ಹಕ್ಕುಪತ್ರಗಳ ವಿತರಣೆಗೆ ಸಹ ಅವರು ಚಾಲನೆ ನೀಡಿದರು. ಸಮಾರಂಭದಲ್ಲಿ ಇ ಖಾತಾ ಕೈಪಿಡಿ ಬಿಡುಗಡೆ ಮಾಡಲಾಯಿತು.
ಇದೆ ವೇಳೆ ಬೆಳಗಾವಿಯ 127 ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಪತ್ರ ವಿತರಣೆ ಸಂಬಂಧ ಸಾಂಕೇತಿಕವಾಗಿ 10 ಜನರಿಗೆ ನೇಮಕಾತಿ ಆದೇಶ ಪತ್ರ ನೀಡಲಾಯಿತು. ಅದೇ ರೀತಿ ವಿಜಯಪುರದ ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು. ಅದೇ ರೀತಿ ವಿಜಯಪುರದ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ 60 ಪೌರ ಕಾರ್ಮಿಕರಿಗೆ ಮನೆಯ ಸ್ವಾಧೀನ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಸಮಾರಂಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಸಾರ್ವಜನಿಕರ ಆಸ್ತಿ ದಾಖಲೆಯನ್ನು ಮತ್ತಷ್ಟು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಇ-ಖಾತಾ ಸೇವೆ ಒದಗಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ತಿಳಿಸುವೆ. ನಗರಾಭಿವೃದ್ಧಿ ಮತ್ತು ನಗರ ಯೋಜನೆಯ ಸಚಿವರು ಉತ್ತಮ ಕಾರ್ಯ ಮಾಡಿದ್ದಾರೆ ಎಂದರು. ಪೌರ ಕಾರ್ಮಿಕರ ಸೇವೆ ಅತ್ಯಂತ ಅನನ್ಯವಾಗಿದ್ದು, ಅವರು ನೆಮ್ಮದಿಯಾಗಿರುವಂತೆ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ಮತ್ತು ಮನೆಯ ಹಕ್ಕುಗಳ ಪತ್ರ ವಿತರಣೆ ಮಾಡಿರುವುದು ರಾಜ್ಯ ಸರ್ಕಾರ ಮತ್ತು ಪೌರಾಡಳಿತ ಸಚಿವರ ಉತ್ತಮ ಕಾರ್ಯಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಈ ವೇಳೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಭೈರತಿ ಸುರೇಶ ಅವರು ಮಾತನಾಡಿ, ಇ-ಆಸ್ತಿ ತಂತ್ರಾಂಶದ ಮೂಲಕವೇ ಕಡ್ಡಾಯವಾಗಿ ಇ-ಖಾತಾ ನೀಡಲು 2016ರಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಅದರಂತೆ ರಾಜ್ಯದ 320 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈವರೆಗೆ ಆಸ್ತಿ ಮಾಲೀಕರು ಇ-ಆಸ್ತಿ ತಂತ್ರಾಂಶದ ಮೂಲಕ ಅಂದಾಜು 29 ಲಕ್ಷ ಇ ಆಸ್ತಿಗಳಿಗೆ ಇ-ಖಾತಾ ಪಡೆದಿರುತ್ತಾರೆ. ಈ ಅಭಿಯಾನದ ಮುಂದುವರೆದ ಭಾಗವಾಗಿ ಇ-ಆಸ್ತಿ ತಂತ್ರಾಂಶವನ್ನು ಸರಳೀಕರಣಗೊಳಿಸಲಾಗಿದೆ. ಆಸ್ತಿ ಮಾಲೀಕರು ಯಾವುದೇ ಮಧ್ಯವರ್ತಿಗಳಿಲ್ಲದೇ ಹಾಗೂ ಯಾವುದೇ ಅಧಿಕಾರಿ ಸಿಬ್ಬಂದಿಯನ್ನು ಸಂಪರ್ಕಿಸದೇ ತಮ್ಮ ಮನೆಯಲ್ಲಿ ಕುಳಿತು ಸರಳವಾಗಿ ಸುಲಭವಾಗಿ ಇ-ಖಾತಾ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ಈ ಗೃಹಭಾಗ್ಯ ಯೋಜನೆಗೆ ಒಟ್ಟು 6119 ಫಲಾನುಭವಿಗಳನ್ನು ಗುರುತಿಸಲಾಗಿದೆ. ರಾಜ್ಯ ಸರ್ಕಾರ ಇದಕ್ಕಾಗಿ 326 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದ್ದು, ಇದುವರೆಗೆ 4159 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಬೆಳಗಾವಿಯಲ್ಲಿ 172 ಮತ್ತು ವಿಜಯಪುರದಲ್ಲಿ 133 ಮನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಪೌರಕಾರ್ಮಿಕರ ವಿಶೇಷ ನೇಮಕಾತಿ: ಪೌರಕಾರ್ಮಿಕರ ಹೊರಗುತ್ತಿಗೆ ಪದ್ಧತಿಯನ್ನು 2017 ರಲ್ಲಿ ಸ್ಥಗಿತಗೊಳಿಸಿ, ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದವರಿಗೆ ವಿಶೇಷ ನೇಮಕಾತಿಯಡಿ ಅವಕಾಶ ನೀಡಲಾಗುತ್ತಿದೆ. ವಿವಿಧ ಹಂತಗಳಲ್ಲಿ ಸಾವಿರಾರು ಪೌರಕಾರ್ಮಿಕರ ನೇಮಕಕ್ಕೆ ಅನುಮತಿ ನೀಡಲಾಗಿದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 127 ಮತ್ತು ವಿಜಯಪುರದಲ್ಲಿ 66 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಿರುವುದು ಸಂತಸದ ವಿಚಾರ. ಇನ್ನೂ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ರಾಜ್ಯದ ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗಣಿಕೀಕೃತ ಖಾತಾ ನೀಡುವ ಉದ್ದೇಶದಿಂದ 2016 ರಿಂದ ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾ ನೀಡುವ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ. 2019 ರಿಂದ ಮಹಾನಗರಪಾಲಿಕೆಗಳಲ್ಲಿ ಇದನ್ನು ಕಡ್ಡಾಯಗೊಳಿಸಲಾಗಿದೆ. ಇದುವರೆಗೆ ರಾಜ್ಯಾದ್ಯಂತ ಸುಮಾರು 29 ಲಕ್ಷ ಇ-ಖಾತಾಗಳನ್ನು ಸೃಜಿಸಲಾಗಿದೆ. ಇದರಲ್ಲಿ 25,03,385 ಎ-ಖಾತಾ ಮತ್ತು 4,39,889 ಬಿ-ಖಾತಾಗಳು ಸೇರಿವೆ ಎಂದರು.
-
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್











Click it and Unblock the Notifications